Home / ಕವನ / ಕವಿತೆ / ಇಂಕದವನ ಕವಿತೆ

ಇಂಕದವನ ಕವಿತೆ

‘ಸರ್ ಕವಿತೆ ಸಿರಿಯಸ್ ಅಗಿ ಇರಬೇಕಾ
ಅಥವಾ ಲೈಽಟ್ ಆಗಿ ಓದಿಬಿಡಬೇಕಾ…
ಅಂತ
ಅಪರೂಪಕ್ಕೆ ಸ್ಟೇಜ ಹತ್ತಿದ ಕವಿ ಸುಂದರೇಶು
ಎದುರುಸಾಲಿನಲ್ಲಿ ಕುಳಿತ
ತನ್ನ ೪-೫ ಸಂಕಲನಕ್ಕೆ ಮುನ್ನುಡಿ ಬರೆದ
ವಗೈರೆ ವಗೈರೆ ಕವಿಗಳಿಗೆ
ಚುಚ್ಚಿ ಚುಚ್ಚಿ ಎರಡೆರಡು ಸಲ ಕೇಳಿಯೇ ಬಿಟ್ಟ.

– ಬಂಡಾಯದವ ಬಂಡಾಯ ಎಬ್ಬಿಸು ಅಂದಿದ್ದ
– ನವ್ಯದವ ಸರಳ ಸೂಕ್ಷ್ಮವಾಗಿ ಹೇಳು ಅಂದಿದ್ದ
– ನವೋದಯದವ ಒಂದಿಷ್ಟು ಉಲ್ಟಾಪಲ್ಟಾ ಶಬ್ದಗಳನ್ನಿಡು ಅಂದಿದ್ದ
– ದಲಿತರವ ಹೇಳಿದ್ದ,
ಲೈಟ್ ಆಗಿಯೂ ಬೇಡ ಸಿರಿಯಸ್ಸಾಗಿಯೂ ಬೇಡ
ಒಬ್ಬೊಬ್ಬರನ್ನ ಅಟ್ಯಾಕ್ ಅಟ್ಯಾಕ್ ಮಾಡು ಅಂದಿದ್ದ
– ಸ್ತ್ರೀವಾದಿಯೊಬ್ಬಳು,
ಹೆಣ್ಣಿನ ಸೌಂದರ್ಯ ಅದೆಷ್ಟು ವರ್ಣಿಸಿದ್ದಿಯಪ್ಪಾ!
ಎಲ್ಲಾ ಸಮಸಮವಾಗಿಯೇ ಬರೆ, ಛೂ ಬಿಟ್ಟದ್ದಳು.

ಸುಂದರೇಶು ಸುಸ್ತಾಗಿದ್ದ
ಅವರವರ ಗುಣ ನಡತೆಗಳ
ಮುನ್ನುಡಿ ಹಿನ್ನುಡಿಗಳ ಸಲಹೆ ಓದಿ ಓದಿ.

ಆದರೂ ಕವಿಗೋಷ್ಠಿಯ ಅವಕಾಶ ಬಿಟ್ಟಾನೆಯೇ!
ಎಲ್ಲರ ಮನ ಗೆಲ್ಲಲೋ ಕೊಲ್ಲಲೋ
‘ಅವರವರ ಭಕುತಿಗೆ ಒಲೆಯುತಿಹನು
ಶಿವ’ ಎಂಬಂತೆ
ಅವರೆಲ್ಲ ಬಯಸಿದ ಮಾತು ಕತೆಗಳನು
ಝಾಲಾಡಿಸಿ ಬೇಸತ್ತು
ಕೊನೆಗೆ
ಎಲ್ಲರ ಸಲಹೆ ಸೂಚನೆ ಧಿಕ್ಕರಿಸಿ
ತಾನೂ ಒಬ್ಬ ವಿಶೇಷತೆ ಉಳಿಸಿಕೊಳ್ಳುವ
ಇಂಕದವನಾಗಿ (ಇಂ+ ಕ, ಇಂಗ್ಲಿಷ್‌+ಕನ್ನಡ)
ಇಂಕದ ಪದ್ಯ ಓದುತ್ತ
ಒಬೊಬ್ಬರನ್ನೇ ದುರುಗುಟ್ಟುತ್ತಿದ್ದ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...