Home / ಬಾಲ ಚಿಲುಮೆ / ಕವಿತೆ / ತಿಂಡಿ ಲೆಕ್ಕ

ತಿಂಡಿ ಲೆಕ್ಕ

ಬೆಳ್ಳಂಬೆಳಗ್ಗೆ ಬಿಸಿ ಬಿಸಿ ಇಡ್ಳಿ
ಯಾರಿಗೆ ಬೇಕು ಇಡ್ಳಿ?
ಅಣ್ಣನಿಗೆ ಹತ್ತು ನಂಗೊಂದಿಪ್ಪತ್ತು
ಒಟ್ಟಾರೆಷ್ಟು ಇಡ್ಳಿ?
ಒಟ್ಟಾರೆ ಮೂವತ್ತು ಇಡ್ಳಿ

ಕಣ್ ಕಣ್ ಬಿಟ್ಟು ಉದ್ದಿನ ಹಿಟ್ಟು
ಯಾರಿಗೆ ಬೇಕು ದೋಸೆ?
ಅಣ್ಣನಿಗಿಪ್ಪತ್ತು ನಂಗೊಂದು ಮೂವತ್ತು
ಒಟ್ಟಾರೆಷ್ಟು ದೋಸೆ?
ಒಟ್ಟಾರೆ ಐವತ್ತು ದೋಸೆ

ಊತದ್ದಾಯ್ತು ಬಾತದ್ದಾಯ್ತು
ಯಾರಿಗೆ ಬೇಕು ಊತಪ್ಪ?
ಅಣ್ಣನಿಗೆ ಮೂವತ್ತು ನಂಗೊಂದು ನಲುವತ್ತು
ಒಟ್ಟಾರೆಷ್ಟು ಊತಪ್ಪ?
ಒಟ್ಟಾರೆ ಎಪ್ಪತ್ತು ಊತಪ್ಪ

ರೌಂಡ್ ರೌಂಡ್ ಉಬ್ಬಿ ಬಂತೈ ಉರುಳಿ
ಯಾರಿಗೆ ಬೇಕು ಪೂರಿ?
ಅಣ್ಣನಿಗೆ ನಲುವತ್ತು ನಂಗೊಂದೈವತ್ತು
ಒಟ್ಟಾರೆಷ್ಟು ಪೂರಿ?
ಒಟ್ಟಾರೆ ತೊಂಬತ್ತು ಪೂರಿ

ಗುಡುಗುಡು ಗುಮ್ಮಟ ದೇವರ ಲಡ್ಡು
ಯಾರಿಗೆ ಬೇಕು ಲಡ್ಡು?
ಅಣ್ಣನಿಗೈವತ್ತು ನಂಗೊಂದರುವತ್ತು
ಒಟ್ಟಾರೆಷ್ಟು ಲಡ್ಡು?
ಒಟ್ಟಾರೆ ನೂರತ್ತು ಲಡ್ಡು
ಇಲ್ಲಿಗೆ ಮುಗಿಯಿತು ಸೆಡ್ಡು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...