ಕೃಷ್ಣ ನಮ್ಮ ಈ ಗೋಕುಲಕೆ

ಕೃಷ್ಣ ನಮ್ಮ ಈ ಗೋಕುಲಕೆ
ಬಂದುದೇಕೆ ಗೊತ್ತೇ?
ನಮ್ಮ ಒಳಗಿನ ಮಿಂಚನು ಭೂಮಿಗೆ
ಇಳಿಸಿ ಹೊಳೆಸಲಿಕ್ಕೆ

ಬಾನಿನ ಬೆಳಕಿಗೆ ಭೂಮಿಯ ತಮವ
ಗುಡಿಸಿ ಹಾಕುವಂಥ
ಬಲವಿದೆ, ಹಾಗೇ ಒಲವಿದೆ ನಮ್ಮೊಳು
ಸ್ವಾರ್ಥವ ಗೆಲುವಂಥ

ತೆತ್ತುಕೊಳ್ಳುವ ಪ್ರೇಮವೆ ಸಾಲದು
ಬಾಳಿನ ಸಂತಸಕೆ
ತುತ್ತುಗೊಳ್ಳುವ ಬೆಳಕೂ ಬೇಕು
ಪ್ರೀತಿಯ ಪೂರ್ಣತೆಗೆ
ಕೃಷ್ಣನ ತಬ್ಬಿ ಬಿಡಿಸಿಕೊಂಡೆವು
ಎಲ್ಲ ಮಾಯೆಯಿಂದ
ಕೊಳಲು ನುಡಿಸಲು ತುಂಬಿಹೋಯಿತು
ಬದುಕು ರಾಗದಿಂದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಂಚುಳ್ಳಿ ಬೆಳಕಿಂಡಿ – ೯
Next post ವಿಶ್ವಲೀಲೆ

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys