ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ
Next post ಮಿಂಚುಳ್ಳಿ ಬೆಳಕಿಂಡಿ – ೪

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…