Home / ಲೇಖನ / ವಿಜ್ಞಾನ / ಆಮ್ಲ ಮಳೆ

ಆಮ್ಲ ಮಳೆ

water-464953_960_720ಭೂಮಿಯ ಮೇಲಿನ ಜೀವ ಸಂಕುಲಕ್ಕೆ ಮಾರಕವಾದ ಆಮ್ಲ ಮಳೆ ಅತ್ಯಂತ ಅಪಾಯಕಾರಿ.  ಈ ಮಳೆಯಿಂದಾಗುವ ಅನಾಹುತಗಳನ್ನು ಅರಿಯಲು ಜಪಾನ್, ಚೀನಾ ಸೇರಿದಂತೆ ಹತ್ತು ರಾಷ್ಟ್ರಗಳು ಜಪಾನ್‌ನಲ್ಲಿ ಸಭೆ ಸೇರಲಿವೆ.  ಇಲ್ಲಿ ರಚಿಸಲಾಗುವ ಸಂಘಟನೆಯು ಏಷ್ಯಾದಲ್ಲಿ ಸುರಿಯುವ ಆಮ್ಲ ಮಳೆಯ ಪರಿಣಾಮಗಳನ್ನು ಅಧ್ಯಯನ ಮಾಡಲಿದೆ.

ಈ ದಿನಗಳಲ್ಲಿ ದಿನಕ್ಕೊಂದು ಕಾರ್ಖಾನೆ ತಲೆಯೆತ್ತುತ್ತಿದೆ.  ಇವುಗಳ ಜೀವಾಳ ಕಲ್ಲಿದ್ದಲು ಮತ್ತು ತೈಲ ಅನಿಲಗಳು.  ಈ ಉದ್ಯಮಗಳು ಹೊರ ಚೆಲ್ಲುವ ರಾಸಾಯನಿಕ ವಸ್ತುಗಳು, ರಾಸಾಯನಿಕ ಇಂಧನಗಳನ್ನು ಬಳಸುವ ವಾಹನಗಳಿಂದ ಹೊರಚೆಲ್ಲುವ ಹೊಗೆ, ಕೃಷಿಗಾಗಿ ಬಳಸುವ ಗೊಬ್ಬರ  ಕ್ರಿಮಿನಾಶಕಗಳೂ, ಯುದ್ದಕ್ಕಾಗಿಯೇ ಸೃಷ್ಟಿಸಲಾದ ಮಾರಕ ವಿಷಾನಿಲಗಳು ವಾತಾವರಣವನ್ನು ಒಂದೇ ಸಮನೇ ಮಲಿನಗೊಳಿಸುತ್ತಿವೆ.  ಈ ವಿಷಾನಿಲಗಳಲ್ಲಿ ಗಂಧಕದ ಡೈ ಆಕ್ಸೈಡ್ ಅಲ್ಲದೆ ಸಾರಜನಕದ ಆಕ್ಸೈಡ್ ವಾಯುಮಂಡಲದಲ್ಲಿ ಸೇರಿಕೊಂಡ ಮೇಲೆ ಅಲ್ಲಿರುವ ಆಮ್ಲಜನಕ ಹಾಗೂ ನೀರಾವಿಗಳೊಂದಿಗೆ ಬೆರೆತು ಸಲ್ಫ್ಯೂರಿಕ್ ಆಮ್ಲ ಹಾಗೂ ನೈಟ್ರಿಕಾಮ್ಲಗಳಾಗಿ ಪರಿವರ್ತನೆ ಹೊಂದುತ್ತವೆ.  ಇವು ಮಳೆಯೊಂದಿಗೆ ಬೆರೆತು ಭೂಮಿಗೆ ಇಳಿಯುತ್ತವೆ.

ಮಳೆಯ ಸಾಮಾನ್ಯ ಪಿ.ಹೆಚ್. ಅಂಶವು ೫.೬ರಷ್ಟಿರುತ್ತದೆ.  ಆದರೆ ಪಿ.ಹಚ್. ಮಟ್ಟವು ಇದಕ್ಕಿಂತ ಕಡಿಮೆ ಆದಾಗ ಅದು ಆಮ್ಲ ಮಳೆಯಾಗುತ್ತದೆ.  ಪಿ.ಹೆಚ್. ಕಡಿಮೆ ಇರುವ ಮಳೆಯಾದರೆ ಮನುಷ್ಯರ ಮೈಮೇಲೆ ಬೊಬ್ಬೆಗಳು ಏಳಬಹುದು.  ಕೆರೆ, ನದಿ, ಸಮುದ್ರಗಳಲ್ಲಿ ಸೇರಿ ಅಲ್ಲಿಯ ಜಲಚರಗಳ ನಶಿಸುವಿಕೆಗೆ ಕಾರಣವಾಗುತ್ತದೆ.  ಆಮ್ಲದ ಅಂಶ ಮೀನುಗಳ ಶರೀರವನ್ನು ಸೇರಿದಾಗ ಎಲುಬುಗಳಲ್ಲಿರುವ ಕ್ಯಾಲ್ಸಿಯಂ ಅಂಶವನ್ನು ಕರಗುವಂತೆ ಮಾಡಿ ಮೂಳೆಗಳನ್ನು ಮೃದುವನ್ನಾಗಿ ಮಾಡಿ ಅವುಗಳ ಸಾವಿಗೆ ಕಾರಣವಾಗುತ್ತದೆ.

ಈಗಾಗಲೇ ಆಮ್ಲ ಮಳೆ ಯೂರೋಪ್ ಬ್ರಿಟನ್ ಅಮೆರಿಕಾಗಳಲ್ಲಿ ಕಾಣಿಸಿಕೊಂಡು ದುಷ್ಪರಿಣಾಮ ಬೀರಿದೆ.  ಕೆನಡಾದಲ್ಲಿ ಸುಮಾರು ೧೪,೦೦೦ ಕೆರೆ, ಸರೋವರಗಳು ಆಮ್ಲ ಮಳೆಯಿಂದಾಗಿ ಬರಿದಾಗಿವೆ.  ನಲವತ್ತು ಸಾವಿರ ಕೆರೆಗಳು ಆಮ್ಲದಿಂದ ತುಂಬಿವೆ. ಚಿಕ್ಕ ಪುಟ್ಟ ಜಲಚರಗಳಲ್ಲದೆ ಅಸಂಖ್ಯ ಸಾಲ್ಮನ್ ಮೀನುಗಳು ಬಲಿಯಾಗಿವೆ.

ಭಾರತವೂ ಈ ಅಪಾಯದಿಂದ ಹೊರತಿಲ್ಲ.  ಹೈದರಾಬಾದ್‌ನ ವಿವಿಧೆಡೆಗಳಲ್ಲಿ ಆಮ್ಲ ಮಳೆ ಬಿದ್ದ ವರದಿಯಾಗಿದೆ.  ಆದರೆ ಈ ಆಮ್ಲ ಮಳೆ ಹೆಚ್ಚಿನ ಹಾನಿ ಮಾಡುವಷ್ಟು ತೀರ್ವವಾಗಿಲ್ಲ ಹಾಗೂ ಇದು ಮುಂದುವರೆದರೆ ಮುಂದಾಗುವ ಹಾನಿಗಳ ಸೂಚನೆಯನ್ನು ಕೊಟ್ಟಿದೆ.  ಮಥುರಾ ತೈಲ ಶುದ್ಧಿಕರಣ ಕಾರ್ಖಾನೆಯಿಂದ ಹೊರ ಬರುವ ಆಮ್ಲ ಅನಿಲಗಳು, ಆಗ್ರಾದ ತಾಜ್‌ಮಹಲ್‌ನ ಸೌಂದರ್ಯಕ್ಕೆ ಕುತ್ತಾಗಿದೆ.  ಭರತ್‌ಪುರ ಪಕ್ಷಿಧಾಮದ ಸರೋವರವು ಆಮ್ಲಾಂಶ ಹೊಂದಿರುವುದರಿಂದ ನೀರ ಹಕ್ಕಿಗಳು ಭೇಟಿ ಕೊಡುವುದನ್ನು ನಿಲ್ಲಿಸಿವೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...