Home / ಕವನ / ಕವಿತೆ / ಇಂಕದವನ ಕವಿತೆ

ಇಂಕದವನ ಕವಿತೆ

‘ಸರ್ ಕವಿತೆ ಸಿರಿಯಸ್ ಅಗಿ ಇರಬೇಕಾ
ಅಥವಾ ಲೈಽಟ್ ಆಗಿ ಓದಿಬಿಡಬೇಕಾ…
ಅಂತ
ಅಪರೂಪಕ್ಕೆ ಸ್ಟೇಜ ಹತ್ತಿದ ಕವಿ ಸುಂದರೇಶು
ಎದುರುಸಾಲಿನಲ್ಲಿ ಕುಳಿತ
ತನ್ನ ೪-೫ ಸಂಕಲನಕ್ಕೆ ಮುನ್ನುಡಿ ಬರೆದ
ವಗೈರೆ ವಗೈರೆ ಕವಿಗಳಿಗೆ
ಚುಚ್ಚಿ ಚುಚ್ಚಿ ಎರಡೆರಡು ಸಲ ಕೇಳಿಯೇ ಬಿಟ್ಟ.

– ಬಂಡಾಯದವ ಬಂಡಾಯ ಎಬ್ಬಿಸು ಅಂದಿದ್ದ
– ನವ್ಯದವ ಸರಳ ಸೂಕ್ಷ್ಮವಾಗಿ ಹೇಳು ಅಂದಿದ್ದ
– ನವೋದಯದವ ಒಂದಿಷ್ಟು ಉಲ್ಟಾಪಲ್ಟಾ ಶಬ್ದಗಳನ್ನಿಡು ಅಂದಿದ್ದ
– ದಲಿತರವ ಹೇಳಿದ್ದ,
ಲೈಟ್ ಆಗಿಯೂ ಬೇಡ ಸಿರಿಯಸ್ಸಾಗಿಯೂ ಬೇಡ
ಒಬ್ಬೊಬ್ಬರನ್ನ ಅಟ್ಯಾಕ್ ಅಟ್ಯಾಕ್ ಮಾಡು ಅಂದಿದ್ದ
– ಸ್ತ್ರೀವಾದಿಯೊಬ್ಬಳು,
ಹೆಣ್ಣಿನ ಸೌಂದರ್ಯ ಅದೆಷ್ಟು ವರ್ಣಿಸಿದ್ದಿಯಪ್ಪಾ!
ಎಲ್ಲಾ ಸಮಸಮವಾಗಿಯೇ ಬರೆ, ಛೂ ಬಿಟ್ಟದ್ದಳು.

ಸುಂದರೇಶು ಸುಸ್ತಾಗಿದ್ದ
ಅವರವರ ಗುಣ ನಡತೆಗಳ
ಮುನ್ನುಡಿ ಹಿನ್ನುಡಿಗಳ ಸಲಹೆ ಓದಿ ಓದಿ.

ಆದರೂ ಕವಿಗೋಷ್ಠಿಯ ಅವಕಾಶ ಬಿಟ್ಟಾನೆಯೇ!
ಎಲ್ಲರ ಮನ ಗೆಲ್ಲಲೋ ಕೊಲ್ಲಲೋ
‘ಅವರವರ ಭಕುತಿಗೆ ಒಲೆಯುತಿಹನು
ಶಿವ’ ಎಂಬಂತೆ
ಅವರೆಲ್ಲ ಬಯಸಿದ ಮಾತು ಕತೆಗಳನು
ಝಾಲಾಡಿಸಿ ಬೇಸತ್ತು
ಕೊನೆಗೆ
ಎಲ್ಲರ ಸಲಹೆ ಸೂಚನೆ ಧಿಕ್ಕರಿಸಿ
ತಾನೂ ಒಬ್ಬ ವಿಶೇಷತೆ ಉಳಿಸಿಕೊಳ್ಳುವ
ಇಂಕದವನಾಗಿ (ಇಂ+ ಕ, ಇಂಗ್ಲಿಷ್‌+ಕನ್ನಡ)
ಇಂಕದ ಪದ್ಯ ಓದುತ್ತ
ಒಬೊಬ್ಬರನ್ನೇ ದುರುಗುಟ್ಟುತ್ತಿದ್ದ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...