Home / ಲೇಖನ / ವಿಜ್ಞಾನ / ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

table-71380_960_720ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ.  ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ.  ವಿಶಿಷ್ಠ ನಾದಗಳು ಕಿವಿಗೆ ಬೀಳುತ್ತಿರುವಾಗ ತಿನ್ನುವ ಪದಾರ್ಥಗಳು ಹೆಚ್ಚು ರುಚಿಯಾಗಿ ಕಾಣಿಸುತ್ತದೆಂದು ಅವರ ಪ್ರಯೋಗಗಳಲ್ಲಿ ವ್ಯಕ್ತವಾಗಿದೆ.

ವ್ಯಕ್ತಿಗಳು ಬೀರ್‍, ಕಾಫಿ, ಚಹಾ, ವಿಸ್ಕಿ ಇಂಥ ವಿವಿಧ ಪೇಯಗಳನ್ನು ಸೇವಿಸುತ್ತಿರುವಾಗ ನಾದೋತ್ಪಕ ಯಂತ್ರದಿಂದ ವಿವಿಧ ಆವರ್ತನ ಪ್ರಮಾಣಗಳ ಧ್ವನಿಗಳನ್ನು ಹೊರಡಿಸಿದರೆ ಆ ವಿಶಿಷ್ಠ ಆವರ್ತನದ ಧ್ವನಿಯನ್ನು ಕೇಳುವಾಗ ಪೇಯ ಹೆಚ್ಚು ರುಚಿಕಟ್ಟಾಗಿ ಅನಿಸುತ್ತದೆ!  ಧ್ವನಿಯನ್ನು ಅದಕ್ಕಿಂತ ಏರಿಸಿದರೆ ಅಥವಾ ಇಳಿಸಿದರೆ ಪೇಯದ ರುಚಿ ಕೆಟ್ಟಂತೆ ಅನಿಸುತ್ತದೆ.

ಆದರೆ ಈ ರುಚಿಧ್ವನಿ ಆಯಾ ವ್ಯಕ್ತಿಯನ್ನು ಅವಲಂಬಿಸದೇ ಆಯಾ ಪೇಯವನ್ನು ಅವಲಂಬಿಸಿದೆ.  ಬೀರನ್ನು ರುಚಿಗೊಳಿಸವು ನಾದವೇ ಬೇರೆ, ವಿಸ್ಕಿಯನ್ನು, ಕಾಫಿಯನ್ನು ರುಚಿಗೊಳಿಸುವ ನಾದವೇ ಬೇರೆ.  ಆಯಾ ಪೇಯ ಸಂವಾದಿಯಾದ ನಾದ ಬರುತ್ತಿದ್ದರೆ ಸಾಮಾನ್ಯವಾಗಿ ಎಲ್ಲರಿಗೂ ಆಯಾ ಪೇಯ ರುಚಿಯಾಗಿ ಕಾಣುತ್ತದೆ!

ಅಂದರೆ ಇದರರ್ಥ, ಹೋಟೆಲ್ಗಳಲ್ಲಿ ಗಿರಾಕಿಗಳು ಭೋಜನ ಮಾಡುತ್ತಿರುವಾಗ ಅಥವಾ ಪೇಯ ಕುಡಿಯುತ್ತಿರುವಾಗ ಒಂದು ವಿಶಿಷ್ಠ ಬಗೆಯ ನಾದ ಹೊರಡಿಸಿದರೆ ಅವರಿಗೆ ಆ ಭೋಜನ, ಪೇಯ ರುಚಿಕಟ್ಟಾಗಿ ಅನಿಸುತ್ತದೆ!  ಹೋಟೆಲ್ ಮಾಲಿಕರೆ ನಿಮಗೆ ಈ ಶೋಧದ ಅರ್ಥವಾಗಿರಬೇಕಲ್ಲ?  ತಾವು ಸಹ ಈ ಶೋಧದ ಪ್ರಯೋಜನ ಪಡೆಯಬಹುದಲ್ಲ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...