Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...