Home / ಲೇಖನ / ಇತರೆ / ಕ್ರೂರಿಯಾಗದಿರಲಿ!

ಕ್ರೂರಿಯಾಗದಿರಲಿ!

ಪ್ರಿಯ ಸಖಿ,
ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು ಗಮನಿಸಿ ಗಾಬರಿಯಾಗಿ ಬಸ್ಸು ನಿಲ್ಲಿಸುವಂತೆ ಕೂಗಿಕೊಳ್ಳುತ್ತಾನೆ. ಇದನ್ನು ಕೇಳಿದ ಡ್ರೈವರ್ ಅಟ್ಟಹಾಸದ ನಗೆ ನಕ್ಕು ಬಸ್ಸೊಳಗೆ ಹತ್ತಕ್ಕೆ ಯಾವನ್ಲಾ ನಿಂಗ್ ಹೇಳ್ದವ್ನು? ಬಾ, ಬಾ ಬೆಂಗಳೂರ್ನಾಗೇ ನಿನ್ನ ಇನ್ನ ಇಳ್ಸಾದು ಎನ್ನುತ್ತಾನೆ. ಇದನ್ನು ಕೇಳಿದ ಹುಡುಗ ಮತ್ತಷ್ಟು ಗಾಬರಿಯಾಗಿ ಇಲ್ಲಣ್ಣ ಗೊತ್ತಿಲ್ದೇ ಹತ್ಬುಟ್ಟೆ ಇಳುದ್ಬುಡ್ತೀನಿ, ನಿಲ್ಸಣ್ಣ, ನಿನ್ನ ದಮ್ಮಯ್ಯ ಎಂದು ಬೇಡಿಕೊಂಡಷ್ಟೂ ಡ್ರೈವರ್ನ ಅಟ್ಟಹಾಸ ಏರುತ್ತದೆ.

ಬಸ್ಸಿನಲ್ಲಿರುವ ಜನರ ಯೋಚನೆಗಳೂ ಹತ್ತು ಹಲವು ದಿಕ್ಕಿನಲ್ಲಿ ಸಾಗುತ್ತವೆ. ಬಸ್ಸು ಹೊರಡೋದು ಗೊತ್ತಿದ್ದೂ ಯಾಕ್ ಹತ್ಬೇಕಿತ್ತು. ಅನುಭವಿಸಲಿ ಅಂತ ಒಬ್ಬನೆಂದು ಕೊಂಡರೆ ಇನ್ನೊಬ್ಬ ಪಾಪ ಅವನು ಇವತ್ತು ದುಡಿದ ದುಡ್ಡನ್ನೆಲ್ಲಾ ಮತ್ತೆ ವಾಪಸ್ಸು ಬರಲು ಟಿಕೇಟಿಗೇ ಹಾಕಬೇಕೇನೋ ಎಂದುಕೊಳ್ಳುತ್ತಾನೆ. ತಾಯಿಯೊಬ್ಬಳು ಪಾಪ ಹುಡುಗ ಏನೋ ಗೊತ್ತಿಲ್ದೆ ಹತ್ತಿದೆ, ಇಳಿಸಿಬಿಡಬಾರ್ದಾ. ಈ ಡ್ರೈವರ್ ಎಂತ ಕಟುಕ ಎಂದು ಬೈಯ್ದುಕೊಳ್ಳುತ್ತಾ ಆ ಹುಡುಗನಿಂದ ಎರಡು ರೂಪಾಯಿಯ ಕಡ್ಲೆಕಾಯಿ ತೆಗೆದುಕೊಳ್ಳುತ್ತಾಳೆ. ಮತ್ತೊಬ್ಬ ಸೂಕ್ಷ್ಮ ಮನಸ್ಸಿನವ ಡ್ರೈವರ್ನ ಕ್ರೂರ ಮುಖವನ್ನು ಕಂಡು ಅವನೊಂದಿಗೆ ಮಾತನಾಡಲಾಗದೇ ಕಂಡಕ್ಟರ್ ಬಳಿ ಪಾಪ ಅವನನ್ನು ಇಳಿಸಿ ತೊಂದರೆ ಕೊಡಬೇಡಿ ಎಂದು ಬೇಡಿಕೊಳ್ಳುತ್ತಾನೆ. ಡ್ರೈವರ್‍‍ಗೆ ಕಂಡಕ್ಟರ್ ತಿಳಿಸಿ ಹೇಳಿದರೂ ಬುದ್ಧಿ ಬರ್‍ಲಿ ಸುಮ್ನಿರು ಎನ್ನುತ್ತಾ ಅಸಡ್ಡೆ ಮಾಡುತ್ತಾನೆ.

ಡ್ರೈವರ್ ಯಾರ ಮಾತೂ ಕೇಳುವವನಲ್ಲ ಎಂದು ಅರಿವಾದ ಹುಡುಗ ಬಂದದ್ದನ್ನೆಲ್ಲಾ ಎದುರಿಸಲು ತಯಾರಾದವನಂತೆ ಮತ್ತೆ ಉತ್ಸಾಹದಿಂದ ಕಡ್ಲೆಕಾಯಿ ಮಾರಲು ಪ್ರಾರಂಭಿಸುತ್ತಾನೆ. ಅ ಹುಡುಗನ ಬಗ್ಗೆ ಕರುಣೆ ಮೂಡಿದ ಅನೇಕ ಪ್ರಯಾಣಿಕರು, ಕಡಲೇಕಾಯಿ ಖರೀದಿಸಿ ಧನ್ಯವಾದೆವು ಎಂದು ಸಮಾಧಾನದ ಉಸಿರೆಳೆಯುತ್ತಾರೆ. ಯಾವಾಗಲೋ ಮನಸ್ಸು ಬಂದೆಡೆ ಆ ಡ್ರೈವರ್ ಬಸ್ಸು ನಿಲ್ಲಿಸಿ ಮಹಾನ್ ಉಪಕಾರ ಮಾಡಿದವನಂತೆ ಮುಖ ಮಾಡಿ ಹುಂ, ಇಳಿ ಎನ್ನುತ್ತಾನೆ. ಹುಡುಗ ಡ್ರೈವರ್ನೆಡೆಗೆ ತಣ್ಣನೆಯ ನೋಟವೊಂದನ್ನು ಬೀರಿ ಸರಸರನೆ ಬಸ್ಸಿನಿಂದಿಳಿಯುತ್ತಾನೆ.

ಸಖಿ, ಡ್ರೈವರ್‍ನ ಈ ಕ್ರೌರ್ಯ, ಬಡ ಹುಡುಗನ ಅಸಹಾಯಕತೆ ಮತ್ತೆ ಮತ್ತೆ ನೆನಪಾಗಿ ಕಾಡುತ್ತವೆ. ಡ್ರೈವರ್ ತನ್ನ ಕ್ರೌರ್ಯದಿಂದ ಪುಟ್ಟ ಹುಡುಗನ ಮನ ಕ್ಷಣಕ್ಕೆ ಭೀತಿಯನ್ನುಂಟು ಮಾಡಿದೆ. ಪಾಠ ಕಲಿಸಿದೆ ಎಂದು ಬೀಗಿದರೂ ಬಸ್ಸಿನಲ್ಲಿನ ಹೆಚ್ಚಿನ ಪ್ರಯಾಣಿಕರ ಕಣ್ಣಿನಲ್ಲಿ ಅವನು ವಿಲನ್ ಆದದ್ದು ಸುಳ್ಳಲ್ಲ. ಹಾಗೇ ತನ್ನ ಅಸಹಾಯಕತೆಯಲ್ಲೂ ಉತ್ಸಾಹದಿಂದಿದ್ದ, ಬದುಕನ್ನು ಬಂದಂತೆ ಧೈರ್ಯವಿರುವ ಪುಟ್ಟ ಹುಡುಗ ಅವನಿಗರಿವಿಲ್ಲದೇ ಹೀರೋ ಆಗಿ ಬಿಡುತ್ತಾನೆ. ಡ್ರೈವರ್‍ನ ಕ್ರೌರ್ಯ ಆ ಮುಗ್ದ ಹೃದಯದಲ್ಲಿ ದ್ವೇಷದ ಬೀಜವನ್ನು ಬಿತ್ತದಿರಲಿ, ಸಮಾಜವನ್ನೇ ಪ್ರತೀಕಾರದ ತಾಣವಾಗಿಸಿಕೊಂಡು ಕ್ರೂರಿಯಾಗದಿರಲಿ ಎಂಬುದು ನಮ್ಮ ಪ್ರಾರ್ಥನೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...