Home / ಕವನ / ಕವಿತೆ / ಹುಡುಕಾಟ

ಹುಡುಕಾಟ

ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ
ಹೂಗಾರ ಹೂವಾಡಗಿತ್ತಿಯರ ಹೊಗಳಿಕೆಯಲಿ
ನಾನು ಮರುಳಾಗಿ ಕೊಳ್ಳುವವನೇ ಅಲ್ಲ

ಮನೆಯಂಗಳದ ಹೂವು, ಹೂದೋಟದ ಹೂವು
ಬೆಟ್ಟದ ಹೂವು, ಕೊಳ್ಳದ ಹೂವು,
ಏರ್ ಕಂಡೀಶನ್ ಹೂವು, ಬಣ್ಣವಾಸನೆಗಳ ಹೂವು,
ಎಷ್ಟೊಂದು ಹೂವುಗಳು- ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ-

ಸುಳಿ ಸುಳಿಗೆ ಸಿಕ್ಕು ಅರಳದೇ ಉಳಿದ
ಬಿಸಿ ಬಿಸಿಲಿಗೆ ಸುಟ್ಟು ಹೂವಾಗಲು ಹಂಬಲಿಸಿದ
ನೀರು ಬೆಳಕಿಲ್ಲದೆ ಗಾಳಿ ಮೋಡಗಳೊಡನೆ
ಹನಿ ಮುತ್ತು ಚೆಲ್ಲಿ ಮಾತಾಡಿ ತತ್ತರಿಸಿದ
ತಲ್ಲಣಿಸಿದ ಹೂವು ಇಲ್ಲೆಲ್ಲಾದರೂ ಇದೆಯೇ
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ.

ನನ್ನೊಲುವಿನ ಹೂವು ಎಲ್ಲೋ ಇದೆ
ಸರಿ ಸಾಟಿಯಾಗಬಲ್ಲ ಹೆಸರೊಂದೂ ಗೊತ್ತಿಲ್ಲ
ನೋವು ನಲಿವಿನಲಿ, ದುಃಖ ದುಮ್ಮಾನಗಳಲಿ
ಮುಳ್ಳುಗಳನೆಲ್ಲ ಕಳಚಿ ನಗುತ ಬೆರೆವ
ನನ್ನೆದೆಯ ಗೂಡಿನ ಹೂವು ಎಲ್ಲಾದರೂ ಇದೆಯೇ!
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ.

ಸುತ್ತೆಲ್ಲ ಮುಳ್ಳುತುಂಬಿದ ಹೆಸರು ಬಣ್ಣಿಲ್ಲದ
ಹೂವಿಗೆ ಕಾತರಿಸಿ ಬಯಸಿ ಕಾದಿರುವೆ
ಅದರೊಂದಿಗೆ ಸೇರಿ ಉಸಿರು ಬೆರೆಸಿ
ಮಿಂಚು ಹರಿಸಿ ಮೋಡ  ಸುರಿಸಿ
ಬಣ್ಣ ಸುಗಂಧ ತುಂಬಿ ನನ್ನೆದೆಯ
ತುಡಿತಕೆ ರಾಣಿಯಾಗುವ ಹೂವ
ಹುಡುಕಿ ಹುಡುಕಿ ಹೊರಟಿದ್ದೇನೆ ಅಲ್ಲಲ್ಲಿ-
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಸಿಗಲಿಲ್ಲ.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...