Home / ಕಥೆ / ಜನಪದ / ಕಾಮಣ್ಣ ಭೀಮಣ್ಣ

ಕಾಮಣ್ಣ ಭೀಮಣ್ಣ

Kamanna Bheemannaಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿಯಲಾರದ ಒಂದು ಸಮಸ್ಯೆಯಿತ್ತು ಅದೇನೆಂದರೆ – ಹೋಳಿಗೆಯಲ್ಲಿ ಹೂರಣವನ್ನು ಯಾವದಾರಿಯಲ್ಲಿ ಹಾಕುತ್ತಾರೆ ?

ಅವರಿಬ್ಬರು ಕುರಿ ಹಿಂಡು ಮುಂದೆ ಮಾಡಿಕೊಂಡು ಸಾಗಿದಾಗ, ಒಂದು ದೊಡ್ಡ ಹೊಲದಲ್ಲಿ ಹಾಯ್ದು ಹೋಗಬೇಕಾಯಿತು. ಅಲ್ಲಿ ಏಳು ಗಳೆ ನಿಂತಿದ್ದವು; ಮತ್ತು ಹತ್ತಿರದಲ್ಲಿಯೇ ಹದಿನಾಲ್ಕು ಎತ್ತುಗಳು ಮೇಯುತ್ತಿದ್ದವು. ಗಳೆ ಹಾಗೂ ಎತ್ತುಗಳನ್ನು ಕಂಡು ಕಾಮಣ್ಣನಲ್ಲಿ ಗಣಿತದ ರೀತಿ ಸುಳಿದು ಬಂತು – “ಏ ಭೀಮಾ, ಇಲ್ಲಿ ನೋಡು. ಬೆಸ ಗಳೆ, ಸರಿ ಎತ್ತುಗಳಿವೆ. ಬೆಸ ಗಳೇಗಳಿಗೆ ಸರಿ ಎತ್ತುಗಳನ್ನು ಹೇಗೆ ಹೂಡುವರೋ ನೋಡಿಯೇ ಹೋಗೋಣ.”

ಅವರು ಮಂಡಿಗೆಯನ್ನೇನೊ ಹಾಗೆ ಮಾಡಿದರು, ಆದರೆ ಮುಖತಗ್ಗಿಸಿ ಸಾಗಿದ ಕುರಿಹಿಂಡು ಮುಂದಿನ ಮರಡಿಯೇರಿ ಹೋಗಿದ್ದರಿಂದ ಅವರು ಆ ಹೊಲದಲ್ಲಿ ಆಳುಗಳು ಬರುವವರೆಗೆ ನಿಲ್ಲದೆ, ಕುರಿಹಿಂಡು ಮೇಯುತ್ತಿರುವ ಮರಡಿಯನ್ನೇರಿ ಹೋದರು.

ಮುಂದೆ ಒಂದರ್ಧತಾಸಿನಲ್ಲಿ ಹೊರಳಿನೋಡಿದರೆ, ಎಲ್ಲ ಗಳೇಗಳನ್ನು ಎತ್ತುಗಳು ಎಳೆಯುತ್ತ ಉಳತೊಡಗಿದ್ದು ಕಾಣಿಸಿತು.

ಇನ್ನೊಮ್ಮೆ ಒಂದು ಜೋಳದ ಹೊಲದ ಬದಿಯಲ್ಲಿ ತಮ್ಮ ಹಿಂಡಿನೊಡನೆ ಹೊರಟಾಗ ಎಲ್ಲಾ ಕಡೆಗೂ ಕಣ್ಣಾಡಿಸಿ, ಕಣ್ಣೋಡಿಸಿ ನೋಡಿದರು. ಜೋಳದ ಬೆಳೆ ಎಡೆಗೆ ಬಂದಿತ್ತು. ಭೀಮಣ್ಣ ಕೇಳಿದನು – ಕಾಮಾ. ಈ ಒಕ್ಕಲಿಗರು ಗಿಪ್ಪದ ಹಾಲು ಕುಡಿದು ಬಾಳ್ವೆಮಾಡುವರೇನೋ ? ಇಡಿಯ ಹೊಲವನ್ನೆಲ್ಲ ಜೋಳಬಿತ್ತಿಬಿಟ್ಟಿದ್ದಾರೆ. ನಾಳೆ ಬೆಳೆಯೆಲ್ಲ ತೆನಿಹಿಡಿದು, ಕಾಳು ಆಗಿ, ಹಕ್ಕಿ ಕಾವಲಿಗೆ ಬಂದಾಗ ಏತರಮೇಲೆ ನಿಂತು ಹಕ್ಕಿ ಹೊಡೆಯುತ್ತಾರೆ ? ಅಟ್ಟ ಹಾಕುವುದೆಲ್ಲಿ?”

“ಅಹುದು. ಬಿತ್ತುವಾಗ ಅವರು ಅಟ್ಟ ಹಾಕುವುದನ್ನು ಲೆಕ್ಕಿಸಿಯೇ ಇಲ್ಲ. ತೆನೆಗಳೆಲ್ಲ ಕಾಳು ಹಿಡಿದಾಗ ಅವರಿಗೆ ತಮ್ಮ ತಪ್ಪು ತಿಳಿಯುತ್ತದೆ” ಎಂದು
ಮರುನುಡಿದನು ಕಾಮಣ್ಣ.

ಹದಿನೈದು ದಿನಗಳ ತರ್ವಾಯ ಅವರಿಬ್ಬರೂ ಅದೇ ದಾರಿಯಿಂದ ತಮ್ಮ ಹಿಂಡುಗಳೊಡನೆ ಸಾಗಿದಾಗ ಆ ಜೋಳದಲ್ಲಿ ಅಟ್ಟ ಕಾಣಿಸಿತು. “ಯಾರು
ಹೇಳಿಕೊಟ್ಟಿದ್ದಾರು ಅವರಿಗೆ ಅಟ್ಟ ಹಾಕುವ ಯುಕ್ತಿಯನ್ನು ?” ಎಂದು ಅವರು ಮಾತಾಡುತ್ತ ಹೊರಟಾಗ, ಹಿಂದಿನಿಂದ ಒಂದು ದನಿ ಬಂದು – “ಅಟ್ಟ ಹಾಕುವ ಯುಕ್ತಿಯೇ?

“ಹೊಲದ ತುಂಬ ಜೋಳ ಬಿತ್ತಿದ್ದರು. ಅಟ್ಟಹಾಕುವದಕ್ಕೆ ಸ್ಥಳವನ್ನೇ ಬಿಟ್ಟಿರಲಿಲ್ಲ. ಈಗ ಅಟ್ಟ ಹೇಗೆ ಹಾಕಿದರು ?

“ಅದರಲ್ಲೇನು ಜಾಣತನವಿದೆ ? ಹತ್ತೆಂಟು ಜೋಳದ ದಂಟು ಕಿತ್ತಿ ಹಾಕಿದರಾಯ್ತು. ಅಟ್ಟ ಹಾಕುವದಕ್ಕೆ ಸ್ಥಳ ಆಗುತ್ತದೆ” ಎಂದವನೇ ಬಿರಿಬಿರಿ
ಹೋಗಿಬಿಟ್ಟನು, ಆ ಹೊಲದ ಮುದುಕ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್