Home / ಕವನ / ಕವಿತೆ / ಶಾಂಡಿಲೀಯರ್

ಶಾಂಡಿಲೀಯರ್

ನಡುರಾತ್ರಿಗೆ ಇನ್ನೇನು ಸ್ವಲ್ಪೇ ಸಮಯ –
ಮೇಜುವಾನಿಯ ಸಿಹಿ ಕಹಿಯಾಗಿ
ದೀಪ ಗುಚ್ಛಗಳೆಲ್ಲ ಚಿಲ್ಲಾಪಿಲಿಗಿಯಾಗುತ್ತವೆಂದು
ಯಾರಿಗೂ ಗೊತ್ತಿರಲಿಲ್ಲ.

ಮುಗುಳು ನಗುತ ನಿಸರ್ಗದಲಿ
ಅದ್ದಿ ಬಿಡುವ ನೇಪಾಳ
ಎಷ್ಟೊಂದು ಸಂತಸ ಸಡಗರ ಅರಮನೆಯೊಳಗೆ
ದೊರೆ ಬೀರೇಂದ್ರ ರಾಣಿ ಐಶ್ವರ್ಯ
ಯುವರಾಜ ದೀಪೇಂದ್ರ
ಎಂತೆಂತಹ ರತ್ನಗಳು
ಕಾಠ್ಮಂಡು ಒಡ್ಡೋಲಗಕೆ

ರಾಜಗಾಂಭೀರ್ಯದ ಹುಡುಗಿ ತರುವ ಆಸೆ
ರಾಜಮಾತೆಗೆ,
ಪ್ರೀತಿಸಿದ ಹುಡುಗಿ ಬೇಕೇ ಬೇಕು
ಮೀಸೆ ಮೂಡಿದೆ ಮದೋನ್ಮತ್ತ
ಯುವರಾಜನಿಗೆ.
ಮಾತಿಗೆ ಮಾತು ವರಸೆ ಬೆಂಕಿ.

ವಿಧಿಯೋ ವಿಚಿತ್ರ,
ಪ್ರೇಮದೈಸಿರಿಗೆ ಕಳಚಿಕೊಳ್ಳದ ಸಂಕೋಲೆ,
ಮಾತು ಚರ್ಚೆಗಳಿಗೆಲ್ಲ ಆವೇಶ
ಗುಂಡಿಗೆಯ ರಕ್ತದ ದುಡುಕುತನಕೆ
ಕಿಚ್ಚುಹೊತ್ತಿ ಸುಡುವ ಕೆನ್ನಾಲಿಗೆ.

ಕಾಲನ ಅವೇಶದ ಮುಂದೆ
ಮತಿಹೀನ ಯುವಕ
ರಾಜಗಾಂಭೀರ್ಯ ಧಿಕ್ಕರಿಸಿದ್ದು
ಯಮನ ಅಟ್ಟಹಾಸಕೆ ಕುಮ್ಮಕ್ಕು
ಕಗ್ಗತ್ತಲೆಯ ಕೆಸರಲಿ ಸಿಕ್ಕ ಕಾಲಕ್ಕೆ
ಚಲಿಸದ ಜಡತ್ವ.

ದವಡೆಮೀರಿದ ಕೋಪಾಗ್ನಿಯಲಿ
ಯುವರಾಜ ಕೈಗೆತ್ತಿದ ಬಂದೂಕು
ನುಗ್ಗಿ ನುಗ್ಗಿ ಬಂದ ಗುಂಡಿನಮಳೆಗೆ
ಒಂದೊಂದೇ ಕಳಚಿದವು
ಕಿರೀಟ ರತ್ನಗಳು,
ನೆತ್ತರ ಮಡುವಿನಲಿ ಮುಳುಗಿ
ಕಗ್ಗತ್ತಲ ಕಣಿವೆಯಲಿ ಹೆಣವಾದವು

ನೇಪಾಳದ ಅಂಗಳದ ತುಂಬೆಲ್ಲ
ರಕ್ತದೋಕುಳಿ ಕಿರುಚಾಟ ಹಾಲಾಹಲ
ಅರಮನೆಯ ದೀಪಗಳೆಲ್ಲ ಒಡೆದು ನುಚ್ಚುನೂರು
ಸುತ್ತೆಲ್ಲ ಕಪ್ಪು ಕತ್ತಲೆ!

(ದೇವಯಾನಿ ರಾಣಾಳ ಪ್ರೇಮಪಾಶಕ್ಕೆ ಸಿಲುಕಿದ ನೇಪಾಳದ ಯುವರಾಜ ಅವಿವೇಕಿಯಾಗಿ ಗುಂಡು ಹಾರಿಸಿ ಎಲ್ಲರನ್ನೂ ಕೊಂದು ತಾನೂ ಸತ್ತುಹೋದ)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...