Home / ಲೇಖನ / ವಿಜ್ಞಾನ / ಗುರುಭ್ಯೋನಮಃ

ಗುರುಭ್ಯೋನಮಃ

ಚಿತ್ರ: ಡೇವಿಡ್ ಮಾರ್ಕ್
ಚಿತ್ರ: ಡೇವಿಡ್ ಮಾರ್ಕ್

ನಮ್ಮ ಪರಂಪರೆಯುದ್ದಕ್ಕೂ ‘ಗುರು’ ಎಂಬ ಪದವನ್ನು ಶ್ರೇಷ್ಠವೆಂದು ಬಗೆದು ಅದಕ್ಕೆ ಉನ್ನತ ಸ್ಥಾನಮಾನಗಳನ್ನು ಕಲ್ಪಿಸಿದೆ. ‘ಗುರು’ ಎಂದರೆ ದೊಡ್ಡದೆಂದೇ ಇಂದಿನ ಮಾನವ ಭೌತಿಕ ಜಗತ್ತಿನಲ್ಲಿ ಪೂಜ್ಯ ಭಾವನೆಯನ್ನು ಕೊಡುತ್ತಾ ಬಂದಿದಾನೆ. ‘ಗುರು’ ಎಂಬುವುದು ಸೂರ್ಯನ ಸುತ್ತಲೂ ಸುತ್ತುತ್ತಿರುವ ಅತ್ಯಂತ ದೊಡ್ಡ ಗ್ರಹ. ನಾವು ವಾಸಿಸುವ ಅಥವಾ ಇತರ ಗ್ರಹಗಳಿಗಿಂತಲೂ ಅತ್ಯಂತ ದೊಡ್ಡದಾಗಿದ್ದರಿಂದ ಭೌತಿಕ ಜಗತ್ತಿನಲ್ಲಿಯೂ ಈ ‘ಗುರು’ ಪದವು ಮೇಲ್ಮಟ್ಟದ್ದಾಗಿ ಬೆಳೆಯಿತು.

ಸೂರ್ಯಮಂಡಲದಲ್ಲಿ ಇದೊಂದು ವಿಶಿಷ್ಟವಾದ ಗ್ರ್‍ಅಹ. ಇದು ದೊಡ್ಡ ಗ್ರಹವೂ ಹೌದು ಚಿಕ್ಕ ಸೂರ್ಯಮಂಡಲವೂ ಹೌದು. ಇದಕ್ಕೆ ೧೧ಕ್ಕೂ ಕಡಿಮೆ ಇಲ್ಲದಷ್ಟು ಉಪಗ್ರಹಗಳಿವೆ. ಚಂದ್ರನಂತಹ ಅನೇಕ ಉಪಗ್ರಹಗಳು ಗುರುಗ್ರಹದ ಸುತ್ತಲೂ ಸುತ್ತುತ್ತಲಿವೆ. ೪ ಗ್ರಹಗಳು ಚಂದ್ರನಷ್ಟೇ ದೊಡ್ಡವಾಗಿವೆ. ಎರಡು ಉಪಗ್ರಹಗಳು ಕೇವಲ ೩೦ ಮೈಲಿಗಳ ವ್ಯಾಸವನ್ನು ಹೊಂದಿದ್ದರೆ, ಮೂರು ಗ್ರಹಗಳು ಕೇವಲ ೧೫ ಮೈಲಿಗಳ ವ್ಯಾಸವನ್ನು ಹೊಂದಿವೆ. ಗುರುಗ್ರಹದ ವ್ಯಾಸವು ಭೂಮಿಯ ವ್ಯಾಸಕ್ಕಿಂತಲೂ ೧,೩೦೦ ಪಟ್ಟು ದೊಡ್ಡದು. ಅಂದರೆ ಭೂಮಿಗಿಂತ ೩೬೭,೦೦೦,೦೦೦ ಮೈಲುಗಳ ಅಂತರದಲ್ಲಿದ್ದರೂ ಬರಿಗಣ್ಣಿಗೆ ಕಾಣುತ್ತದೆ. (ಕೆಲವೆಡೆ ಮಾತ್ರ) ಖಗೋಳ ಶಾಸ್ತ್ರಜ್ಞರು ಟೆಲಿಸ್ಕೋಪಿನಿಂದ ನೋಡಿದಾಗ ಗುರುಗ್ರಹಕ್ಕೆ ಕಪ್ಪುಪಟ್ಟಿಗಳು ಇರುವುದನ್ನು ಮತ್ತು ಅವು ವಲಯಗಳಿಂದ ಬೇರ್ಪಟ್ಟಿರುವುದನ್ನು ಕಂಡುಕೊಂಡಿದ್ದಾರೆ. ಈ ಪಟ್ಟಿಗಳು, ವಲಯಗಳು ಬದಲಾಗುತ್ತ ಇರುತ್ತವೆ. ಆಸಕ್ತಿಯ ವಿಷಯವೆಂದರೆ ಗುರುಗ್ರಹದ ಮೇಲೊಂದು ‘ಕೆಂಪುತಲೆ’ ಇದ್ದು ಅದು ಸು. ೩೦,೦೦೦ ಮೈಲುಗಳ ಉದ್ದ ಮತ್ತು ೮,೦೦೦ ಮೈಲುಗಳ ಅಗಲವನ್ನು ಹೊಂದಿದೆ. ಕಲೆ ಕೆಲವೊಮ್ಮೆ ಕಾಣಿಸುವುದೇ ಇಲ್ಲ, ಕೆಲವೊಮ್ಮೆ ಚಲಿಸುತ್ತಿರುವಂತೆ ಕಾಣಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...