Home / ಕವನ / ಕವಿತೆ / ಸೋಲು

ಸೋಲು

ನೆಲಮುಗಿಲಿನೆತ್ತರಕು ನಿಂತಿದೆ ಭೂತ
ಕಂಡ ನೆತ್ತರು ಕೆಂಡದ ಮೇಲೆ ಕುದಿಯುತಿದೆ
ತನ್ನ ಬಾಲವನ್ನೇ ತಿನ್ನುತ್ತಾ ಸುರುಳಿಸುತ್ತಿಕೊಂಡಂತೆ ಆಗಿದೆ
ಪಂಜರದಿಂದ ಹೊರಬಂದ ಪಕ್ಷಿ
ಹಾರಲಾರದೆ ಹೊಯ್ದಾಡಿದಂತೆ ಸೋತಿದೆ
ನಂದನವನದಲ್ಲಿ ಕಣ್ಣೀರ ಹೊಳೆ
ಹೊದರಲ್ಲಡಗಿ ಹರಿಯುತ್ತದೆ ಗಳಗಳ
ಕೃಷ್ಣನ ಕೊಳಲಲ್ಲಿ ಕಂಸನುಸಿರು ಬಿಡುತ್ತಿದ್ದಾನೆ
ಹುಡುಕುತ್ತಿದ್ದ ಬಳ್ಳಿ ಕಾಲ್ತೊಡಕಿದಾಗ
ಹರಕೊಂಡು ತಿಂದರೆ
ಬಾಯೆಲ್ಲ ವಿಷವಾಯ್ತು
ಕಾವೇರಿಗೆ ಕಟ್ಟಿದಾಣೆಕಟ್ಟು
ಕಟ್ಟುವ ಮುನ್ನವೇ
ವಿಶ್ವೇಶ್ಚರಯ್ಯನಣಕಿಸಿ
ಹೊಲಹಳ್ಳಿಗಳಲ್ಲೆಲ್ಲ ನುಗ್ಗಿತು
ಸಮುದ್ರಕ್ಕೆ ನೀರು ಕುಡಿಯಲು ಬಿಟ್ಟಂತೆ
ಭಕ್ಷ್ಯ ರಾಶಿಯ ಬಾಚಿ ತಬ್ಬಿ ಉಪವಾಸ ನರಳಿದಂತೆ
ಪಟ್ಟೆ ಪೀತಾಂಬರದ ಮೇಲೆ ಬೆತ್ತಲೆ ಹೊರಳಾಡಿದಂತೆ
ತನ್ನರಮನೆಯಂಗಳದಲ್ಲಿ ನಿಂತು ತಾ ತಿರಿದುಂಡಂತೆ
ಚಿಕ್ಕೆಗಳನೆಣಿಸಲು ಕೋತಿ
ಮರದಿಂದ ಕೆಳಬಿದ್ದು ಹಲ್ಲುಕಿರಿದಂತೆ
ತೆಕ್ಕೆಗೆ ಅಮರದ ಬೊಡ್ಡೆ ಹಿಡಿದೇರಿ
ಬಾಯ್ತೆರೆದು ಬಿದ್ದಾಗ
ಯಾರಾದರೂ ನೋಡಿದರೇನೋ
ಎಂದು ಸುತ್ತ ನೋಡುವ ದುಸ್ಥಿತಿ
(೨೭-೧೨-೭೬)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...