Home / ಬಾಲ ಚಿಲುಮೆ / ಕವಿತೆ / ಪುಟ್ಟನ ಕಚೇರಿ

ಪುಟ್ಟನ ಕಚೇರಿ

ಪುಟ್ಟನ ಮನೆ ಮುಂದೆ ಇದೇನು ಕೂಟ
ಇಷ್ಟು ಬೆಳಿಗ್ಗೆಯೆ ಊರವರ ಕಾಟ
ಕೆಲವರು ಕುಂತು ಕೆಲವರು ನಿಂತು
ಹಲವರು ಹಣಿಕಿ ಉಳಿದವರಿಣುಕಿ
ಹಾಡುತ್ತಿರುವನು ಪುಟ್ಟನು ಎಂದು
ಜನ ಬಂದಿರುವರು ಕೇಳಲು ಇಂದು
ಪುಟ್ಟನ ಗಾಯನ ಒಂದೇ ಸವನೆ
ನಡೆದಿದೆ ಯಾರದೆ ಪರಿವಿಲ್ಲದೆನೆ
ಮಂದ್ರ ಮಧ್ಯಮ ತಾರಕ ಬಿಂದಿಗೆ
ಎಲ್ಲಾ ಶ್ರುತಿಗಳು ಕೃತಿಗಳು ಒಂದಿಗೆ
ತಲೆದೂಗುತಾರೆ ಕೇಳುವ ಜನಗಳು
ಅದೆಂಥ ಭಾವ ತುಂಬಿದೆ ಇವನೊಳು
ಹರಿದರಿದು ಬರುತಿದೆ ಕಣ್ಣೀರ ಧಾರೆ
ದನಿಯೆಂಥ ದನಿಯಿತು ವ್ಹಾರೆ ವ್ಹಾರೆ
ಬಾಲಪ್ರತಿಭೆಯಿವ ಚೆಂಬೈಗೂ ಸಮ
ಇವನೆದುರು ಇನ್ನೆಲ್ಲರು ಬರೀ ಸರಿಗಮ
ಚರ್ಚೆ ಸುರುವಾಗುವುದು ರಾಗದ ಕುರಿತು
ಒಬ್ಬೊಬ್ಬರು ತಮ್ಮ ಬುದ್ಧಿಯಂತರಿತು
ಒಬ್ಬನೆಂದರೆ ಇದು ಕೇದಾರ ಗೌಳ
ಇನ್ನೊಬ್ಬನ ಹಟ ರೀತಿ ಗೌಳ
ಆಗ ಶುರುವಾಗುವುದು ಭಾರೀ ಜಗಳ
ಯಾಕೆಂದರೆ ಇದು ಮಾಯಾಮಾಳವ ಗೌಳ
ಕೆಲವರಭೇರಿ ಕೆಲವರು ಬಿಲಹರಿ
ದೇವಗಾಂಧಾರಿ ಗೌರಿಮನೋಹರಿ
ಖರಹರಪ್ರಿಯ ನಾಟಿಕುರಂಜಿ
ಆನಂದ ಭೈರವಿ ಪೂರ್ವಕಲ್ಯಾಣಿ
ಮಲಯಮಾರುತ ಪಂತುವರಾಳಿ
ಸಿಂಹೇಂದ್ರಮಧ್ಯಮ ಸಿಂಧುಭೈರವಿ
ಒನ್ಸ್ ಮೋರೆಂದು ಕೂಗಲು ಕೆಲವರು
ಟ್ವೈಸ್ ಮೋರೆಂದು ಇನ್ನೂ ಹಲವರು
ಮೋರ್ ಮೋರೆಂಬ ಗುಂಪೂ ಇತ್ತು
ಈ ಮಧ್ಯೆ ಗಾಯನ ಜೋರಾಗ್ತ ಹೋಯ್ತು
ಆಗಲೆ ಬಂದಳು ಪುಟ್ಪನ ಅಮ್ಮ
ಕೈಯಲಿ ಎತ್ಕೊಂಡು ಅಂಗಡಿ ಸಾಮಾನ್ನ
ಅಯ್ಯೋ ಕಂದಾ ಹಸಿವಾಯ್ತೇನಪ
ಯಾಕಿಂಗಳ್ತೀ ನಂದೇ ತಪ್ಪ
ಕರಕೊಂಡು ಹೋದಳು ಪುಟ್ಟನ ಒಳಕ್ಕೆ
ಕಾಲು ಕಿತ್ತರು ಶ್ರಾವಕರು ಹೊರಕ್ಕೆ
ಇಂತು ಸಂಪನ್ನ ಪುಟ್ಪನ ಕಚೇರಿ
ಹೊಟ್ಟೆಗೆ ಸೇರಲು ಮೂರ್ನಾಲ್ಕು ಪೂರಿ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...