ಕರೆ

ಇವನು
ಸಂತೆಯಲ್ಲಿ ವ್ಯಾಪಾರವಿಲ್ಲದೆ ಚಿಂತಿತನಾದ
ಬದುಕಿನ ತದುಕುವಿಗೆ ಮೈಗೊಟ್ಟ
ಬವಣೆಯ ಭಾರಕ್ಕೆ ಬೆಂಬಾಗಿದ
ದುರ್ವಾಸನೆಗಳಿಂದುಸುರು ಕಟ್ಟಿದ
ಪಾಶಗಳಿಂದ ಹೆಡೆಮುರಿ ಕಟ್ಟಿಸಿಕೊಂಡ
ದಾಸ್ಯದೊತ್ತಾಯದ ಜೀತಕ್ಕೆ ಹೆಗಲನಿತ್ತ
ಸ್ವಾತಂತ್ರ್ಯ ಸಂಕೋಲೆಗೆ ಕಾಲನಿತ್ತ
ನಾಯಿ ನರಿ ಗೂಬೆ ಗೋರಿಲ್ಲಾಗಳ
ಎಳೆದಾಟಕ್ಕೆ ನಜ್ಜು ಗೊಜ್ಜಾದ
ಮೀಸಲಡುಗೆಯ ಹಡಬೆನಾಯಿಗಿಕ್ಕಿ ಬಿಕ್ಕಿದ
ಹಣದೊಡನಾಡಿ ಹಾಣಾಹಣಿ ಹೆಣವಾದ
ಕಾಮನ ಕಣ್ಮುಚ್ಚಾಲೆಯಲ್ಲಿ ಕಣ್ಕಟ್ಟಿ
ಗೋಡೆ ಗೋಡೆ ಹಾಯ್ದು ಗಟಾರಕ್ಕೆ ಬಿದ್ದ
ಭೂತವು ಬೆಂಬತ್ತಿ ಬೇತಾಳವಾದಾಗ ತತ್ತಿಹಾಕಿದ
ನರನಾಡಿಗಳೆಲ್ಲ ಇರುಳೆಲ್ಲ ನರಳಿ ರೋಧಿಸಿದರೂ
ಹಗಲ ಹಗರಣದ ಹಡಬಿಟ್ಟಿ ಬಟ್ಟೆಗಳಲ್ಲಿ
ಮೈತೂರಿಸಿಕೊಂಡ ತನ್ನ ತಾ ಕಳಕೊಂಡ
ಹಲವಾರು ಹೆಜ್ಜೆಗಳಲ್ಲೇ ನಡೆದು
ಎಡವಿ‌ಎಡವಿ ದಾರಿ ತಪ್ಪಿದ
ಕೆಲವರು ತೋರಿಸಿದಲ್ಲಿ ತೆವಳಿ ಬವಳಿಬಿದ್ದ
ಒಲವಿನ ನೆಲೆಗಾಣದೆ ನೆಲುವಿಗೆ ಹಾರಿಹಾರಿ
ನೆಲಕಂಡು ನೊಂದು ಅವಡುಗಚ್ಚಿದ
ಸಲ್ಲದ ಸಿಂಗಾರಕ್ಕೆ ಒಲ್ಲದೆ ಅಣಿಯಾಗಿ
ಹೂಮುಡಿದು ಎಣ್ಣೆಯುರಿಸಿ ಕಾದೂಕಾದೂ
ಗಂಡ ಬಾರದೆ ಕಂಗಾಲಾದವಳಂತಾದ
ಅರ್ಥವಿಲ್ಲದ ಮಂತ್ರವೂದಿ ಅನರ್ಥದ ಹೊಗೆ‌ಎಬ್ಬಿಸಿ
ತತ್ವವಿಲ್ಲದ ತಂತ್ರದಲ್ಲಿ ತಂತಿಯಿಲ್ಲದ ತಂಬೂರಿ ಮೀಟಿದ
ದಿಕ್ಕೆಳೆದ ಕಡೆ ನಡೆದು ದಿಕ್ಕೆಟ್ಟ
ಜೀವನವು ಸಾವಿಗಿಂತ ಕಡೆಯಾದಾಗ
ಮನೆ ಮಸಣದಲ್ಲೋ ಗುಡ್ಡ ಗುಡಿಯಲ್ಲೋ
ಹೊಲ ಹಾದಿಯಲ್ಲೋ ನೆಲಜಲದಲ್ಲೋ
ಕೊನೆಗೊಮ್ಮೆ ಒಳಗಿನಾಳದಿಂದ
ಅಖಂಡ ಗೂಢಗರ್ಭಮೂಲದಿಂದ
ಕರೆಯೊಂದು ಕೇಳಿ ಬಂತು
ಈ ಕರೆಗಳಿಗೆ ಎಲ್ಲರೂ ಕಿವಿದೆರೆದಿದ್ದರೆ
ಇವನು ಕಿವುಡಾಗಿದ್ದ
ಆ ಕರೆಗೆಲ್ಲರೂ ಕಿವುಡಾಗಿದ್ದರೆ
ಇವನು ಕಿವಿದೆರೆದಿದ್ದ ಕಾಣದಿದ್ದುದಕೆ ಕಣ್ತೆರೆದಿದ್ದ
(೨೩-೪-೭೪)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ – ಚಂದ್ರ
Next post ಗೀಳು

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

cheap jordans|wholesale air max|wholesale jordans|wholesale jewelry|wholesale jerseys