Home / ಕವನ / ಕವಿತೆ / ಶಕುನ ಕನ್ಯೆ

ಶಕುನ ಕನ್ಯೆ

ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು
ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು
ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು
ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು
ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು
ಗಂಡಾಂತರದ ಗಂಟು ತುರಬ ಬಿಗಿದಿದ್ದಳು
ಕಣ್ಣಗವಿಯಿಂದ ಮಿಣುಕು ಬೆಳಕನ್ನು ತೂರುತ್ತ
ಬೇಡುತ್ತಿದ್ದಳು
“ಯಾರಮ್ಮ” ನೀನೆಂದೆ
“ದಿಕ್ಕಿಲ್ಲ ಸ್ವಾಮಿ ಅನ್ನ ಕಾಣದೆಷ್ಟೋ ದಿನವಾದವು
ತುತ್ತನ್ನ ನೀಡಿ ಒಂದಿಷ್ಟಾಸರೆ ಕೊಡಿ”
“ನೋಡಿದರೆ ಕುಲೀನೆಯಾಗಿ ಕಾಣುವಿ ಯಾಕೆ ಹೀಗಾದೆ?”
“ನಾನೂ ಮೆರೆದೆ ಉರಿದೆ ಸ್ವಾಮಿ
ಅರಮನೆ ಸುರಮನೆಗಳ ಹೂಹಾಸಿಗೆಯಲ್ಲಿ
ವಿವಿಧ ಭಂಗಿಗಳಲ್ಲಿ ಕುಣಿದೆ ಬಲ್ಲಿದರ ಬೆಲೆವೆಣ್ಣಾಗಿ,
ದೀನದಲಿತರ ಕೇವಲ ಕನಸಕನ್ನೆಯಾಗಿದ್ದ
ನನ್ನೊಂದು ಕಟಾಕ್ಷಕ್ಕಾಗಿ ಬಾಯಿಬಾಯಿಬಿಡುತ್ತಿದ್ದವರೆಷ್ಟೊ ಮಂದಿ
ಕೆಲವರ ಕನಸಾಗಿ ಹಲವರ ಹಂಬಲವಾಗಿ ಹಾರಾಡುತ್ತಿದ್ದೆ
ಅಯ್ಯೋ ಆ ಗತಕಾಲ ವೈಭವವೆಲ್ಲ ಬಿಡಿ
ನನಗೆ ಶನಿಕಾಲ ಬಂತು
ನಾನು ಕಾಲಿಟ್ಟಲ್ಲೆಲ್ಲಾ ಮಸಣವಾಯಿತು
ನನ್ನ ಮುಟ್ಟಿದವರೆಲ್ಲ ದಟ್ಟ ದರಿದ್ರರಾದರು
ನಾನೊಬ್ಬ ಶಕುನ ಕನ್ನೆಯಾದೆ
ಆದರೂ ಕೆಲವರು ನನ್ನ ಕಂಡು
ನಾಲಗೆ ಚಪ್ಪರಿಸಿ ಚೀಪಿ ಒಗೆಯ ಬೇಕೆನ್ನುತ್ತಾರೆ
ನನ್ನ ಅರೆಮೈಗೆ ಬಾಡಿಗೆ ಬಟ್ಟೆಯುಡಿಸಿ ಮೆರೆಸಬಯಸುತ್ತಾರೆ
ನನ್ನ ಉದರವೋ ಬರಿದು
ನನ್ನ ಮನವರಿತು ಒಲವಿಗೊಲಿದು
ಕೂಡ ಬಲ್ಲ ಕೊಡಬಲ್ಲವರೇ ಇಲ್ಲ
ನೀವಾದರೂ….!” ಎಂದಾಗ
ಮೊದಲು ನಾಲಗೆಯಲೂರಿದ್ದ ನೀರು
ಅಲ್ಲೇ ಇಂಗಿ ಪ್ರೇತ ದರ್ಶನವಾದಂತಾಗಿ ‘ಮುಂದೆ ಹೋಗಿ ಬಾ’
ಎಂದು ಬಾಗಿಲು ಬಡಿದುಕೊಂಡೆ
(೨೨-೮-೭೮)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...