ಕರೆ

ಇವನು
ಸಂತೆಯಲ್ಲಿ ವ್ಯಾಪಾರವಿಲ್ಲದೆ ಚಿಂತಿತನಾದ
ಬದುಕಿನ ತದುಕುವಿಗೆ ಮೈಗೊಟ್ಟ
ಬವಣೆಯ ಭಾರಕ್ಕೆ ಬೆಂಬಾಗಿದ
ದುರ್ವಾಸನೆಗಳಿಂದುಸುರು ಕಟ್ಟಿದ
ಪಾಶಗಳಿಂದ ಹೆಡೆಮುರಿ ಕಟ್ಟಿಸಿಕೊಂಡ
ದಾಸ್ಯದೊತ್ತಾಯದ ಜೀತಕ್ಕೆ ಹೆಗಲನಿತ್ತ
ಸ್ವಾತಂತ್ರ್ಯ ಸಂಕೋಲೆಗೆ ಕಾಲನಿತ್ತ
ನಾಯಿ ನರಿ ಗೂಬೆ ಗೋರಿಲ್ಲಾಗಳ
ಎಳೆದಾಟಕ್ಕೆ ನಜ್ಜು ಗೊಜ್ಜಾದ
ಮೀಸಲಡುಗೆಯ ಹಡಬೆನಾಯಿಗಿಕ್ಕಿ ಬಿಕ್ಕಿದ
ಹಣದೊಡನಾಡಿ ಹಾಣಾಹಣಿ ಹೆಣವಾದ
ಕಾಮನ ಕಣ್ಮುಚ್ಚಾಲೆಯಲ್ಲಿ ಕಣ್ಕಟ್ಟಿ
ಗೋಡೆ ಗೋಡೆ ಹಾಯ್ದು ಗಟಾರಕ್ಕೆ ಬಿದ್ದ
ಭೂತವು ಬೆಂಬತ್ತಿ ಬೇತಾಳವಾದಾಗ ತತ್ತಿಹಾಕಿದ
ನರನಾಡಿಗಳೆಲ್ಲ ಇರುಳೆಲ್ಲ ನರಳಿ ರೋಧಿಸಿದರೂ
ಹಗಲ ಹಗರಣದ ಹಡಬಿಟ್ಟಿ ಬಟ್ಟೆಗಳಲ್ಲಿ
ಮೈತೂರಿಸಿಕೊಂಡ ತನ್ನ ತಾ ಕಳಕೊಂಡ
ಹಲವಾರು ಹೆಜ್ಜೆಗಳಲ್ಲೇ ನಡೆದು
ಎಡವಿ‌ಎಡವಿ ದಾರಿ ತಪ್ಪಿದ
ಕೆಲವರು ತೋರಿಸಿದಲ್ಲಿ ತೆವಳಿ ಬವಳಿಬಿದ್ದ
ಒಲವಿನ ನೆಲೆಗಾಣದೆ ನೆಲುವಿಗೆ ಹಾರಿಹಾರಿ
ನೆಲಕಂಡು ನೊಂದು ಅವಡುಗಚ್ಚಿದ
ಸಲ್ಲದ ಸಿಂಗಾರಕ್ಕೆ ಒಲ್ಲದೆ ಅಣಿಯಾಗಿ
ಹೂಮುಡಿದು ಎಣ್ಣೆಯುರಿಸಿ ಕಾದೂಕಾದೂ
ಗಂಡ ಬಾರದೆ ಕಂಗಾಲಾದವಳಂತಾದ
ಅರ್ಥವಿಲ್ಲದ ಮಂತ್ರವೂದಿ ಅನರ್ಥದ ಹೊಗೆ‌ಎಬ್ಬಿಸಿ
ತತ್ವವಿಲ್ಲದ ತಂತ್ರದಲ್ಲಿ ತಂತಿಯಿಲ್ಲದ ತಂಬೂರಿ ಮೀಟಿದ
ದಿಕ್ಕೆಳೆದ ಕಡೆ ನಡೆದು ದಿಕ್ಕೆಟ್ಟ
ಜೀವನವು ಸಾವಿಗಿಂತ ಕಡೆಯಾದಾಗ
ಮನೆ ಮಸಣದಲ್ಲೋ ಗುಡ್ಡ ಗುಡಿಯಲ್ಲೋ
ಹೊಲ ಹಾದಿಯಲ್ಲೋ ನೆಲಜಲದಲ್ಲೋ
ಕೊನೆಗೊಮ್ಮೆ ಒಳಗಿನಾಳದಿಂದ
ಅಖಂಡ ಗೂಢಗರ್ಭಮೂಲದಿಂದ
ಕರೆಯೊಂದು ಕೇಳಿ ಬಂತು
ಈ ಕರೆಗಳಿಗೆ ಎಲ್ಲರೂ ಕಿವಿದೆರೆದಿದ್ದರೆ
ಇವನು ಕಿವುಡಾಗಿದ್ದ
ಆ ಕರೆಗೆಲ್ಲರೂ ಕಿವುಡಾಗಿದ್ದರೆ
ಇವನು ಕಿವಿದೆರೆದಿದ್ದ ಕಾಣದಿದ್ದುದಕೆ ಕಣ್ತೆರೆದಿದ್ದ
(೨೩-೪-೭೪)
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...