ಬಟ್ಟೆಗಳ ಕಳಚಿನಿಂತ ಭಂಗಿ
ಕೆಳಗಡೆ ಹುಡುಕಿ ಕಾಣದುದು
ಮೇಲಿದೆಯೇನೋ ಎಂದು
ತದೇಕವಾಗಿ ಆಗಸದಲ್ಲಿ ಕೀಲಿಸಿ ಕಣ್ಣ
ಬೆಳಕಿಗೆ ಮುಖಮಾಡಿ
ಕೇಳದ ಧ್ವನಿಯೆಡೆಗೆ ಕಿವಿಮಾಡಿ
ತುಡಿಯದ ಸ್ಪಂದನಕ್ಕೆದೆ ತುಡಿತವ
ತೆರೆದಿಟ್ಟು ಗೆಜ್ಜೆ ತಾಳಲಯದಲ್ಲಿ
ಏಕತಾರಿಯ ಏಕನಾದದಲ್ಲಿ
ಗಾನ ದೇಣಿಯನೇರಿಯೇರಿ ಹೋಗಿ
ಅದನ್ನು ಕೂಡಿ ಸೇರಿ ಒಂದಾಗುವ ಹಂಬಲ
ಹಣ್ಣಾಗುವುದೋ ಅಥವಾ
ಕೈಕೊರಳುಗಳನಲಂಕರಿಸುವ
ಒಣ ರುದ್ರಾಕ್ಷಿ ಕಾಯಿಯಾಗುವುದೋ?
(೧೩-೩-೭೮)
*****
Related Post
ಸಣ್ಣ ಕತೆ
-
ಪಾಠ
ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…