Home / ಲೇಖನ / ಇತರೆ / ಮಾತಾಡಿ ಬಿಡಬಾರದೇ ?

ಮಾತಾಡಿ ಬಿಡಬಾರದೇ ?

ಚಿತ್ರ: ತುಮಿಸು
ಚಿತ್ರ: ತುಮಿಸು

ಪ್ರಿಯ ಸಖಿ,

ನಮ್ಮ ಮನಸ್ಸಿನಲ್ಲಿ ಎಷ್ಟೊಂದು ಮಾತುಗಳು ಮೂಡಿ ಮರೆಯುಗುತ್ತಿರುತ್ತವಲ್ಲಾ? ಅದರಲ್ಲಿ ವೃಕ್ತವಾಗುವುದು ಕೆಲವು ಮಾತ್ರ. ಅವ್ಯಕ್ತವಾಗಿ ಎದೆಯೊಳದಲ್ಲೇ ಉಳಿದು ಬಿಡುವ ಮಾತುಗಳು ಹಲವಾರು. ನಮಗಿಷ್ಟವಿಲ್ಲದಿದ್ದರೂ ನಮ್ಮ ಅನುಮತಿಯಿಲ್ಲದೇ ಬಾಯಿಂದ ಜಾರಿ ಅನಾಹುತವನ್ನೋ ವಿಷಮ ಸ್ಥಿತಿಯನ್ನೋ ತಂದೊಡ್ಡುವ ಮಾತಿಗಳಿರುವಂತೆಯೇ ವ್ಯಕ್ತಿಗೆ ತಕ್ಕಂತೆ ಕೆಲವೊಮ್ಮೆ ಆಡಬೇಕಾಗಿದ್ದ ಮಾತುಗಳು ಹೊರಬರದೇ ಸಂಬಂಧಗಳು ಹರಿದು ಹೋಗಿ ಮತ್ತೆಂದೂ ಮನಸ್ಸುಗಳು ಒಂದಾಗದ ಹಂತವನ್ನು ತಲುಪಿಬಿಡುವ ಸಾಧ್ಯತೆಯೂ ಉಂಟು.

ಗೌರವಾನ್ವಿತ ವ್ಯಕ್ತಿಯೊಬ್ಬರನ್ನು ನೋಡಿದಾಗಲೆಲ್ಲಾ ಅವರ ಬಗೆಗೆ ಮೂಡುತ್ತಿದ್ದ ಭಾವನೆಗಳನ್ನು ಅವರಿಗೆ ಹೇಳಲಾಗದೇ ಅವರು ಸತ್ತ ನಂತರ ಪರಿತಪಿಸುವಂತಾಗುವುದು. ಕಿತ್ತುಹೋಗುತ್ತಿರುವ ಸಂಬಂಧದ – ಕೊಂಡಿಯೊಂದು ಸಣ್ಣದೊಂದು ಸಂತೈಸುವಿಕೆ, ಕ್ಷಮಿಸುವಿಕೆಯಿಂದ, ಮಾತಿನಿಂದ ಗಟ್ಟಿಗೊಳ್ಳುವುದಾದಲ್ಲಿ ಆ ಮಾತನಾಡದೇ ಸಂಬಂಧ ಕಿತ್ತು ಹೋದ ನಂತರ ವ್ಯಥೆಪಡುವುದು. ಅವರು ಹೊರಟು ಹೋದರೆ ಮತ್ತೆ ಎಂದೆಂದಿಗೂ ಬರುವುದೇ ಇಲ್ಲ. ಹೋಗಬೇಡಿ ಎಂದು ಬಾಯಿ ತುದಿವರೆಗೆ ಬಂದ ಮಾತನ್ನು ಆಡಲಾರದಂತೆ ತಡೆಯುವುದು ಯಾವುದು ಎಂದು ಯೋಚಿಸಿದರೆ, ಹೆಚ್ಚಿನ ಬಾರಿ ಅಹಂಕಾರವೇ ಕಾರಣವಾಗಿರುತ್ತದೆ. ತನ್ನ ನೈಜ ಭಾವನೆಗಳನ್ನು ಅವರ ಮುಂದೆ ಅರುಹಿ ಬಿಟ್ಟರೆ ತಾನು ಚಿಕ್ಕವನಾಗಿಬಿಡುತ್ತೇನೆ. ಹೀಗಾಗಿ ಏನೂ ಹೇಳುವುದೇ ಬೇಡ ಎಂದು ತೀರ್ಮಾನಿಸಿ ತಾನೇ ದೊಡ್ಡವನು, ಮಹಾನ್ ಎಂಬ ಅಹಮ್ಮಿನ ಮುಖವಾಡವನ್ನು ತೊಟ್ಟುಕೊಂಡು ತನಗೆ ತಾನೇ ದೊಡ್ಡವನಾಗಿ ಬಿಟ್ಟೆ ಎಂದು ಭ್ರಮಿಸಿಕೊಳ್ಳುತ್ತಾನೆ ವ್ಯಕ್ತಿ.

ಸಖಿ, ಆದರೆ ಒಳಿತನ್ನು ಒಳಿತೆಂದು, ಹಿರಿಯದನ್ನು ಹಿರಿದೆಂದು ಸಂಬಂಧಗಳ ಕೊಂಡಿಯನ್ನು ಭದ್ರಪಡಿಸಲು ಕೆಲವೊಮ್ಮೆ ಆಡಲೇಬೇಕಿರುವ ಮಾತನ್ನು ಕಾಲ ಮೀರಿ ಹೋಗುವ ಮೊದಲು ಆಡಿಬಿಟ್ಟರೆ ನಾವು ಕಳೆದುಕೊಳ್ಳುವುದೇನು? ನಂತರ ಮತ್ತೆಂದೂ ಅಂತಹ ಅವಕಾಶ ಸಿಕ್ಕದೇ ಹೋಗಿಬಿಡಬಹುದು. ಆಗ ಪಶ್ಚಾತ್ತಾಪವೂ ಬೆಲೆಯಿಲ್ಲದ್ದಾಗಿ ಬಿಡುತ್ತದೆ. ಸಖಿ, ಆಡಬೇಕೆಂದಿರುವ ಮಾತುಗಳನ್ನು, ಅದರಿಂದ ಮತ್ತಷ್ಟು ಒಳಿತೇ ಆಗುವುದಾದರೆ, ಸಮಯ ಮೀರುವ ಮುನ್ನ ಆಡಿಬಿಡೋಣ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...