Home / ಕವನ / ಕವಿತೆ / ಸತ್ಯದ ನೆತ್ತಿಯ ಮೇಲೆ

ಸತ್ಯದ ನೆತ್ತಿಯ ಮೇಲೆ

ಸತ್ತು ಬಿದ್ದಿದ್ದಾನೆ ಒಬ್ಬ VIP
ಬೆಳ್ಳಂ ಬೆಳಗಾಗುವುದರಲ್ಲಿ
ಆತ ಯಾರೇ ಇರಲಿ
ದೊಡ್ಡ ಆಫೀಸರ್ ಬಿಸಿನೆಸ್‌ಮ್ಯಾನ್
ರಾಜಕಾರಣಿ ಸಾಹಿತಿಯೂ ಇರಬಹುದು
ನೀವು ತಿಳಿದುಕೊಂಡಂತೆ.

ಕುಡಿಯುವದು ಹೆಣ್ಣುಗಳಿಗೆ ಬೆನ್ನುಹತ್ತುವದು
ಅದು ಅವನಿಗೆ ಕೆಟ್ಟ ಚಟ ಇತ್ತಂತೆ
ಹೆಂಡತಿ ಒಣ ಕಣ್ಣು ಒತ್ತಿ ಒತ್ತಿ ಹೇಳಿ
ಏನೇನೊ? ತೋಡಿಕೊಳ್ಳುತ್ತಾಳೆ.

ಅವನು ಒಂದು ರಾತ್ರಿ ಕುಡಿಯುವ
ಜಾನಿವಾಕರ್ ವೊಡ್ಕಾದ ಹಣದಲ್ಲಿ
ಅವನ ಹಳ್ಳಿಯ ಹತ್ತು ಜನರ ಮದುವೆಮಾಡಿ
ಪುಣ್ಯಕಟ್ಟಿಕೊಳ್ಳಬಹುದಿತ್ತಂತೆ.

ಅವನು ಮಾಡುವ ಭರ್ಜರಿ ಪಾರ್ಟಿಖರ್ಚಿನಲಿ
ಅವನೂರಿನ ದೇವರ ಜಾತ್ರೆ
ಅದ್ದೂರಿಯಾಗಿ ಮಾಡಿ ಸಾವಿರ ಜನರಿಗೆ
ಉಣಬಡಿಸಬಹುದಿತ್ತಂತೆ.

ಅವನು ಬೆನ್ನುಹತ್ತುವ ಹೆಣ್ಣುಗಳನೆಲ್ಲ
ಸೋದರಿಯಂತೆ ನೋಡಿಕೊಂಡಿದ್ದರೆ
ಅವರವರು ಮರ್ಯಾದೆಯಾಗಿದ್ದು
ಸಂಸಾರಸ್ಥೆಯರಾಗಿರುತ್ತಿದ್ದರಂತೆ.

ಏರಿಳಿಕೆಯ ಧ್ವನಿಯಲ್ಲೂ
ಸರಳವಾಗಿ ಉದುರುವ ಮಾತುಗಳು.
ಮೌನ ಬಂಗಾರ ಎಂದು ಗೊತ್ತಿದ್ದರೂ
ಹಿತ್ತಾಳೆ ಮಾಡಿ ಕಿಲುಬಲು ಬಿಟ್ಟ
ಗೋಳಾಡಿದಳು.
ಕಾಡು ಬೆಕ್ಕು ಎನ್ನಲೇ
ತೊಂಡರಗೂಳಿ ಎನ್ನಲೇ
ಕಿಡಿಕಿಡಿಯಾಗುತ್ತಿದ್ದಳು.

ಮಧ್ಯರಾತ್ರಿಯ ಮದಿರಾಣಿಯರು
ಗುಂಡು ಇಳಿಸುವ ಗಂಡಬೇರುಂಡರ
ತೆಕ್ಕೆಗಳ ಸುಖ ಹರಡುತ್ತಲೇ ಇದ್ದಷ್ಟು
ಹೀಗೆಽ ಅಗಾಗ
ಸತ್ತು ಬೀಳುತ್ತಾರೆ ಬಿಡಿ…
——–
‘ಮನುಷ್ಯನ ಗುಣ ಮನಸ್ಸು ಹಿನ್ನೆಲೆಗಳನ್ನು ಅವನ ನಡೆ ನುಡಿಗಳೇ ವಿಶದವಾಗಿ ತಿಳಿಸುತ್ತವೆ’ – ರಾಮಾಯಣ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...