Home / ಕವನ / ಕವಿತೆ / ಮರದ ವ್ಯಥೆ

ಮರದ ವ್ಯಥೆ

ನಿಮ್ಮ ಮನೆಯಂಗಳಕೆ ಗುಲಾಬಿ
ಮಲ್ಲಿಗೆ ಗಿಡವಾಗಿ ಬೆಳೆದಿದ್ದರೆ
ನಿಮ್ಮ ಉಡಿಯಲಿ ಬೆಚ್ಚಗಿರುತ್ತಿದ್ದೆ.

ಬೆಳೆದಿದ್ದೇನೆ, ಅಲ್ಲಲ್ಲ-ಬೆಳೆಸಿದ್ದಾರೆ
ಕಾರ್ಪೊರೇಶನ್‌ದವರು ನಿಮ್ಮ ಕಂಪೌಂಡಿನ ಹೊರಗೆ
ಅದಕ್ಕೆ ನಾನು ನಿಮ್ಮ ಮಗುವಲ್ಲವೆಂದು ಗೊತ್ತಾದುದು.
ಬೆಳೆಯುತ್ತಿದ್ದೇನೆ ನಿಮ್ಮ ಮಕ್ಕಳನು
ನೋಡುತ್ತಾ ಆಟ ಆಡುತ್ತಾ,
ಮೈಲಿಗೆ ಅಸಮಾನತೆ ಅನಿಸಿತೋ
ಕೈ ಕತ್ತರಿಸಿದ್ದೀರಿ
ಪೋಲಿ ಹುಡುಗರು ಮತ್ತೊಂದು ಕೈ ಮುರಿದರು.
ಆದರೂ ಮತ್ತೆ ಚಿಗುರಿ ಮರವಾಗಿ ಬೆಳೆದು
ನೆರಳು ಕೊಡುವ ಕನಸುಕಣ್ಣಿನ ಮರ ನಾನು.

ನಾಯಿಹಂದಿಗಳ ಕಚ್ಚಾಟದ ನಡುವೆ
ವಿಷಹೊಗೆಯ ಒದೆತಗಳು ತಿನ್ನುತ
ಬೆಳೆಯುತ್ತಿದ್ದೇನೆ ಇಕ್ಕಟ್ಟಾದ ರಸ್ತೆಯ ಎಡಬಲಕೆ.

ಆದರೇನು!-
ವಿದ್ಯುತ್ ಇಲಾಖೆಯವ ಕಠಿಣ ಹೃದಯಿ
ಕೆಳಗೆ ಕೆಬಲ್‌ಗೆಂದು ಕಾಲುಬೆರಳುಗಳು ಕತ್ತರಿಸಿ
ಮೇಲೆ ತೋಳು ತೋಳುಗಳೂ ಕತ್ತರಿಸಿದ
ಹೃದಯವಂತ ಭಕ್ತರೂ ಕೂಡಾ
ಗಣೇಶ ಮೆರವಣಿಗೆಯ ಲಾರಿಗೆ
ಅಡ್ಡ ಎಂದು ಮತ್ತೆ ಮತ್ತೆ ಮುರಿದು ಎಸಿಯುವದೆ?

ಉರುವಲಕೆ ಲಟಲಟನೆ
ಮುರಿಯುವ ಕೆಲವರ ಖುಷಿಯೊಳಗೆ
ನನ್ನುಸಿರ ಸುಡುವುದು ಗೊತ್ತಾದೀತೆ?

ಈಗ,
ಬಳಲಿ ಬಳಲಿ ಕೃಶವಾಗಿ
ಆಕಾಶಕ್ಕೆ ಮೊರೆಯಿಡುತ್ತ ಮೇಲೇರುತ್ತಿದ್ದರೆ
ಅಲ್ಲಿಯೂ ಗಾಳಿದೇವನ ಹೊಡೆತವೆ?
ಎಷ್ಟೊಂದು ಸಹಿಸಲಿ ನಾನು?
ನಿಮ್ಮ ಮನೆಯ ಮೇಲೆ
ಸ್ಕೂಟರ್ ಕಾರ್ ಕಂಪೌಂಡುಗಳ ಮೇಲೆ
ಬಿದ್ದದ್ದು ನಿಮಗೂ ಒಂದಿಷ್ಟು ಪೆಟ್ಟು ಕೊಟ್ಟದ್ದು
ನನಗೂ ವ್ಯಥೆ, ಹೇಳಿ ಏನು ಮಾಡಲಿ ನಾನು
ನೀವೇ ಮಾಡಿದ್ದು
ಮಾಡಿದ್ದುಣ್ಣೋ ಮಹಾರಾಯಾ.

ಒಂದೈದು ನಿಮಿಷ ಬನ್ನಿ ಬನ್ನಿ
ನಿಮ್ಮ ಕಂಪೌಂಡಿಗೆ, ಸುಂದರ ಟೆರಸ್ಸಿಗೂ
ಅಂಗಾಂಗ ಕೊಚ್ಚಿ ಕೊಚ್ಚಿ ಹಾಕಿ
ಮೊಂಡು ಮಾಡಿದ ಈ
ಕುಷ್ಟರೋಗಿಯನ್ನೋ ಕುಂಟನನ್ನೋ ನೋಡಲು.
ಕಾಡಿನಲಿ ಹುಟ್ಟಿಬೆಳೆದರೂ
ಬಿಡುವುದಿಲ್ಲ ಬಿಡಿ ನೀವು
ಬೆಂಕಿ ಹಚ್ಚುವದು, ಬೇರು ಸಮೇತ ಉರುಳಿಸಿ
ನಿಮ್ಮ ಮನೆಗೆ ಬಾಗಿಲುಮಾಡಿ
ನೀವು ಭಧ್ರವಾಗಿದ್ದು
ನಮ್ಮನ್ನು ಅಭಧ್ರವಾಗಿಸುವವರು.

ದೇವರೇ ಕ್ಷಮಿಸು ಮನುಷ್ಯರನು
ಕಲಿಸು ಪ್ರೀತಿ ಶಾಂತಿ ಸಹನೆ!
————————
‘ಹಿಂದೆ ಬಂದರೆ ಒದಯಬೇಡಿ ಮುಂದೆ ಬಂದರೆ ಹಾಯಬೇಡಿ’- ಗೋವಿನ ಹಾಡು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...