Home / ಕವನ / ಕವಿತೆ / ಕಾಬೂಲಿವಾಲಾ

ಕಾಬೂಲಿವಾಲಾ

ಅಂದು –
ಉದ್ದನೆಯ ದಾಡಿ ತಲೆಗೆ ಸಡಿಲಾದ ಪೇಟಾ
ಕಂದುಬಣ್ಣದ ದೊಗಲೆ ಜುಬ್ಬಾ
ಹೆಗಲ ಮೇಲಿನ ಕೋಲಿನ ಅಂಚಿಗೆ
ತೂಗಾಡುವ ಬುಟ್ಟಿಗಳು
ಬದಾಮ್ ಪಿಸ್ತಾ ಕಲ್ಲುಸಕ್ಕರೆ ಒಂದೆಡೆ
ಮತ್ತೊಂದೆಡೆ ಉಪ್ಪುಪ್ಪಿನ ಕಡಲೇಬೀಜಗಳು
ನನಗಿನ್ನೂ ಚೆನ್ನಾಗಿ ನೆನಪಿದೆ
ಅತನೇ ಕಾಬೂಲಿವಾಲಾ ಎಂದು.
ಕಾಬೂಲು ಕಂದಹಾರ ಸುತ್ತಾಡಿ
ಹೆಂಡತಿ ಮಕ್ಕಳನು ಬಿಟ್ಟು
ಹೊಟ್ಟೆಪಾಡಿಗಾಗಿ ಇಲ್ಲಿಗೆ ಬಂದಿದ್ದವನೂ ಎಂದು-
ಅದೇ ಅದೇ ನನ್ನ ಮದುವೆಯ ದಿನದಂದು
ಬೆಳೆದ ತನ್ನ ಮಗಳ ನೆನೆದು ಕಣ್ಣೀರು ತುಂಬಿ
ಕಾಬೂಲಿಗೆ ಮರಳಿದವನೂ ಎಂದು.

ಇಂದು –
ಕಾಬೂಲಿವಾಲಾ,
ಈಗ ಇದೆಲ್ಲಾ ಏನಾಗುತ್ತಿದೆ ನಿನ್ನ ನಾಡಿನಲ್ಲಿ
ಅಮೇರಿಕದ ವ್ಯಾಪಾರಿಮಳಿಗೆಯಡಿ
ಭಯೋತ್ಪಾದಕ ಪಾತಕಿಗಳಿಗೆ ಸಿಲುಕಿ ಸತ್ತ
ಸಾವಿರಾರು ಅತ್ಮಗಳ ಶಾಪ.
ಕಾಬೂಲು ಕಂದಹಾರಗಳ ತುಂಬೆಲ್ಲ ಗುಂಡುರಾಶಿಗಳ ಸುರಿಮಳೆ
ಭೂಮಿಯೂ ನಡುಗಿ ಭ್ರೂಣಗಳು ಪಾತಿಸುತ್ತಿರುವದು,
ಮುಖ ಪಾದ ಕಾಣಿಸಿದ್ದಕ್ಕೆ
ಹಾಡೇ ಹಗಲು ಹೆಂಗಸರನು ಕೊಂದು
ಧರ್ಮಾಂಧತೆಯಲಿ ಮೆರೆದ ತಾಲಿಬಾನ್ ತಲೆಹಿಡುಕರು
ಮುಗ್ಧತೆಯಲಿ ಕಕ್ಕಾಬಿಕ್ಕಿಯಾಗಿ ಬಿಕ್ಕುವ
ತೊಟ್ಟಿಕ್ಕುವ ಕಣ್ಣೀರು ಕಥೆಗಳು.

ಈಗ-
ಜಗಗೆಲ್ಲ ಬಯಸುವ ಕ್ರೂರಿಗಳನು ಹಿಮ್ಮೆಟ್ಟಿಸಲು
ನೀನು ಹೆಗಲಿಗೆ ಬಂದೂಕು ಏರಿಸಿದ್ದು ತಪ್ಪೇನಿಲ್ಲ,
ಸುಕ್ಕುಗಟ್ಟಿದ ನಿನ್ನ ಹಣೆಯ ಗೆರೆಗಳ ತುಂಬ ಬೆವರು
ಅದರೊಳಗೆ ಮೆತ್ತಿದ ಭೂಮಿಯ ದುರಂತ ಧೂಳು
ಸಾವು ನೋವಿನ ವ್ಯಥೆಯ ಹಾಡುಗಳಿಗೆ
ಕೊನೆ ಎಂದು? ಹೇಗೆ?

ಪ್ರೀತಿವಿಶ್ವಾಸತೆಗೆ ಏನೆಲ್ಲ ಗೆಲ್ಲುವ ಶಕ್ತಿ ಇದೆ
ಗಾಂಧಿ ಹೇಳಿದ್ದು, ಅಂದು ನೀನೂ ಹೇಳಿದ್ದೆ, ನೆನಪಿಸಿಕೋ-
ಕಲ್ಲು ಸಕ್ಕರೆ ಪ್ರೀತಿಯಿಂದ ಕೊಡುತ್ತಿದ್ದ ನಿನ್ನ ಕೈ
ಈಗ ಬಂದೂಕು ಹಿಡಿದದ್ದು
ತಪ್ಪೋ ಒಪ್ಪೋ ಒಂದಿಷ್ಟು ಯೋಚಿಸು
ಯಾರೋ ಮಾಡುವ ತಪ್ಪಿಗೆ
ಯಾರ್ಯಾರೋ ಅನುಭವಿಸುವ ತಳಮಳ.

“ಖಂಡಿಸಬೇಕಾಗಿದೆ ಯುದ್ಧ ಕೊಲೆ
ಬೆಳೆಸಿಕೊಳ್ಳಬೇಕಾಗಿದೆ ನಾಗರಿಕತೆ.
ಎಂದೇ ಟ್ಯಾಂಕರು ಬಂಕರು ಬಂದೂಕು
ಮಿಸೈಲ್ಸ್‌ಗಳ ಕ್ರೂರ ತಲೆಗಳ ತುಂಬೆಲ್ಲ
ಪ್ರೀತಿವಿಶ್ವಾಸಗಳ ಕಲ್ಲು ಸಕ್ಕರೆ ತುಂಬಿಸಿ
ಭಯೋತ್ಪಾದಕರಿಗೆ ಸವಾಲೊಡ್ಡಿದರೆ
ಶಾಂತಿ ನೆಲೆಸೀತು ನಮ್ಮ ನಿಮ್ಮೆಲ್ಲರ ನಾಡುಗಳಲಿ”
******
(ರವೀಂದ್ರನಾಥ್ ಟ್ಯಾಗೂರ ಅವರ ಕಥೆ “ಕಾಬೂಲಿವಾಲಾ” ನೆನಪಿಸಿಕೊಂಡು, ಈಗ ಕಾಬೂಲಿವಾಲಾ ಉತ್ತರ ಮೈತ್ರಿಕೂಟದಲ್ಲೊಬ್ಬ ಎಂದೇ ತಿಳಿದುಕೊಂಡು ಅವನೊಂದಿಗೆ ಒಂದೆರಡು ಮಾತುಗಳು)
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...