ಹಂಬಲ ಮತ್ತು ಸ್ವಾಭಿಮಾನ

ಅವನು-,
ಸ್ವಚ್ಛಂದವಾಗಿ ನಗುವ
ಜೋಡಿಗಳನು ನೋಡಿ ಕರಬುತ್ತಿದ್ದೇನೆ
ಕಿಲುಬುಗಟ್ಟಿದ ಗೊಡ್ಡುಯೋಚನೆಗಳಿಗೆ
ಸೋನೆ ಮಳೆ ಸುರಿಸು.

ಅವಳು-,
ಚಂದಿರ ನಗುನಗುತ ಬೆಂಕಿಹಚ್ಚಿದರೆ
ಸೂರ್ಯ ಉರಿದುರಿದು ಕರಕಲಾಗಿಸಿದ
ಪ್ರೀತಿಯ ಮಾತುಗಳಿಂದ ಒಮ್ಮೆಯಾದರೂ
ಕಣ್ಣೀರು ಸುರಿಸುವಂತೆ ಮಾಡು.

ಇಬ್ಬರಿಗೂ,
ಧಾರಾಕಾರವಾಗಿ ಸುರಿವಮಳೆ ಹೊರಗೆ
ಮನೆ ತುಂಬ ಆವರಿಸಿದ ಕಗ್ಗತ್ತಲು
ಪ್ರೀತಿ ಹೊತ್ತಿಕೊಳ್ಳಲು ಹೇಳಿದಂತಿತ್ತು
ಏನಾದರೂ ಮಾತನಾಡಲು ಒಳಗೊಳಗೇ ಹಂಬಲ
ಆದರೂ ಮತ್ತೆ ಮತ್ತೆ ಮನಕೆ ಮಳೆಯ ರಭಸ
ಮೌನ ಮುರಿಯಲಿಲ್ಲ
ಧ್ವನಿ ಚಿಗುರಲೇ ಇಲ್ಲ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವೈದು ಜನ
Next post ಹಬ್ಬಗಳು

ಸಣ್ಣ ಕತೆ

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…