Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...