Home / ಲೇಖನ / ಇತರೆ / ಮಾತಾಡಿ ಬಿಡಬಾರದೇ ?

ಮಾತಾಡಿ ಬಿಡಬಾರದೇ ?

ಚಿತ್ರ: ತುಮಿಸು
ಚಿತ್ರ: ತುಮಿಸು

ಪ್ರಿಯ ಸಖಿ,

ನಮ್ಮ ಮನಸ್ಸಿನಲ್ಲಿ ಎಷ್ಟೊಂದು ಮಾತುಗಳು ಮೂಡಿ ಮರೆಯುಗುತ್ತಿರುತ್ತವಲ್ಲಾ? ಅದರಲ್ಲಿ ವೃಕ್ತವಾಗುವುದು ಕೆಲವು ಮಾತ್ರ. ಅವ್ಯಕ್ತವಾಗಿ ಎದೆಯೊಳದಲ್ಲೇ ಉಳಿದು ಬಿಡುವ ಮಾತುಗಳು ಹಲವಾರು. ನಮಗಿಷ್ಟವಿಲ್ಲದಿದ್ದರೂ ನಮ್ಮ ಅನುಮತಿಯಿಲ್ಲದೇ ಬಾಯಿಂದ ಜಾರಿ ಅನಾಹುತವನ್ನೋ ವಿಷಮ ಸ್ಥಿತಿಯನ್ನೋ ತಂದೊಡ್ಡುವ ಮಾತಿಗಳಿರುವಂತೆಯೇ ವ್ಯಕ್ತಿಗೆ ತಕ್ಕಂತೆ ಕೆಲವೊಮ್ಮೆ ಆಡಬೇಕಾಗಿದ್ದ ಮಾತುಗಳು ಹೊರಬರದೇ ಸಂಬಂಧಗಳು ಹರಿದು ಹೋಗಿ ಮತ್ತೆಂದೂ ಮನಸ್ಸುಗಳು ಒಂದಾಗದ ಹಂತವನ್ನು ತಲುಪಿಬಿಡುವ ಸಾಧ್ಯತೆಯೂ ಉಂಟು.

ಗೌರವಾನ್ವಿತ ವ್ಯಕ್ತಿಯೊಬ್ಬರನ್ನು ನೋಡಿದಾಗಲೆಲ್ಲಾ ಅವರ ಬಗೆಗೆ ಮೂಡುತ್ತಿದ್ದ ಭಾವನೆಗಳನ್ನು ಅವರಿಗೆ ಹೇಳಲಾಗದೇ ಅವರು ಸತ್ತ ನಂತರ ಪರಿತಪಿಸುವಂತಾಗುವುದು. ಕಿತ್ತುಹೋಗುತ್ತಿರುವ ಸಂಬಂಧದ – ಕೊಂಡಿಯೊಂದು ಸಣ್ಣದೊಂದು ಸಂತೈಸುವಿಕೆ, ಕ್ಷಮಿಸುವಿಕೆಯಿಂದ, ಮಾತಿನಿಂದ ಗಟ್ಟಿಗೊಳ್ಳುವುದಾದಲ್ಲಿ ಆ ಮಾತನಾಡದೇ ಸಂಬಂಧ ಕಿತ್ತು ಹೋದ ನಂತರ ವ್ಯಥೆಪಡುವುದು. ಅವರು ಹೊರಟು ಹೋದರೆ ಮತ್ತೆ ಎಂದೆಂದಿಗೂ ಬರುವುದೇ ಇಲ್ಲ. ಹೋಗಬೇಡಿ ಎಂದು ಬಾಯಿ ತುದಿವರೆಗೆ ಬಂದ ಮಾತನ್ನು ಆಡಲಾರದಂತೆ ತಡೆಯುವುದು ಯಾವುದು ಎಂದು ಯೋಚಿಸಿದರೆ, ಹೆಚ್ಚಿನ ಬಾರಿ ಅಹಂಕಾರವೇ ಕಾರಣವಾಗಿರುತ್ತದೆ. ತನ್ನ ನೈಜ ಭಾವನೆಗಳನ್ನು ಅವರ ಮುಂದೆ ಅರುಹಿ ಬಿಟ್ಟರೆ ತಾನು ಚಿಕ್ಕವನಾಗಿಬಿಡುತ್ತೇನೆ. ಹೀಗಾಗಿ ಏನೂ ಹೇಳುವುದೇ ಬೇಡ ಎಂದು ತೀರ್ಮಾನಿಸಿ ತಾನೇ ದೊಡ್ಡವನು, ಮಹಾನ್ ಎಂಬ ಅಹಮ್ಮಿನ ಮುಖವಾಡವನ್ನು ತೊಟ್ಟುಕೊಂಡು ತನಗೆ ತಾನೇ ದೊಡ್ಡವನಾಗಿ ಬಿಟ್ಟೆ ಎಂದು ಭ್ರಮಿಸಿಕೊಳ್ಳುತ್ತಾನೆ ವ್ಯಕ್ತಿ.

ಸಖಿ, ಆದರೆ ಒಳಿತನ್ನು ಒಳಿತೆಂದು, ಹಿರಿಯದನ್ನು ಹಿರಿದೆಂದು ಸಂಬಂಧಗಳ ಕೊಂಡಿಯನ್ನು ಭದ್ರಪಡಿಸಲು ಕೆಲವೊಮ್ಮೆ ಆಡಲೇಬೇಕಿರುವ ಮಾತನ್ನು ಕಾಲ ಮೀರಿ ಹೋಗುವ ಮೊದಲು ಆಡಿಬಿಟ್ಟರೆ ನಾವು ಕಳೆದುಕೊಳ್ಳುವುದೇನು? ನಂತರ ಮತ್ತೆಂದೂ ಅಂತಹ ಅವಕಾಶ ಸಿಕ್ಕದೇ ಹೋಗಿಬಿಡಬಹುದು. ಆಗ ಪಶ್ಚಾತ್ತಾಪವೂ ಬೆಲೆಯಿಲ್ಲದ್ದಾಗಿ ಬಿಡುತ್ತದೆ. ಸಖಿ, ಆಡಬೇಕೆಂದಿರುವ ಮಾತುಗಳನ್ನು, ಅದರಿಂದ ಮತ್ತಷ್ಟು ಒಳಿತೇ ಆಗುವುದಾದರೆ, ಸಮಯ ಮೀರುವ ಮುನ್ನ ಆಡಿಬಿಡೋಣ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...