ನಾಚಿಕೆಯೆ ಹೀಗೇಕೆ ಹಗೆಯಾಯಿತು

ನಾಚಿಕೆಯೆ ಹೀಗೇಕೆ ಹಗೆಯಾಯಿತು
ನನ್ನ ಉರಿಸುವ ಕ್ರೂರ ಧಗೆಯಾಯಿತು?

ಹರಿಯು ತಬ್ಬಿದ್ದಾಗ ಅವನ ಚೆಲುವ
ನೋಡುತ್ತ ಬೆರಗಾಗಿ ಮೂಕಳಾದೆ
ನಿನ್ನ ಜೊತೆ ಮಧುರೆಗೆ ನಾನು ಕೂಡ
ಬರುವೆ ಎಂದೇಕೆ ನಾ ಹೇಳದಾದೆ?

ಏನು ನಿಷ್ಕರುಣಿ ಆ ಕಂಸದೂತ!
ಅಕ್ರೂರನಲ್ಲ ಅವ ಕ್ರೂರದೂತ
ಗೋಕುಲದ ನಿಧಿಯನೇ ಕೊಂಡುಹೋದ
ಹಾಲಗಡಿಗೆಗೆ ಹುಳಿಯ ಹಿಂಡಿ ಹೋದ

ಗೋಕುಲದ ಆತ್ಮ ಈ ನೆಲವ ತೊರೆದು
ಹೋಗುವಾಗೇಕೆ ನಾ ಹಾಗೆ ನಿಂತೆ?
ಹರಿಯ ವಿರಹದಿ ಸೀಳಿಹೋದ ಹೃದಯ
ಉರಿಯುತಿದೆ ಎಂದಿಗೂ ಮಾಯದಂತೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೮
Next post ಕಲ್ಯಾಣ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

cheap jordans|wholesale air max|wholesale jordans|wholesale jewelry|wholesale jerseys