ಕಾರ್ಗಿಲ್‌ನಿಂದ ಬಂದವನು…!

ಊರಿಗೆ ಬಂದ ಶವಪೆಟ್ಟಿಗೆಯೊಳಗಿನ
ಅವನ ಚಿರನಿದ್ರೆ ಏನೆಲ್ಲ ಹೇಳುತಿದೆ
ಇವರೆಲ್ಲ ಅಳುತ್ತಿದ್ದಾರೆ.
ದೇಶಭಕ್ತ ಇವ ನಮ್ಮ ಹುಡುಗ
ಜೈಕಾರ ಹಾಕುತ ಮನೆಯ ಬೆಳಕು ನುಂಗಿದ
ಕಾರ್ಗಿಲ್ ಕರಿಕತ್ತಲೆಗೆ ನೆರಳುತಿರುವರು.

ಕಟ್ಟುಮಸ್ತಾದ ಹುಡುಗ ಹೊಳೆವ ಕಣ್ಣು
ಗುಂಗುರು ಕೂದಲು, ನೇರ ಮೂಗು
ಹೇಳಿ ಕೇಳಿ ಇಪ್ಪತ್ತೆರಡರ ಹರೆಯ ಅಷ್ಟೆ.
ಕಿತ್ತು ತಿನ್ನುವ ಬಡತನ
ಮನೆ ತುಂಬ ಮಕ್ಕಳಲಿ ಬೆಳೆದವ
ಕಿಚ್ಚು ರೊಚ್ಚಿನೊಳಗೆ ಹೊಸ ಬದುಕಿಗೆ ಹುಡುಕಾಟ
ಸಿಕ್ಕದ್ದು ಗಡಿಕಾಯುವ ಕೆಲಸ.

ದೇಶಭಕ್ತಿ-ಅಭಿಮಾನವೆಲ್ಲ
ಗಡಿ ಗುಂಪಿನೊಳಗೇ ಬೆಳೆಸಿಕೊಂಡಿದ್ದ.
ಮನೆ ಮಂದಿಯ ಪ್ರೀತಿ ಕೂಡಾ
ಅಲ್ಲೆ ನೆನೆಪಿಸಿಕೊಂಡು ಮಡವುಗಟ್ಟಿದ್ದ.
ಇಲ್ಲಿ ಇದ್ದಾಗಿನ ಸಿಟ್ಟು ಸೆಡವುಗಳನೆಲ್ಲ
ಅಲ್ಲಿ ಇಳಿಸಿಕೊಂಡು
ಉಳಿದೆಲ್ಲ ಜವಾಬ್ದಾರಿ
ನನಗಿರಲೆಂದು ಪತ್ರಬರೆದಿದ್ದ.

ದುರ್ದಿನದೊಂದು ದಿನ ಸಿಡಿಯಿತು
ವೈರಿಗಳ ಕಿಡಿ
ಧಗಧಗನೆ ಹೊತ್ತಿ ಉರಿಯಿತು
ಯೋಧರ ಎದೆ
ಕತ್ತಲು ಕಗ್ಗತ್ತಲಿಗಂಜದೆ
ಮಂಜು ಚಳಿ ಮಳೆಗೆ ಹೆದರದೆ
ಹಸಿವು ಪ್ರಾಣದ ಹಂಗು ತೊರೆದು
ಗುಂಡು ಮದ್ದುಗಳ ನಡುವೆ
ಹೋರಾಡಿದ್ದೇನು
ಉಸಿರು ಉಸಿರಿಗೆ ಪ್ರೀತಿಸಿದ್ದೇನು ದೇಶ.

ವೈರಿಗಳ ಸದ್ದಡಗಿಸುತ ನೆಲತಟ್ಟಿ
ಮಾತೃವಂದನೆ ಮಾಡಿ
ಮುಖಾಮುಖಿ ಕೊರಳಿಗೆ ಕೊರಳುಕೊಟ್ಟು
ದೇಶಭಕ್ತಿ ರಕ್ತ ಪತಾಕೆಗೆ ಹಾರಿಸಿ
ಹೋದ, ಅವ ದೂರ ಹೊರಟೇ ಹೋದ.
ಅವ ನಮ್ಮವ ನಿಮ್ಮವ ಎಲ್ಲರವ
ವೀರಕುಮಾರ, ಮನೆಯಮಗನವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಊರಮಂದಿ ದೂರವಾಗೋ ಕಾಲ ಬರುತೈತಿ
Next post ಬಾಳು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

cheap jordans|wholesale air max|wholesale jordans|wholesale jewelry|wholesale jerseys