Home / ಕವನ / ಕವಿತೆ / ಕಾರ್ಗಿಲ್ ಯುದ್ಧ – ಯೋಧನ ತಾಯಿಯೊಬ್ಬಳ ಅತ್ಮಗೀತೆ

ಕಾರ್ಗಿಲ್ ಯುದ್ಧ – ಯೋಧನ ತಾಯಿಯೊಬ್ಬಳ ಅತ್ಮಗೀತೆ

ಹಿಮಶೈಲ ಕಾಯುವ
ಮಗನೇ ನೀನೆಲ್ಲಿದ್ದೀಯೋ
ನನಗೊಂದೂ ಗೊತ್ತಿಲ್ಲ.
ಕಾಲಿಗೆರಗಿ ಹೊರಟ ಆ ದಿನ-
ಕಣ್ಣೀರು ಒರೆಸಿದ್ದೇನು
ಮುದ್ದಾಗಿ ಮಾತಾಡಿ ನಗಿಸಿದ್ದೇನು
ಚೆನ್ನಾಗಿ ನೋಡಿಕೊಳ್ಳೆಂದು ಅಪ್ಪನಿಗೆ ಹೇಳಿ
ಹೊರಟೆಯಲ್ಲ! ಮಗಾ
ಈಗ ನಿನೆಲ್ಲಿದ್ದೀಯೋ ನನ್ನ ಕಂದಾ.

ಆ ಹಿಮಮಳೆ ಚಳಿಗಂಜದೆ ಮುನ್ನುಗ್ಗುವ
ನಿನ್ನ ಬಿಸಿರಕ್ತದ ಕೆಚ್ಚೆದೆಯ ಹೆಜ್ಜೆಗಳನು
ಕಣ್ಣಲ್ಲೇ ತುಂಬಿಕೊಂಡಿದ್ದೇನೆ.
ಕಾರ್ಗಿಲ್ಲಿನ ಕಿಡಿ
ನಿನ್ನ ಕಿಡಿಕಿಡಿಯಾಗಿರಿಸಿದರೂ
ನನ್ನ ಮನ ಕಾರ್ಗತ್ತಲೆಯಂತೆ
ವ್ಯಾಕುಲಗೊಳ್ಳುತ್ತಿದೆಯಲ್ಲ! ಮಗಾ
ಯಾವ ಕಣಿವೆಯ ಆಳೆತ್ತರದಲ್ಲಿರುವಿಯೋ,
ನನ್ನ ಕಣ್ಮಣಿ.

ಅಬ್ಬರಿಸುವ ಗುಂಡು ಮದ್ದು ಬಂದೂಕುಗಳಿಗೆ
ನೆಲ ನಡುಗಿದಂತೆ ಒಳಗೊಳಗೇ
ನಾನೂ ನಡುಗುತಿರುವೆ
ಅಸಹಾಯಕ ಪಂಜರದ ಗಿಳಿಯಂತೆ
ಅತ್ತಿಂದಿತ್ತ ಸುತ್ತುತ
ದುಃಖ ಗಂಟಲಿನೊಳಗೇ ಹೂತಿಟ್ಟು
ಹೆತ್ತೊಡಲ ಸಂಕಟ ಹೊಟ್ಟೆಯೊಳಗೇ ಹಾಕಿ
ವೀರಯೋಧನ ತಾಯಿ ಎನ್ನುತ
ಒಮ್ಮೊಮ್ಮೆ ಇಬ್ಬಗೆಯ ನೀತಿಗೂ
ಕಣ್ಣೀರು ಸುರಿಸುತ ಒರೆಸುತ
ರಣರಂಗದ ನಿನ್ನೆದೆಯ ಕೆಚ್ಚತನಕೆ
ನಾನೂ ಸೋಲುತ ಗೆಲ್ಲುತ
ನಿನಗಾಗಿ, ದೇಶಕ್ಕಾಗಿ
ಪ್ರಾರ್ಥಿಸುತ್ತಿದ್ದೇನೆ ಮಗಾ.

ಪ್ರೀತಿಪ್ರೇಮ ವಿಶ್ವಾಸಕೆ
ಮೋಸಬಗೆದ ದ್ರೋಹಿಗಳ ನೀತಿಗೆ
ವೀರ ಮಕ್ಕಳು ಜೀವತೆತ್ತು
ಶಿಖರದ ಆಳೆತ್ತರಕೂ ನೆತ್ತರಚಿಮ್ಮಿ
ವೀರಸ್ವರ್ಗ ಏರುತ್ತಿದ್ದಾರಲ್ಲ.
ದೃತಿಗೆಡಬೇಡ ಕಾರ್ಗಿಲ್ಲಿನ
ಕಾರ್ಗತ್ತಲೆಯಲ್ಲೂ ಹೊನ್ನಕಿರಣ
ಬಂದೇ ಬರುತ್ತದೆ ಮಗಾ-
ಕೆಚ್ಚೆದೆಯಿಂದ ಇರು ನನ್ನ ವೀರಪುತ್ರಾ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...