Home / ಲೇಖನ / ವಿಜ್ಞಾನ / ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

table-71380_960_720ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ.  ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ.  ವಿಶಿಷ್ಠ ನಾದಗಳು ಕಿವಿಗೆ ಬೀಳುತ್ತಿರುವಾಗ ತಿನ್ನುವ ಪದಾರ್ಥಗಳು ಹೆಚ್ಚು ರುಚಿಯಾಗಿ ಕಾಣಿಸುತ್ತದೆಂದು ಅವರ ಪ್ರಯೋಗಗಳಲ್ಲಿ ವ್ಯಕ್ತವಾಗಿದೆ.

ವ್ಯಕ್ತಿಗಳು ಬೀರ್‍, ಕಾಫಿ, ಚಹಾ, ವಿಸ್ಕಿ ಇಂಥ ವಿವಿಧ ಪೇಯಗಳನ್ನು ಸೇವಿಸುತ್ತಿರುವಾಗ ನಾದೋತ್ಪಕ ಯಂತ್ರದಿಂದ ವಿವಿಧ ಆವರ್ತನ ಪ್ರಮಾಣಗಳ ಧ್ವನಿಗಳನ್ನು ಹೊರಡಿಸಿದರೆ ಆ ವಿಶಿಷ್ಠ ಆವರ್ತನದ ಧ್ವನಿಯನ್ನು ಕೇಳುವಾಗ ಪೇಯ ಹೆಚ್ಚು ರುಚಿಕಟ್ಟಾಗಿ ಅನಿಸುತ್ತದೆ!  ಧ್ವನಿಯನ್ನು ಅದಕ್ಕಿಂತ ಏರಿಸಿದರೆ ಅಥವಾ ಇಳಿಸಿದರೆ ಪೇಯದ ರುಚಿ ಕೆಟ್ಟಂತೆ ಅನಿಸುತ್ತದೆ.

ಆದರೆ ಈ ರುಚಿಧ್ವನಿ ಆಯಾ ವ್ಯಕ್ತಿಯನ್ನು ಅವಲಂಬಿಸದೇ ಆಯಾ ಪೇಯವನ್ನು ಅವಲಂಬಿಸಿದೆ.  ಬೀರನ್ನು ರುಚಿಗೊಳಿಸವು ನಾದವೇ ಬೇರೆ, ವಿಸ್ಕಿಯನ್ನು, ಕಾಫಿಯನ್ನು ರುಚಿಗೊಳಿಸುವ ನಾದವೇ ಬೇರೆ.  ಆಯಾ ಪೇಯ ಸಂವಾದಿಯಾದ ನಾದ ಬರುತ್ತಿದ್ದರೆ ಸಾಮಾನ್ಯವಾಗಿ ಎಲ್ಲರಿಗೂ ಆಯಾ ಪೇಯ ರುಚಿಯಾಗಿ ಕಾಣುತ್ತದೆ!

ಅಂದರೆ ಇದರರ್ಥ, ಹೋಟೆಲ್ಗಳಲ್ಲಿ ಗಿರಾಕಿಗಳು ಭೋಜನ ಮಾಡುತ್ತಿರುವಾಗ ಅಥವಾ ಪೇಯ ಕುಡಿಯುತ್ತಿರುವಾಗ ಒಂದು ವಿಶಿಷ್ಠ ಬಗೆಯ ನಾದ ಹೊರಡಿಸಿದರೆ ಅವರಿಗೆ ಆ ಭೋಜನ, ಪೇಯ ರುಚಿಕಟ್ಟಾಗಿ ಅನಿಸುತ್ತದೆ!  ಹೋಟೆಲ್ ಮಾಲಿಕರೆ ನಿಮಗೆ ಈ ಶೋಧದ ಅರ್ಥವಾಗಿರಬೇಕಲ್ಲ?  ತಾವು ಸಹ ಈ ಶೋಧದ ಪ್ರಯೋಜನ ಪಡೆಯಬಹುದಲ್ಲ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...