Home / ಕವನ / ಕವಿತೆ / ಕಾರ್ಗಿಲ್‌ನಿಂದ ಬಂದವನು…!

ಕಾರ್ಗಿಲ್‌ನಿಂದ ಬಂದವನು…!

ಊರಿಗೆ ಬಂದ ಶವಪೆಟ್ಟಿಗೆಯೊಳಗಿನ
ಅವನ ಚಿರನಿದ್ರೆ ಏನೆಲ್ಲ ಹೇಳುತಿದೆ
ಇವರೆಲ್ಲ ಅಳುತ್ತಿದ್ದಾರೆ.
ದೇಶಭಕ್ತ ಇವ ನಮ್ಮ ಹುಡುಗ
ಜೈಕಾರ ಹಾಕುತ ಮನೆಯ ಬೆಳಕು ನುಂಗಿದ
ಕಾರ್ಗಿಲ್ ಕರಿಕತ್ತಲೆಗೆ ನೆರಳುತಿರುವರು.

ಕಟ್ಟುಮಸ್ತಾದ ಹುಡುಗ ಹೊಳೆವ ಕಣ್ಣು
ಗುಂಗುರು ಕೂದಲು, ನೇರ ಮೂಗು
ಹೇಳಿ ಕೇಳಿ ಇಪ್ಪತ್ತೆರಡರ ಹರೆಯ ಅಷ್ಟೆ.
ಕಿತ್ತು ತಿನ್ನುವ ಬಡತನ
ಮನೆ ತುಂಬ ಮಕ್ಕಳಲಿ ಬೆಳೆದವ
ಕಿಚ್ಚು ರೊಚ್ಚಿನೊಳಗೆ ಹೊಸ ಬದುಕಿಗೆ ಹುಡುಕಾಟ
ಸಿಕ್ಕದ್ದು ಗಡಿಕಾಯುವ ಕೆಲಸ.

ದೇಶಭಕ್ತಿ-ಅಭಿಮಾನವೆಲ್ಲ
ಗಡಿ ಗುಂಪಿನೊಳಗೇ ಬೆಳೆಸಿಕೊಂಡಿದ್ದ.
ಮನೆ ಮಂದಿಯ ಪ್ರೀತಿ ಕೂಡಾ
ಅಲ್ಲೆ ನೆನೆಪಿಸಿಕೊಂಡು ಮಡವುಗಟ್ಟಿದ್ದ.
ಇಲ್ಲಿ ಇದ್ದಾಗಿನ ಸಿಟ್ಟು ಸೆಡವುಗಳನೆಲ್ಲ
ಅಲ್ಲಿ ಇಳಿಸಿಕೊಂಡು
ಉಳಿದೆಲ್ಲ ಜವಾಬ್ದಾರಿ
ನನಗಿರಲೆಂದು ಪತ್ರಬರೆದಿದ್ದ.

ದುರ್ದಿನದೊಂದು ದಿನ ಸಿಡಿಯಿತು
ವೈರಿಗಳ ಕಿಡಿ
ಧಗಧಗನೆ ಹೊತ್ತಿ ಉರಿಯಿತು
ಯೋಧರ ಎದೆ
ಕತ್ತಲು ಕಗ್ಗತ್ತಲಿಗಂಜದೆ
ಮಂಜು ಚಳಿ ಮಳೆಗೆ ಹೆದರದೆ
ಹಸಿವು ಪ್ರಾಣದ ಹಂಗು ತೊರೆದು
ಗುಂಡು ಮದ್ದುಗಳ ನಡುವೆ
ಹೋರಾಡಿದ್ದೇನು
ಉಸಿರು ಉಸಿರಿಗೆ ಪ್ರೀತಿಸಿದ್ದೇನು ದೇಶ.

ವೈರಿಗಳ ಸದ್ದಡಗಿಸುತ ನೆಲತಟ್ಟಿ
ಮಾತೃವಂದನೆ ಮಾಡಿ
ಮುಖಾಮುಖಿ ಕೊರಳಿಗೆ ಕೊರಳುಕೊಟ್ಟು
ದೇಶಭಕ್ತಿ ರಕ್ತ ಪತಾಕೆಗೆ ಹಾರಿಸಿ
ಹೋದ, ಅವ ದೂರ ಹೊರಟೇ ಹೋದ.
ಅವ ನಮ್ಮವ ನಿಮ್ಮವ ಎಲ್ಲರವ
ವೀರಕುಮಾರ, ಮನೆಯಮಗನವ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...