ಮನ ಮಂಕಾಯಿತ್ತು. ತನುವು ಮರೆಯಿತ್ತು.
ವಾಯು ಬರತಿತ್ತು. ಉರಿ ಎದ್ದಿತ್ತು.
ಹೊಗೆ ಹರಿಯಿತ್ತು. ಸರೋವರವೆಲ್ಲ ಉರಿದು ಹೋಯಿತ್ತು.
ಒಳಗೆ ಹೊಕ್ಕು ಕದವ ತೆಗೆದು ಬಯಲ ನೋಡಿ,
ಬೆಳಗಕೂಡಿದಲ್ಲದೆ ನಿಜ ಮುಕ್ತಿ ಇಲ್ಲವೆಂದರು
ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ.
*****