ಮರದ ವ್ಯಥೆ

ನಿಮ್ಮ ಮನೆಯಂಗಳಕೆ ಗುಲಾಬಿ
ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ
ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ.

ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ
ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ
ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು.
ಬೆಳೆಯುತ್ತಿದ್ದೇನೆ ನಿಮ್ಮ ಮಕ್ಕಳನು
ನೋಡುತ್ತಾ ಆಟ ಆಡುತ್ತಾ,
ಮೈಲಿಗೆ ಅಸಮಾನತೆ ಅನಿಸಿತೋ
ಕೈ ಕತ್ತರಿಸಿದ್ದೀರಿ
ಪೋಲಿ ಹುಡುಗರು ಮತ್ತೊಂದು ಕೈ ಮುರಿದರು.
ಆದರೂ ಮತ್ತೆ ಚಿಗುರಿ ಮರವಾಗಿ ಬೆಳೆದು
ನೆರಳು ಕೊಡುವ ಕನಸುಕಣ್ಣಿನ ಮರ ನಾನು.

ನಾಯಿಹಂದಿಗಳ ಕಚ್ಚಾಟದ ನಡುವೆ
ವಿಷಹೊಗೆಯ ಒದೆತಗಳು ತಿನ್ನುತ
ಬೆಳೆಯುತ್ತಿದ್ದೇನೆ ಇಕ್ಕಟ್ಟಾದ ರಸ್ತೆಯ ಎಡಬಲಕೆ.

ಆದರೇನು!-
ವಿದ್ಯುತ್ ಇಲಾಖೆಯವ ಕಠಿಣ ಹೃದಯಿ
ಕೆಳಗೆ ಕೆಬಲ್‌ಗೆಂದು ಕಾಲುಬೆರಳುಗಳು ಕತ್ತರಿಸಿ
ಮೇಲೆ ತೋಳು ತೋಳುಗಳೂ ಕತ್ತರಿಸಿದ
ಹೃದಯವಂತ ಭಕ್ತರೂ ಕೂಡಾ
ಗಣೇಶ ಮೆರವಣಿಗೆಯ ಲಾರಿಗೆ
ಅಡ್ಡ ಎಂದು ಮತ್ತೆ ಮತ್ತೆ ಮುರಿದು ಎಸಿಯುವದೆ?

ಉರುವಲಕೆ ಲಟಲಟನೆ
ಮುರಿಯುವ ಕೆಲವರ ಖುಷಿಯೊಳಗೆ
ನನ್ನುಸಿರ ಸುಡುವುದು ಗೊತ್ತಾದೀತೆ?

ಈಗ,
ಬಳಲಿ ಬಳಲಿ ಕೃಶವಾಗಿ
ಆಕಾಶಕ್ಕೆ ಮೊರೆಯಿಡುತ್ತ ಮೇಲೇರುತ್ತಿದ್ದರೆ
ಅಲ್ಲಿಯೂ ಗಾಳಿದೇವನ ಹೊಡೆತವೆ?
ಎಷ್ಟೊಂದು ಸಹಿಸಲಿ ನಾನು?
ನಿಮ್ಮ ಮನೆಯ ಮೇಲೆ
ಸ್ಕೂಟರ್ ಕಾರ್ ಕಂಪೌಂಡುಗಳ ಮೇಲೆ
ಬಿದ್ದದ್ದು ನಿಮಗೂ ಒಂದಿಷ್ಟು ಪೆಟ್ಟು ಕೊಟ್ಟದ್ದು
ನನಗೂ ವ್ಯಥೆ, ಹೇಳಿ ಏನು ಮಾಡಲಿ ನಾನು
ನೀವೇ ಮಾಡಿದ್ದು
ಮಾಡಿದ್ದುಣ್ಣೋ ಮಹಾರಾಯಾ.

ಒಂದೈದು ನಿಮಿಷ ಬನ್ನಿ ಬನ್ನಿ
ನಿಮ್ಮ ಕಂಪೌಂಡಿಗೆ, ಸುಂದರ ಟೆರಸ್ಸಿಗೂ
ಅಂಗಾಂಗ ಕೊಚ್ಚಿ ಕೊಚ್ಚಿ ಹಾಕಿ
ಮೊಂಡು ಮಾಡಿದ ಈ
ಕುಷ್ಟರೋಗಿಯನ್ನೋ ಕುಂಟನನ್ನೋ ನೋಡಲು.
ಕಾಡಿನಲಿ ಹುಟ್ಟಿಬೆಳೆದರೂ
ಬಿಡುವುದಿಲ್ಲ ಬಿಡಿ ನೀವು
ಬೆಂಕಿ ಹಚ್ಚುವದು, ಬೇರು ಸಮೇತ ಉರುಳಿಸಿ
ನಿಮ್ಮ ಮನೆಗೆ ಬಾಗಿಲುಮಾಡಿ
ನೀವು ಭಧ್ರವಾಗಿದ್ದು
ನಮ್ಮನ್ನು ಅಭಧ್ರವಾಗಿಸುವವರು.

ದೇವರೇ ಕ್ಷಮಿಸು ಮನುಷ್ಯರನು
ಕಲಿಸು ಪ್ರೀತಿ ಶಾಂತಿ ಸಹನೆ!
————————
‘ಹಿಂದೆ ಬಂದರೆ ಒದಯಬೇಡಿ ಮುಂದೆ ಬಂದರೆ ಹಾಯಬೇಡಿ’- ಗೋವಿನ ಹಾಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿ ಜನ್ಯ
Next post ಅಂತರ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

cheap jordans|wholesale air max|wholesale jordans|wholesale jewelry|wholesale jerseys