Home / ಕವನ / ಕವಿತೆ / ಹುಡುಕಾಟ

ಹುಡುಕಾಟ

ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ
ಹೂಗಾರ ಹೂವಾಡಗಿತ್ತಿಯರ ಹೊಗಳಿಕೆಯಲಿ
ನಾನು ಮರುಳಾಗಿ ಕೊಳ್ಳುವವನೇ ಅಲ್ಲ

ಮನೆಯಂಗಳದ ಹೂವು, ಹೂದೋಟದ ಹೂವು
ಬೆಟ್ಟದ ಹೂವು, ಕೊಳ್ಳದ ಹೂವು,
ಏರ್ ಕಂಡೀಶನ್ ಹೂವು, ಬಣ್ಣವಾಸನೆಗಳ ಹೂವು,
ಎಷ್ಟೊಂದು ಹೂವುಗಳು- ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ-

ಸುಳಿ ಸುಳಿಗೆ ಸಿಕ್ಕು ಅರಳದೇ ಉಳಿದ
ಬಿಸಿ ಬಿಸಿಲಿಗೆ ಸುಟ್ಟು ಹೂವಾಗಲು ಹಂಬಲಿಸಿದ
ನೀರು ಬೆಳಕಿಲ್ಲದೆ ಗಾಳಿ ಮೋಡಗಳೊಡನೆ
ಹನಿ ಮುತ್ತು ಚೆಲ್ಲಿ ಮಾತಾಡಿ ತತ್ತರಿಸಿದ
ತಲ್ಲಣಿಸಿದ ಹೂವು ಇಲ್ಲೆಲ್ಲಾದರೂ ಇದೆಯೇ
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ.

ನನ್ನೊಲುವಿನ ಹೂವು ಎಲ್ಲೋ ಇದೆ
ಸರಿ ಸಾಟಿಯಾಗಬಲ್ಲ ಹೆಸರೊಂದೂ ಗೊತ್ತಿಲ್ಲ
ನೋವು ನಲಿವಿನಲಿ, ದುಃಖ ದುಮ್ಮಾನಗಳಲಿ
ಮುಳ್ಳುಗಳನೆಲ್ಲ ಕಳಚಿ ನಗುತ ಬೆರೆವ
ನನ್ನೆದೆಯ ಗೂಡಿನ ಹೂವು ಎಲ್ಲಾದರೂ ಇದೆಯೇ!
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಇಲ್ಲಿಲ್ಲ.

ಸುತ್ತೆಲ್ಲ ಮುಳ್ಳುತುಂಬಿದ ಹೆಸರು ಬಣ್ಣಿಲ್ಲದ
ಹೂವಿಗೆ ಕಾತರಿಸಿ ಬಯಸಿ ಕಾದಿರುವೆ
ಅದರೊಂದಿಗೆ ಸೇರಿ ಉಸಿರು ಬೆರೆಸಿ
ಮಿಂಚು ಹರಿಸಿ ಮೋಡ  ಸುರಿಸಿ
ಬಣ್ಣ ಸುಗಂಧ ತುಂಬಿ ನನ್ನೆದೆಯ
ತುಡಿತಕೆ ರಾಣಿಯಾಗುವ ಹೂವ
ಹುಡುಕಿ ಹುಡುಕಿ ಹೊರಟಿದ್ದೇನೆ ಅಲ್ಲಲ್ಲಿ-
ಎಷ್ಟೊಂದು ಹೂವುಗಳು ಈ ಪೇಟೆಯಲಿ
ಆದರೂ ನನಗೆ ಬೇಕಾದ ಹೂವು ಸಿಗಲಿಲ್ಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...