ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

table-71380_960_720ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ.  ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ.  ವಿಶಿಷ್ಠ ನಾದಗಳು ಕಿವಿಗೆ ಬೀಳುತ್ತಿರುವಾಗ ತಿನ್ನುವ ಪದಾರ್ಥಗಳು ಹೆಚ್ಚು ರುಚಿಯಾಗಿ ಕಾಣಿಸುತ್ತದೆಂದು ಅವರ ಪ್ರಯೋಗಗಳಲ್ಲಿ ವ್ಯಕ್ತವಾಗಿದೆ.

ವ್ಯಕ್ತಿಗಳು ಬೀರ್‍, ಕಾಫಿ, ಚಹಾ, ವಿಸ್ಕಿ ಇಂಥ ವಿವಿಧ ಪೇಯಗಳನ್ನು ಸೇವಿಸುತ್ತಿರುವಾಗ ನಾದೋತ್ಪಕ ಯಂತ್ರದಿಂದ ವಿವಿಧ ಆವರ್ತನ ಪ್ರಮಾಣಗಳ ಧ್ವನಿಗಳನ್ನು ಹೊರಡಿಸಿದರೆ ಆ ವಿಶಿಷ್ಠ ಆವರ್ತನದ ಧ್ವನಿಯನ್ನು ಕೇಳುವಾಗ ಪೇಯ ಹೆಚ್ಚು ರುಚಿಕಟ್ಟಾಗಿ ಅನಿಸುತ್ತದೆ!  ಧ್ವನಿಯನ್ನು ಅದಕ್ಕಿಂತ ಏರಿಸಿದರೆ ಅಥವಾ ಇಳಿಸಿದರೆ ಪೇಯದ ರುಚಿ ಕೆಟ್ಟಂತೆ ಅನಿಸುತ್ತದೆ.

ಆದರೆ ಈ ರುಚಿಧ್ವನಿ ಆಯಾ ವ್ಯಕ್ತಿಯನ್ನು ಅವಲಂಬಿಸದೇ ಆಯಾ ಪೇಯವನ್ನು ಅವಲಂಬಿಸಿದೆ.  ಬೀರನ್ನು ರುಚಿಗೊಳಿಸವು ನಾದವೇ ಬೇರೆ, ವಿಸ್ಕಿಯನ್ನು, ಕಾಫಿಯನ್ನು ರುಚಿಗೊಳಿಸುವ ನಾದವೇ ಬೇರೆ.  ಆಯಾ ಪೇಯ ಸಂವಾದಿಯಾದ ನಾದ ಬರುತ್ತಿದ್ದರೆ ಸಾಮಾನ್ಯವಾಗಿ ಎಲ್ಲರಿಗೂ ಆಯಾ ಪೇಯ ರುಚಿಯಾಗಿ ಕಾಣುತ್ತದೆ!

ಅಂದರೆ ಇದರರ್ಥ, ಹೋಟೆಲ್ಗಳಲ್ಲಿ ಗಿರಾಕಿಗಳು ಭೋಜನ ಮಾಡುತ್ತಿರುವಾಗ ಅಥವಾ ಪೇಯ ಕುಡಿಯುತ್ತಿರುವಾಗ ಒಂದು ವಿಶಿಷ್ಠ ಬಗೆಯ ನಾದ ಹೊರಡಿಸಿದರೆ ಅವರಿಗೆ ಆ ಭೋಜನ, ಪೇಯ ರುಚಿಕಟ್ಟಾಗಿ ಅನಿಸುತ್ತದೆ!  ಹೋಟೆಲ್ ಮಾಲಿಕರೆ ನಿಮಗೆ ಈ ಶೋಧದ ಅರ್ಥವಾಗಿರಬೇಕಲ್ಲ?  ತಾವು ಸಹ ಈ ಶೋಧದ ಪ್ರಯೋಜನ ಪಡೆಯಬಹುದಲ್ಲ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನುಷ್ಯ
Next post ದಾಂಪತ್ಯ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys