Home / ಕವನ / ಕವಿತೆ / ಕನಸು

ಕನಸು

ಅಪ್ಸರೆಯರೊಡನೆ ಚಂದ್ರಲೋಕದಲ್ಲಿ ತಿರುಗಾಡಿ
ಆನಂದಿಸುವ ಕನಸನ್ನು
ಚಿರುಗುಮೀಸೆಯ ಹುಡುಗ ಕಾಣದಿದ್ದರೆ,

ಒಂದು ಮನೆ, ಒಂದು ಆಸರೆಯ ಮರ, ಬಳ್ಳಿಗೆ ಹೂವು ಹಣ್ಣು,
ತನ್ನ ಅಂಗಳದ ರಂಗೋಲಿ, ತನ್ನ ಸರದಾರನೊಡನೆ ಬದುಕಿನ
ಹೋಲಿರಂಗು,
ಇವನೆಲ್ಲ ಮೊಗ್ಗು ಹುಡುಗಿ ಕನಸದಿದ್ದರೆ,

ಕೂಸಿನ ಹಾಲು ನಗು, ಜೇನು ತೊದಲು,
ಅವ್ವು-ಅಮ್ಮಿ ಇವನೆಲ್ಲ
ಗರ್ಭಿಣಿಯು ಕನಸು ಕಾಣದಿದ್ದರೆ,

ತನ್ನ ಮಗನ ನಿಲುವಂಗಿ-ಡಿಗ್ರಿ, ಆಫೀಸರ್ ಗಿರಿ
ಅವನ ಸೂಟು-ನೋಟು
ಇವನ್ನು ತನ್ನ ಮೀಸೆ ತಿರುವಿನಲ್ಲಿ ಬೀಗಿ ತಂದೆಯು ಕಲ್ಪಿಸದಿದ್ದರೆ,

ತನ್ನ ಮಗನ ಹೆಂಡತಿ ತನ್ನನೋಲೈಸಿ ಸೇವೆ ಮಾಡಿ,
ಬಯ್ದರೂ-ತಿವಿದರೂ ತಲೆ‌ಎತ್ತದೆ ಬಾಗಿ ನಡಕೊಳ್ಳುವ
ಅತ್ತೆತನವ ತಾಯಿ ತನ್ನ ಮಗುವಿನ ಮುಂದೆ ಊಹಿಸಿ ಉಬ್ಬದಿದ್ದರೆ,

ಇಷ್ಟೆಲ್ಲ ಆಗಿ ತನ್ನ ಒಣಕೈಯಲ್ಲಿ
ಒಂದು ಹಸುಗೂಸು ತನ್ನಂತೆ ಬೊಚ್ಚು ಬಾಯಿ ತೆರೆದು
ಹಾಲುಗುಳುತ್ತ ಜಾಜಾ ಜೀಜೀ ಎಂಬುದನ್ನು
ಮೊಮ್ಮಗನ ಪಡೆಯದ ಅತ್ತೆ ಆಶಿಸದಿದ್ದರೆ,

ಕೂಸಾಗಿ-ಬೆಳೆದು-ನಂತರ
ಜೋಡಿ ಪಾರಿವಾಳಗಳಂತೆ ಒಂದು ಪುಟ್ಟ ಹೆಣ್ಣಿನೊಡನೆ ತನ್ನ
ಮುಂದೆ ಹಸೆಮೇಲೆ ಕುಳಿತಿರುವುದನ್ನು
ಮುದುಕಿ ತನ್ನ ಮಬ್ಬುಗಣ್ಣಿನಿದಿರು ಕಟ್ಟಿಕೊಳ್ಳದಿದ್ದರೆ

ಮನುಜರೆಲ್ಲ ತಮಗಿರುವುದಕ್ಕಿಂತ
ಇನ್ನು ಹೆಚ್ಚು ಹೆಚ್ಚು ಸುಖಗಳಿಗಾಗಿ ಹಂಬಲಿಸಿ-ಕನಸಿ-ನನಸದಿದ್ದರೆ
ಈ ಬದುಕಿನಲ್ಲಿ ಬಾಳಬೇಕು ಎಂಬಂಥಾದ್ದು ಏನಿದ್ದಿತು
ಇಲ್ಲ-ಬದುಕನ್ನು ನಡೆಸುವುದೇ ಕನಸು
ನಾಳಿನ ಸವಿಗನಸು
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...