Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...