ಮರದ ವ್ಯಥೆ

ನಿಮ್ಮ ಮನೆಯಂಗಳಕೆ ಗುಲಾಬಿ
ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ
ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ.

ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ
ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ
ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು.
ಬೆಳೆಯುತ್ತಿದ್ದೇನೆ ನಿಮ್ಮ ಮಕ್ಕಳನು
ನೋಡುತ್ತಾ ಆಟ ಆಡುತ್ತಾ,
ಮೈಲಿಗೆ ಅಸಮಾನತೆ ಅನಿಸಿತೋ
ಕೈ ಕತ್ತರಿಸಿದ್ದೀರಿ
ಪೋಲಿ ಹುಡುಗರು ಮತ್ತೊಂದು ಕೈ ಮುರಿದರು.
ಆದರೂ ಮತ್ತೆ ಚಿಗುರಿ ಮರವಾಗಿ ಬೆಳೆದು
ನೆರಳು ಕೊಡುವ ಕನಸುಕಣ್ಣಿನ ಮರ ನಾನು.

ನಾಯಿಹಂದಿಗಳ ಕಚ್ಚಾಟದ ನಡುವೆ
ವಿಷಹೊಗೆಯ ಒದೆತಗಳು ತಿನ್ನುತ
ಬೆಳೆಯುತ್ತಿದ್ದೇನೆ ಇಕ್ಕಟ್ಟಾದ ರಸ್ತೆಯ ಎಡಬಲಕೆ.

ಆದರೇನು!-
ವಿದ್ಯುತ್ ಇಲಾಖೆಯವ ಕಠಿಣ ಹೃದಯಿ
ಕೆಳಗೆ ಕೆಬಲ್‌ಗೆಂದು ಕಾಲುಬೆರಳುಗಳು ಕತ್ತರಿಸಿ
ಮೇಲೆ ತೋಳು ತೋಳುಗಳೂ ಕತ್ತರಿಸಿದ
ಹೃದಯವಂತ ಭಕ್ತರೂ ಕೂಡಾ
ಗಣೇಶ ಮೆರವಣಿಗೆಯ ಲಾರಿಗೆ
ಅಡ್ಡ ಎಂದು ಮತ್ತೆ ಮತ್ತೆ ಮುರಿದು ಎಸಿಯುವದೆ?

ಉರುವಲಕೆ ಲಟಲಟನೆ
ಮುರಿಯುವ ಕೆಲವರ ಖುಷಿಯೊಳಗೆ
ನನ್ನುಸಿರ ಸುಡುವುದು ಗೊತ್ತಾದೀತೆ?

ಈಗ,
ಬಳಲಿ ಬಳಲಿ ಕೃಶವಾಗಿ
ಆಕಾಶಕ್ಕೆ ಮೊರೆಯಿಡುತ್ತ ಮೇಲೇರುತ್ತಿದ್ದರೆ
ಅಲ್ಲಿಯೂ ಗಾಳಿದೇವನ ಹೊಡೆತವೆ?
ಎಷ್ಟೊಂದು ಸಹಿಸಲಿ ನಾನು?
ನಿಮ್ಮ ಮನೆಯ ಮೇಲೆ
ಸ್ಕೂಟರ್ ಕಾರ್ ಕಂಪೌಂಡುಗಳ ಮೇಲೆ
ಬಿದ್ದದ್ದು ನಿಮಗೂ ಒಂದಿಷ್ಟು ಪೆಟ್ಟು ಕೊಟ್ಟದ್ದು
ನನಗೂ ವ್ಯಥೆ, ಹೇಳಿ ಏನು ಮಾಡಲಿ ನಾನು
ನೀವೇ ಮಾಡಿದ್ದು
ಮಾಡಿದ್ದುಣ್ಣೋ ಮಹಾರಾಯಾ.

ಒಂದೈದು ನಿಮಿಷ ಬನ್ನಿ ಬನ್ನಿ
ನಿಮ್ಮ ಕಂಪೌಂಡಿಗೆ, ಸುಂದರ ಟೆರಸ್ಸಿಗೂ
ಅಂಗಾಂಗ ಕೊಚ್ಚಿ ಕೊಚ್ಚಿ ಹಾಕಿ
ಮೊಂಡು ಮಾಡಿದ ಈ
ಕುಷ್ಟರೋಗಿಯನ್ನೋ ಕುಂಟನನ್ನೋ ನೋಡಲು.
ಕಾಡಿನಲಿ ಹುಟ್ಟಿಬೆಳೆದರೂ
ಬಿಡುವುದಿಲ್ಲ ಬಿಡಿ ನೀವು
ಬೆಂಕಿ ಹಚ್ಚುವದು, ಬೇರು ಸಮೇತ ಉರುಳಿಸಿ
ನಿಮ್ಮ ಮನೆಗೆ ಬಾಗಿಲುಮಾಡಿ
ನೀವು ಭಧ್ರವಾಗಿದ್ದು
ನಮ್ಮನ್ನು ಅಭಧ್ರವಾಗಿಸುವವರು.

ದೇವರೇ ಕ್ಷಮಿಸು ಮನುಷ್ಯರನು
ಕಲಿಸು ಪ್ರೀತಿ ಶಾಂತಿ ಸಹನೆ!
————————
‘ಹಿಂದೆ ಬಂದರೆ ಒದಯಬೇಡಿ ಮುಂದೆ ಬಂದರೆ ಹಾಯಬೇಡಿ’- ಗೋವಿನ ಹಾಡು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿ ಜನ್ಯ
Next post ಅಂತರ

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…