Home / ಲೇಖನ / ವಿಜ್ಞಾನ / ಆಮ್ಲ ಮಳೆ

ಆಮ್ಲ ಮಳೆ

water-464953_960_720ಭೂಮಿಯ ಮೇಲಿನ ಜೀವ ಸಂಕುಲಕ್ಕೆ ಮಾರಕವಾದ ಆಮ್ಲ ಮಳೆ ಅತ್ಯಂತ ಅಪಾಯಕಾರಿ.  ಈ ಮಳೆಯಿಂದಾಗುವ ಅನಾಹುತಗಳನ್ನು ಅರಿಯಲು ಜಪಾನ್, ಚೀನಾ ಸೇರಿದಂತೆ ಹತ್ತು ರಾಷ್ಟ್ರಗಳು ಜಪಾನ್‌ನಲ್ಲಿ ಸಭೆ ಸೇರಲಿವೆ.  ಇಲ್ಲಿ ರಚಿಸಲಾಗುವ ಸಂಘಟನೆಯು ಏಷ್ಯಾದಲ್ಲಿ ಸುರಿಯುವ ಆಮ್ಲ ಮಳೆಯ ಪರಿಣಾಮಗಳನ್ನು ಅಧ್ಯಯನ ಮಾಡಲಿದೆ.

ಈ ದಿನಗಳಲ್ಲಿ ದಿನಕ್ಕೊಂದು ಕಾರ್ಖಾನೆ ತಲೆಯೆತ್ತುತ್ತಿದೆ.  ಇವುಗಳ ಜೀವಾಳ ಕಲ್ಲಿದ್ದಲು ಮತ್ತು ತೈಲ ಅನಿಲಗಳು.  ಈ ಉದ್ಯಮಗಳು ಹೊರ ಚೆಲ್ಲುವ ರಾಸಾಯನಿಕ ವಸ್ತುಗಳು, ರಾಸಾಯನಿಕ ಇಂಧನಗಳನ್ನು ಬಳಸುವ ವಾಹನಗಳಿಂದ ಹೊರಚೆಲ್ಲುವ ಹೊಗೆ, ಕೃಷಿಗಾಗಿ ಬಳಸುವ ಗೊಬ್ಬರ  ಕ್ರಿಮಿನಾಶಕಗಳೂ, ಯುದ್ದಕ್ಕಾಗಿಯೇ ಸೃಷ್ಟಿಸಲಾದ ಮಾರಕ ವಿಷಾನಿಲಗಳು ವಾತಾವರಣವನ್ನು ಒಂದೇ ಸಮನೇ ಮಲಿನಗೊಳಿಸುತ್ತಿವೆ.  ಈ ವಿಷಾನಿಲಗಳಲ್ಲಿ ಗಂಧಕದ ಡೈ ಆಕ್ಸೈಡ್ ಅಲ್ಲದೆ ಸಾರಜನಕದ ಆಕ್ಸೈಡ್ ವಾಯುಮಂಡಲದಲ್ಲಿ ಸೇರಿಕೊಂಡ ಮೇಲೆ ಅಲ್ಲಿರುವ ಆಮ್ಲಜನಕ ಹಾಗೂ ನೀರಾವಿಗಳೊಂದಿಗೆ ಬೆರೆತು ಸಲ್ಫ್ಯೂರಿಕ್ ಆಮ್ಲ ಹಾಗೂ ನೈಟ್ರಿಕಾಮ್ಲಗಳಾಗಿ ಪರಿವರ್ತನೆ ಹೊಂದುತ್ತವೆ.  ಇವು ಮಳೆಯೊಂದಿಗೆ ಬೆರೆತು ಭೂಮಿಗೆ ಇಳಿಯುತ್ತವೆ.

ಮಳೆಯ ಸಾಮಾನ್ಯ ಪಿ.ಹೆಚ್. ಅಂಶವು ೫.೬ರಷ್ಟಿರುತ್ತದೆ.  ಆದರೆ ಪಿ.ಹಚ್. ಮಟ್ಟವು ಇದಕ್ಕಿಂತ ಕಡಿಮೆ ಆದಾಗ ಅದು ಆಮ್ಲ ಮಳೆಯಾಗುತ್ತದೆ.  ಪಿ.ಹೆಚ್. ಕಡಿಮೆ ಇರುವ ಮಳೆಯಾದರೆ ಮನುಷ್ಯರ ಮೈಮೇಲೆ ಬೊಬ್ಬೆಗಳು ಏಳಬಹುದು.  ಕೆರೆ, ನದಿ, ಸಮುದ್ರಗಳಲ್ಲಿ ಸೇರಿ ಅಲ್ಲಿಯ ಜಲಚರಗಳ ನಶಿಸುವಿಕೆಗೆ ಕಾರಣವಾಗುತ್ತದೆ.  ಆಮ್ಲದ ಅಂಶ ಮೀನುಗಳ ಶರೀರವನ್ನು ಸೇರಿದಾಗ ಎಲುಬುಗಳಲ್ಲಿರುವ ಕ್ಯಾಲ್ಸಿಯಂ ಅಂಶವನ್ನು ಕರಗುವಂತೆ ಮಾಡಿ ಮೂಳೆಗಳನ್ನು ಮೃದುವನ್ನಾಗಿ ಮಾಡಿ ಅವುಗಳ ಸಾವಿಗೆ ಕಾರಣವಾಗುತ್ತದೆ.

ಈಗಾಗಲೇ ಆಮ್ಲ ಮಳೆ ಯೂರೋಪ್ ಬ್ರಿಟನ್ ಅಮೆರಿಕಾಗಳಲ್ಲಿ ಕಾಣಿಸಿಕೊಂಡು ದುಷ್ಪರಿಣಾಮ ಬೀರಿದೆ.  ಕೆನಡಾದಲ್ಲಿ ಸುಮಾರು ೧೪,೦೦೦ ಕೆರೆ, ಸರೋವರಗಳು ಆಮ್ಲ ಮಳೆಯಿಂದಾಗಿ ಬರಿದಾಗಿವೆ.  ನಲವತ್ತು ಸಾವಿರ ಕೆರೆಗಳು ಆಮ್ಲದಿಂದ ತುಂಬಿವೆ. ಚಿಕ್ಕ ಪುಟ್ಟ ಜಲಚರಗಳಲ್ಲದೆ ಅಸಂಖ್ಯ ಸಾಲ್ಮನ್ ಮೀನುಗಳು ಬಲಿಯಾಗಿವೆ.

ಭಾರತವೂ ಈ ಅಪಾಯದಿಂದ ಹೊರತಿಲ್ಲ.  ಹೈದರಾಬಾದ್‌ನ ವಿವಿಧೆಡೆಗಳಲ್ಲಿ ಆಮ್ಲ ಮಳೆ ಬಿದ್ದ ವರದಿಯಾಗಿದೆ.  ಆದರೆ ಈ ಆಮ್ಲ ಮಳೆ ಹೆಚ್ಚಿನ ಹಾನಿ ಮಾಡುವಷ್ಟು ತೀರ್ವವಾಗಿಲ್ಲ ಹಾಗೂ ಇದು ಮುಂದುವರೆದರೆ ಮುಂದಾಗುವ ಹಾನಿಗಳ ಸೂಚನೆಯನ್ನು ಕೊಟ್ಟಿದೆ.  ಮಥುರಾ ತೈಲ ಶುದ್ಧಿಕರಣ ಕಾರ್ಖಾನೆಯಿಂದ ಹೊರ ಬರುವ ಆಮ್ಲ ಅನಿಲಗಳು, ಆಗ್ರಾದ ತಾಜ್‌ಮಹಲ್‌ನ ಸೌಂದರ್ಯಕ್ಕೆ ಕುತ್ತಾಗಿದೆ.  ಭರತ್‌ಪುರ ಪಕ್ಷಿಧಾಮದ ಸರೋವರವು ಆಮ್ಲಾಂಶ ಹೊಂದಿರುವುದರಿಂದ ನೀರ ಹಕ್ಕಿಗಳು ಭೇಟಿ ಕೊಡುವುದನ್ನು ನಿಲ್ಲಿಸಿವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...