Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು –
ಉದ್ದನೆಯ ದಾಡಿ ತಲೆಗೆ ಸಡಿಲಾದ ಪೇಟಾ
ಕಂದುಬಣ್ಣದ ದೊಗಲೆ ಜುಬ್ಬಾ
ಹೆಗಲ ಮೇಲಿನ ಕೋಲಿನ ಅಂಚಿಗೆ
ತೂಗಾಡುವ ಬುಟ್ಟಿಗಳು
ಬದಾಮ್ ಪಿಸ್ತಾ ಕಲ್ಲುಸಕ್ಕರೆ ಒಂದೆಡೆ
ಮತ್ತೊಂದೆಡೆ ಉಪ್ಪುಪ್ಪಿನ ಕಡಲೇಬೀಜಗಳು
ನನಗಿನ್ನೂ ಚೆನ್ನಾಗಿ ನೆನಪಿದೆ
ಅತನೇ ಕಾಬೂಲಿವಾಲಾ ಎಂದು.
ಕಾಬೂಲು ಕಂದಹಾರ ಸುತ್ತಾಡಿ
ಹೆಂಡತಿ ಮಕ್ಕಳನು ಬಿಟ್ಟು
ಹೊಟ್ಟೆಪಾಡಿಗಾಗಿ ಇಲ್ಲಿಗೆ ಬಂದಿದ್ದವನೂ ಎಂದು-
ಅದೇ ಅದೇ ನನ್ನ ಮದುವೆಯ ದಿನದಂದು
ಬೆಳೆದ ತನ್ನ ಮಗಳ ನೆನೆದು ಕಣ್ಣೀರು ತುಂಬಿ
ಕಾಬೂಲಿಗೆ ಮರಳಿದವನೂ ಎಂದು.

ಇಂದು –
ಕಾಬೂಲಿವಾಲಾ,
ಈಗ ಇದೆಲ್ಲಾ ಏನಾಗುತ್ತಿದೆ ನಿನ್ನ ನಾಡಿನಲ್ಲಿ
ಅಮೇರಿಕದ ವ್ಯಾಪಾರಿಮಳಿಗೆಯಡಿ
ಭಯೋತ್ಪಾದಕ ಪಾತಕಿಗಳಿಗೆ ಸಿಲುಕಿ ಸತ್ತ
ಸಾವಿರಾರು ಅತ್ಮಗಳ ಶಾಪ.
ಕಾಬೂಲು ಕಂದಹಾರಗಳ ತುಂಬೆಲ್ಲ ಗುಂಡುರಾಶಿಗಳ ಸುರಿಮಳೆ
ಭೂಮಿಯೂ ನಡುಗಿ ಭ್ರೂಣಗಳು ಪಾತಿಸುತ್ತಿರುವದು,
ಮುಖ ಪಾದ ಕಾಣಿಸಿದ್ದಕ್ಕೆ
ಹಾಡೇ ಹಗಲು ಹೆಂಗಸರನು ಕೊಂದು
ಧರ್ಮಾಂಧತೆಯಲಿ ಮೆರೆದ ತಾಲಿಬಾನ್ ತಲೆಹಿಡುಕರು
ಮುಗ್ಧತೆಯಲಿ ಕಕ್ಕಾಬಿಕ್ಕಿಯಾಗಿ ಬಿಕ್ಕುವ
ತೊಟ್ಟಿಕ್ಕುವ ಕಣ್ಣೀರು ಕಥೆಗಳು.

ಈಗ-
ಜಗಗೆಲ್ಲ ಬಯಸುವ ಕ್ರೂರಿಗಳನು ಹಿಮ್ಮೆಟ್ಟಿಸಲು
ನೀನು ಹೆಗಲಿಗೆ ಬಂದೂಕು ಏರಿಸಿದ್ದು ತಪ್ಪೇನಿಲ್ಲ,
ಸುಕ್ಕುಗಟ್ಟಿದ ನಿನ್ನ ಹಣೆಯ ಗೆರೆಗಳ ತುಂಬ ಬೆವರು
ಅದರೊಳಗೆ ಮೆತ್ತಿದ ಭೂಮಿಯ ದುರಂತ ಧೂಳು
ಸಾವು ನೋವಿನ ವ್ಯಥೆಯ ಹಾಡುಗಳಿಗೆ
ಕೊನೆ ಎಂದು? ಹೇಗೆ?

ಪ್ರೀತಿವಿಶ್ವಾಸತೆಗೆ ಏನೆಲ್ಲ ಗೆಲ್ಲುವ ಶಕ್ತಿ ಇದೆ
ಗಾಂಧಿ ಹೇಳಿದ್ದು, ಅಂದು ನೀನೂ ಹೇಳಿದ್ದೆ, ನೆನಪಿಸಿಕೋ-
ಕಲ್ಲು ಸಕ್ಕರೆ ಪ್ರೀತಿಯಿಂದ ಕೊಡುತ್ತಿದ್ದ ನಿನ್ನ ಕೈ
ಈಗ ಬಂದೂಕು ಹಿಡಿದದ್ದು
ತಪ್ಪೋ ಒಪ್ಪೋ ಒಂದಿಷ್ಟು ಯೋಚಿಸು
ಯಾರೋ ಮಾಡುವ ತಪ್ಪಿಗೆ
ಯಾರ್ಯಾರೋ ಅನುಭವಿಸುವ ತಳಮಳ.

“ಖಂಡಿಸಬೇಕಾಗಿದೆ ಯುದ್ಧ ಕೊಲೆ
ಬೆಳೆಸಿಕೊಳ್ಳಬೇಕಾಗಿದೆ ನಾಗರಿಕತೆ.
ಎಂದೇ ಟ್ಯಾಂಕರು ಬಂಕರು ಬಂದೂಕು
ಮಿಸೈಲ್ಸ್‌ಗಳ ಕ್ರೂರ ತಲೆಗಳ ತುಂಬೆಲ್ಲ
ಪ್ರೀತಿವಿಶ್ವಾಸಗಳ ಕಲ್ಲು ಸಕ್ಕರೆ ತುಂಬಿಸಿ
ಭಯೋತ್ಪಾದಕರಿಗೆ ಸವಾಲೊಡ್ಡಿದರೆ
ಶಾಂತಿ ನೆಲೆಸೀತು ನಮ್ಮ ನಿಮ್ಮೆಲ್ಲರ ನಾಡುಗಳಲಿ”
******
(ರವೀಂದ್ರನಾಥ್ ಟ್ಯಾಗೂರ ಅವರ ಕಥೆ “ಕಾಬೂಲಿವಾಲಾ” ನೆನಪಿಸಿಕೊಂಡು, ಈಗ ಕಾಬೂಲಿವಾಲಾ ಉತ್ತರ ಮೈತ್ರಿಕೂಟದಲ್ಲೊಬ್ಬ ಎಂದೇ ತಿಳಿದುಕೊಂಡು ಅವನೊಂದಿಗೆ ಒಂದೆರಡು ಮಾತುಗಳು)
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...