ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು
ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು
ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು
ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು
ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು
ಗಂಡಾಂತರದ ಗಂಟು ತುರಬ ಬಿಗಿದಿದ್ದಳು
ಕಣ್ಣಗವಿಯಿಂದ ಮಿಣುಕು ಬೆಳಕನ್ನು ತೂರುತ್ತ
ಬೇಡುತ್ತಿದ್ದಳು
“ಯಾರಮ್ಮ” ನೀನೆಂದೆ
“ದಿಕ್ಕಿಲ್ಲ ಸ್ವಾಮಿ ಅನ್ನ ಕಾಣದೆಷ್ಟೋ ದಿನವಾದವು
ತುತ್ತನ್ನ ನೀಡಿ ಒಂದಿಷ್ಟಾಸರೆ ಕೊಡಿ”
“ನೋಡಿದರೆ ಕುಲೀನೆಯಾಗಿ ಕಾಣುವಿ ಯಾಕೆ ಹೀಗಾದೆ?”
“ನಾನೂ ಮೆರೆದೆ ಉರಿದೆ ಸ್ವಾಮಿ
ಅರಮನೆ ಸುರಮನೆಗಳ ಹೂಹಾಸಿಗೆಯಲ್ಲಿ
ವಿವಿಧ ಭಂಗಿಗಳಲ್ಲಿ ಕುಣಿದೆ ಬಲ್ಲಿದರ ಬೆಲೆವೆಣ್ಣಾಗಿ,
ದೀನದಲಿತರ ಕೇವಲ ಕನಸಕನ್ನೆಯಾಗಿದ್ದ
ನನ್ನೊಂದು ಕಟಾಕ್ಷಕ್ಕಾಗಿ ಬಾಯಿಬಾಯಿಬಿಡುತ್ತಿದ್ದವರೆಷ್ಟೊ ಮಂದಿ
ಕೆಲವರ ಕನಸಾಗಿ ಹಲವರ ಹಂಬಲವಾಗಿ ಹಾರಾಡುತ್ತಿದ್ದೆ
ಅಯ್ಯೋ ಆ ಗತಕಾಲ ವೈಭವವೆಲ್ಲ ಬಿಡಿ
ನನಗೆ ಶನಿಕಾಲ ಬಂತು
ನಾನು ಕಾಲಿಟ್ಟಲ್ಲೆಲ್ಲಾ ಮಸಣವಾಯಿತು
ನನ್ನ ಮುಟ್ಟಿದವರೆಲ್ಲ ದಟ್ಟ ದರಿದ್ರರಾದರು
ನಾನೊಬ್ಬ ಶಕುನ ಕನ್ನೆಯಾದೆ
ಆದರೂ ಕೆಲವರು ನನ್ನ ಕಂಡು
ನಾಲಗೆ ಚಪ್ಪರಿಸಿ ಚೀಪಿ ಒಗೆಯ ಬೇಕೆನ್ನುತ್ತಾರೆ
ನನ್ನ ಅರೆಮೈಗೆ ಬಾಡಿಗೆ ಬಟ್ಟೆಯುಡಿಸಿ ಮೆರೆಸಬಯಸುತ್ತಾರೆ
ನನ್ನ ಉದರವೋ ಬರಿದು
ನನ್ನ ಮನವರಿತು ಒಲವಿಗೊಲಿದು
ಕೂಡ ಬಲ್ಲ ಕೊಡಬಲ್ಲವರೇ ಇಲ್ಲ
ನೀವಾದರೂ….!” ಎಂದಾಗ
ಮೊದಲು ನಾಲಗೆಯಲೂರಿದ್ದ ನೀರು
ಅಲ್ಲೇ ಇಂಗಿ ಪ್ರೇತ ದರ್ಶನವಾದಂತಾಗಿ ‘ಮುಂದೆ ಹೋಗಿ ಬಾ’
ಎಂದು ಬಾಗಿಲು ಬಡಿದುಕೊಂಡೆ
(೨೨-೮-೭೮)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತುತ್ತು ಮತ್ತು ಮುತ್ತು
Next post ವ್ಯರ್ಥ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

cheap jordans|wholesale air max|wholesale jordans|wholesale jewelry|wholesale jerseys