Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...