ಗುರುಭ್ಯೋನಮಃ

ಗುರುಭ್ಯೋನಮಃ

ಚಿತ್ರ: ಡೇವಿಡ್ ಮಾರ್ಕ್
ಚಿತ್ರ: ಡೇವಿಡ್ ಮಾರ್ಕ್

ನಮ್ಮ ಪರಂಪರೆಯುದ್ದಕ್ಕೂ ‘ಗುರು’ ಎಂಬ ಪದವನ್ನು ಶ್ರೇಷ್ಠವೆಂದು ಬಗೆದು ಅದಕ್ಕೆ ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದೆ. ‘ಗುರು’ ಎಂದರೆ ದೊಡ್ಡದೆಂದೇ ಇಂದಿನ ಮಾನವ ಭೌತಿಕ ಜಗತ್ತಿನಲ್ಲಿ ಪೂಜ್ಯ ಭಾವನೆಯನ್ನು ಕೊಡುತ್ತಾ ಬಂದಿದಾನೆ. ‘ಗುರು’ ಎಂಬುವುದು ಸೂರ್ಯನ ಸುತ್ತಲೂ ಸುತ್ತುತ್ತಿರುವ ಅತ್ಯಂತ ದೊಡ್ಡ ಗ್ರಹ. ನಾವು ವಾಸಿಸುವ ಅಥವಾ ಇತರ ಗ್ರಹಗಳಿಗಿಂತಲೂ ಅತ್ಯಂತ ದೊಡ್ಡದಾಗಿದ್ದರಿಂದ ಭೌತಿಕ ಜಗತ್ತಿನಲ್ಲಿಯೂ ಈ ‘ಗುರು’ ಪದವು ಮೇಲ್ಮಟ್ಟದ್ದಾಗಿ ಬೆಳೆಯಿತು.

ಸೂರ್ಯಮಂಡಲದಲ್ಲಿ ಇದೊಂದು ವಿಶಿಷ್ಟವಾದ ಗ್ರ್‍ಅಹ. ಇದು ದೊಡ್ಡ ಗ್ರಹವೂ ಹೌದು ಚಿಕ್ಕ ಸೂರ್ಯಮಂಡಲವೂ ಹೌದು. ಇದಕ್ಕೆ ೧೧ಕ್ಕೂ ಕಡಿಮೆ ಇಲ್ಲದಷ್ಟು ಉಪಗ್ರಹಗಳಿವೆ. ಚಂದ್ರನಂತಹ ಅನೇಕ ಉಪಗ್ರಹಗಳು ಗುರುಗ್ರಹದ ಸುತ್ತಲೂ ಸುತ್ತುತ್ತಲಿವೆ. ೪ ಗ್ರಹಗಳು ಚಂದ್ರನಷ್ಟೇ ದೊಡ್ಡವಾಗಿವೆ. ಎರಡು ಉಪಗ್ರಹಗಳು ಕೇವಲ ೩೦ ಮೈಲಿಗಳ ವ್ಯಾಸವನ್ನು ಹೊಂದಿದ್ದರೆ, ಮೂರು ಗ್ರಹಗಳು ಕೇವಲ ೧೫ ಮೈಲಿಗಳ ವ್ಯಾಸವನ್ನು ಹೊಂದಿವೆ. ಗುರುಗ್ರಹದ ವ್ಯಾಸವು ಭೂಮಿಯ ವ್ಯಾಸಕ್ಕಿಂತಲೂ ೧,೩೦೦ ಪಟ್ಟು ದೊಡ್ಡದು. ಅಂದರೆ ಭೂಮಿಗಿಂತ ೩೬೭,೦೦೦,೦೦೦ ಮೈಲುಗಳ ಅಂತರದಲ್ಲಿದ್ದರೂ ಬರಿಗಣ್ಣಿಗೆ ಕಾಣುತ್ತದೆ. (ಕೆಲವೆಡೆ ಮಾತ್ರ) ಖಗೋಳ ಶಾಸ್ತ್ರಜ್ಞರು ಟೆಲಿಸ್ಕೋಪಿನಿಂದ ನೋಡಿದಾಗ ಗುರುಗ್ರಹಕ್ಕೆ ಕಪ್ಪುಪಟ್ಟಿಗಳು ಇರುವುದನ್ನು ಮತ್ತು ಅವು ವಲಯಗಳಿಂದ ಬೇರ್ಪಟ್ಟಿರುವುದನ್ನು ಕಂಡುಕೊಂಡಿದ್ದಾರೆ. ಈ ಪಟ್ಟಿಗಳು, ವಲಯಗಳು ಬದಲಾಗುತ್ತ ಇರುತ್ತವೆ. ಆಸಕ್ತಿಯ ವಿಷಯವೆಂದರೆ ಗುರುಗ್ರಹದ ಮೇಲೊಂದು ‘ಕೆಂಪುತಲೆ’ ಇದ್ದು ಅದು ಸು. ೩೦,೦೦೦ ಮೈಲುಗಳ ಉದ್ದ ಮತ್ತು ೮,೦೦೦ ಮೈಲುಗಳ ಅಗಲವನ್ನು ಹೊಂದಿದೆ. ಕಲೆ ಕೆಲವೊಮ್ಮೆ ಕಾಣಿಸುವುದೇ ಇಲ್ಲ, ಕೆಲವೊಮ್ಮೆ ಚಲಿಸುತ್ತಿರುವಂತೆ ಕಾಣಿಸುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಳವು
Next post ಸಿಗರೇಟು

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…