Home / ಲೇಖನ / ವಿಜ್ಞಾನ / ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

ಹೋಟೆಲ್ ಮಾಲಿಕರಿಗೊಂದು ಕಿವಿಮಾತು!

table-71380_960_720ರುಚಿಗೂ, ಮೂಗಿಗೂ ಸಂಬಂಧವಿದೆಯೆಂಬುದು ಎಂದೋ ವಿಜ್ಞಾನಿಗಳು ಕಂಡ ಮಾತಾಗಿದೆ.  ಅಲ್ಲದೆ, ಕಿವಿಗೂ ರುಚಿಗೂ ಸಂಬಂಧವುಂಟೆಂದು ಡನ್ಮಾರ್ಕಿನ ವಿಜ್ಞಾನಿ ಡಾ|| ಕ್ರಿಶ್ಚನ್ ಹೋಲ್ಟ್ ಹ್ಯಾನ್‌ಸನ್ನರು ಎಂದೋ ಪ್ರತಿಪಾದಿಸಿದ್ದಾರೆ.  ವಿಶಿಷ್ಠ ನಾದಗಳು ಕಿವಿಗೆ ಬೀಳುತ್ತಿರುವಾಗ ತಿನ್ನುವ ಪದಾರ್ಥಗಳು ಹೆಚ್ಚು ರುಚಿಯಾಗಿ ಕಾಣಿಸುತ್ತದೆಂದು ಅವರ ಪ್ರಯೋಗಗಳಲ್ಲಿ ವ್ಯಕ್ತವಾಗಿದೆ.

ವ್ಯಕ್ತಿಗಳು ಬೀರ್‍, ಕಾಫಿ, ಚಹಾ, ವಿಸ್ಕಿ ಇಂಥ ವಿವಿಧ ಪೇಯಗಳನ್ನು ಸೇವಿಸುತ್ತಿರುವಾಗ ನಾದೋತ್ಪಕ ಯಂತ್ರದಿಂದ ವಿವಿಧ ಆವರ್ತನ ಪ್ರಮಾಣಗಳ ಧ್ವನಿಗಳನ್ನು ಹೊರಡಿಸಿದರೆ ಆ ವಿಶಿಷ್ಠ ಆವರ್ತನದ ಧ್ವನಿಯನ್ನು ಕೇಳುವಾಗ ಪೇಯ ಹೆಚ್ಚು ರುಚಿಕಟ್ಟಾಗಿ ಅನಿಸುತ್ತದೆ!  ಧ್ವನಿಯನ್ನು ಅದಕ್ಕಿಂತ ಏರಿಸಿದರೆ ಅಥವಾ ಇಳಿಸಿದರೆ ಪೇಯದ ರುಚಿ ಕೆಟ್ಟಂತೆ ಅನಿಸುತ್ತದೆ.

ಆದರೆ ಈ ರುಚಿಧ್ವನಿ ಆಯಾ ವ್ಯಕ್ತಿಯನ್ನು ಅವಲಂಬಿಸದೇ ಆಯಾ ಪೇಯವನ್ನು ಅವಲಂಬಿಸಿದೆ.  ಬೀರನ್ನು ರುಚಿಗೊಳಿಸವು ನಾದವೇ ಬೇರೆ, ವಿಸ್ಕಿಯನ್ನು, ಕಾಫಿಯನ್ನು ರುಚಿಗೊಳಿಸುವ ನಾದವೇ ಬೇರೆ.  ಆಯಾ ಪೇಯ ಸಂವಾದಿಯಾದ ನಾದ ಬರುತ್ತಿದ್ದರೆ ಸಾಮಾನ್ಯವಾಗಿ ಎಲ್ಲರಿಗೂ ಆಯಾ ಪೇಯ ರುಚಿಯಾಗಿ ಕಾಣುತ್ತದೆ!

ಅಂದರೆ ಇದರರ್ಥ, ಹೋಟೆಲ್ಗಳಲ್ಲಿ ಗಿರಾಕಿಗಳು ಭೋಜನ ಮಾಡುತ್ತಿರುವಾಗ ಅಥವಾ ಪೇಯ ಕುಡಿಯುತ್ತಿರುವಾಗ ಒಂದು ವಿಶಿಷ್ಠ ಬಗೆಯ ನಾದ ಹೊರಡಿಸಿದರೆ ಅವರಿಗೆ ಆ ಭೋಜನ, ಪೇಯ ರುಚಿಕಟ್ಟಾಗಿ ಅನಿಸುತ್ತದೆ!  ಹೋಟೆಲ್ ಮಾಲಿಕರೆ ನಿಮಗೆ ಈ ಶೋಧದ ಅರ್ಥವಾಗಿರಬೇಕಲ್ಲ?  ತಾವು ಸಹ ಈ ಶೋಧದ ಪ್ರಯೋಜನ ಪಡೆಯಬಹುದಲ್ಲ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...