ಸಣ್ಣ ಹುಡುಗನ ಶಡುವಿಗೆ

ಸಣ್ಣ ಹುಡುಗನ ಶಡುವಿಗೆ
ಮಿಡಿಕ್ಯಾಡೋ ಮನಕ ಮಚ್ಚಿಲ್ಹೊಡೆದು ||ಪ||

ಅಣಕವಾಡು ಶಿವನಂದಿ ಪಿಟೀಲಿಗೆ
ತುಣಕ ಚರಂತಿಯ ತಾಳ ಕುಟೀಲಗೆ
ಹೆಣಕ್ಯಾಡುವ ಸೊಟ್ಟದ ಕೌಚಾಪಿಗೆ
ಕಣಕಹಚ್ಚಿ ಬಾರಿಸುವ ಮೃದಂಗದ
ಘನಶಾಸ್ರ ಅರಿಯದ ಗುಣಗೇಡಿಗಳಿಗೆ ||೧||

ಹೊಸಹಳ್ಳಿ ಗ್ರಾಮದ ಗಾಣಿಗ ಕುಲ
ರಸಿಕನಾದನೋ ಆಗ ಸಾಲಿಗೆ ಬಂದು
ಅಸಮ ಪ್ರಸಂಗಕ ಸರಿ ಇಟ್ಟನು ಇದು
ಕಿಸಿ ಕಿಸಿ ಹಲ್ಲುಗಳ ತೆರೆದು ನಕ್ಕನವ
ಹೆಸರಿಗೆ ಕಾಲನ ಹೊಸತರ ಚೇಷ್ಟಿಗೆ ||೨||

ಪುಂಡ ಶಿಶುನಾಳಧೀಶನ ಸೇವಕ
ತೊಂಡ ಶೂರನ ಗ್ರಾಮ ಸಂಹಾರಕ
ಪಂಡಿತರಿಗೆ ಹಿತವಾದ ವಿಚಾರಕ್ಕೆ
ಮಂಡಲದೊಳು ಗುರುಲಿಂಗ ಕೃಪಾಂಗಗೆ
ಇಂಗಿತವರಿಯದ ಮಂಗಮನುಜರಿಗೆ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಡು ಮುಖ
Next post ಸ್ವರ್ಣಪಂಜರ

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys