Home / ಕವನ / ಕವಿತೆ / ಇಂಕದವನ ಕವಿತೆ

ಇಂಕದವನ ಕವಿತೆ

‘ಸರ್ ಕವಿತೆ ಸಿರಿಯಸ್ ಅಗಿ ಇರಬೇಕಾ
ಅಥವಾ ಲೈಽಟ್ ಆಗಿ ಓದಿಬಿಡಬೇಕಾ…
ಅಂತ
ಅಪರೂಪಕ್ಕೆ ಸ್ಟೇಜ ಹತ್ತಿದ ಕವಿ ಸುಂದರೇಶು
ಎದುರುಸಾಲಿನಲ್ಲಿ ಕುಳಿತ
ತನ್ನ ೪-೫ ಸಂಕಲನಕ್ಕೆ ಮುನ್ನುಡಿ ಬರೆದ
ವಗೈರೆ ವಗೈರೆ ಕವಿಗಳಿಗೆ
ಚುಚ್ಚಿ ಚುಚ್ಚಿ ಎರಡೆರಡು ಸಲ ಕೇಳಿಯೇ ಬಿಟ್ಟ.

– ಬಂಡಾಯದವ ಬಂಡಾಯ ಎಬ್ಬಿಸು ಅಂದಿದ್ದ
– ನವ್ಯದವ ಸರಳ ಸೂಕ್ಷ್ಮವಾಗಿ ಹೇಳು ಅಂದಿದ್ದ
– ನವೋದಯದವ ಒಂದಿಷ್ಟು ಉಲ್ಟಾಪಲ್ಟಾ ಶಬ್ದಗಳನ್ನಿಡು ಅಂದಿದ್ದ
– ದಲಿತರವ ಹೇಳಿದ್ದ,
ಲೈಟ್ ಆಗಿಯೂ ಬೇಡ ಸಿರಿಯಸ್ಸಾಗಿಯೂ ಬೇಡ
ಒಬ್ಬೊಬ್ಬರನ್ನ ಅಟ್ಯಾಕ್ ಅಟ್ಯಾಕ್ ಮಾಡು ಅಂದಿದ್ದ
– ಸ್ತ್ರೀವಾದಿಯೊಬ್ಬಳು,
ಹೆಣ್ಣಿನ ಸೌಂದರ್ಯ ಅದೆಷ್ಟು ವರ್ಣಿಸಿದ್ದಿಯಪ್ಪಾ!
ಎಲ್ಲಾ ಸಮಸಮವಾಗಿಯೇ ಬರೆ, ಛೂ ಬಿಟ್ಟದ್ದಳು.

ಸುಂದರೇಶು ಸುಸ್ತಾಗಿದ್ದ
ಅವರವರ ಗುಣ ನಡತೆಗಳ
ಮುನ್ನುಡಿ ಹಿನ್ನುಡಿಗಳ ಸಲಹೆ ಓದಿ ಓದಿ.

ಆದರೂ ಕವಿಗೋಷ್ಠಿಯ ಅವಕಾಶ ಬಿಟ್ಟಾನೆಯೇ!
ಎಲ್ಲರ ಮನ ಗೆಲ್ಲಲೋ ಕೊಲ್ಲಲೋ
‘ಅವರವರ ಭಕುತಿಗೆ ಒಲೆಯುತಿಹನು
ಶಿವ’ ಎಂಬಂತೆ
ಅವರೆಲ್ಲ ಬಯಸಿದ ಮಾತು ಕತೆಗಳನು
ಝಾಲಾಡಿಸಿ ಬೇಸತ್ತು
ಕೊನೆಗೆ
ಎಲ್ಲರ ಸಲಹೆ ಸೂಚನೆ ಧಿಕ್ಕರಿಸಿ
ತಾನೂ ಒಬ್ಬ ವಿಶೇಷತೆ ಉಳಿಸಿಕೊಳ್ಳುವ
ಇಂಕದವನಾಗಿ (ಇಂ+ ಕ, ಇಂಗ್ಲಿಷ್‌+ಕನ್ನಡ)
ಇಂಕದ ಪದ್ಯ ಓದುತ್ತ
ಒಬೊಬ್ಬರನ್ನೇ ದುರುಗುಟ್ಟುತ್ತಿದ್ದ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...