Home / ಲೇಖನ / ಇತರೆ / ಮಾತಾಡಿ ಬಿಡಬಾರದೇ ?

ಮಾತಾಡಿ ಬಿಡಬಾರದೇ ?

ಚಿತ್ರ: ತುಮಿಸು
ಚಿತ್ರ: ತುಮಿಸು

ಪ್ರಿಯ ಸಖಿ,

ನಮ್ಮ ಮನಸ್ಸಿನಲ್ಲಿ ಎಷ್ಟೊಂದು ಮಾತುಗಳು ಮೂಡಿ ಮರೆಯುಗುತ್ತಿರುತ್ತವಲ್ಲಾ? ಅದರಲ್ಲಿ ವೃಕ್ತವಾಗುವುದು ಕೆಲವು ಮಾತ್ರ. ಅವ್ಯಕ್ತವಾಗಿ ಎದೆಯೊಳದಲ್ಲೇ ಉಳಿದು ಬಿಡುವ ಮಾತುಗಳು ಹಲವಾರು. ನಮಗಿಷ್ಟವಿಲ್ಲದಿದ್ದರೂ ನಮ್ಮ ಅನುಮತಿಯಿಲ್ಲದೇ ಬಾಯಿಂದ ಜಾರಿ ಅನಾಹುತವನ್ನೋ ವಿಷಮ ಸ್ಥಿತಿಯನ್ನೋ ತಂದೊಡ್ಡುವ ಮಾತಿಗಳಿರುವಂತೆಯೇ ವ್ಯಕ್ತಿಗೆ ತಕ್ಕಂತೆ ಕೆಲವೊಮ್ಮೆ ಆಡಬೇಕಾಗಿದ್ದ ಮಾತುಗಳು ಹೊರಬರದೇ ಸಂಬಂಧಗಳು ಹರಿದು ಹೋಗಿ ಮತ್ತೆಂದೂ ಮನಸ್ಸುಗಳು ಒಂದಾಗದ ಹಂತವನ್ನು ತಲುಪಿಬಿಡುವ ಸಾಧ್ಯತೆಯೂ ಉಂಟು.

ಗೌರವಾನ್ವಿತ ವ್ಯಕ್ತಿಯೊಬ್ಬರನ್ನು ನೋಡಿದಾಗಲೆಲ್ಲಾ ಅವರ ಬಗೆಗೆ ಮೂಡುತ್ತಿದ್ದ ಭಾವನೆಗಳನ್ನು ಅವರಿಗೆ ಹೇಳಲಾಗದೇ ಅವರು ಸತ್ತ ನಂತರ ಪರಿತಪಿಸುವಂತಾಗುವುದು. ಕಿತ್ತುಹೋಗುತ್ತಿರುವ ಸಂಬಂಧದ – ಕೊಂಡಿಯೊಂದು ಸಣ್ಣದೊಂದು ಸಂತೈಸುವಿಕೆ, ಕ್ಷಮಿಸುವಿಕೆಯಿಂದ, ಮಾತಿನಿಂದ ಗಟ್ಟಿಗೊಳ್ಳುವುದಾದಲ್ಲಿ ಆ ಮಾತನಾಡದೇ ಸಂಬಂಧ ಕಿತ್ತು ಹೋದ ನಂತರ ವ್ಯಥೆಪಡುವುದು. ಅವರು ಹೊರಟು ಹೋದರೆ ಮತ್ತೆ ಎಂದೆಂದಿಗೂ ಬರುವುದೇ ಇಲ್ಲ. ಹೋಗಬೇಡಿ ಎಂದು ಬಾಯಿ ತುದಿವರೆಗೆ ಬಂದ ಮಾತನ್ನು ಆಡಲಾರದಂತೆ ತಡೆಯುವುದು ಯಾವುದು ಎಂದು ಯೋಚಿಸಿದರೆ, ಹೆಚ್ಚಿನ ಬಾರಿ ಅಹಂಕಾರವೇ ಕಾರಣವಾಗಿರುತ್ತದೆ. ತನ್ನ ನೈಜ ಭಾವನೆಗಳನ್ನು ಅವರ ಮುಂದೆ ಅರುಹಿ ಬಿಟ್ಟರೆ ತಾನು ಚಿಕ್ಕವನಾಗಿಬಿಡುತ್ತೇನೆ. ಹೀಗಾಗಿ ಏನೂ ಹೇಳುವುದೇ ಬೇಡ ಎಂದು ತೀರ್ಮಾನಿಸಿ ತಾನೇ ದೊಡ್ಡವನು, ಮಹಾನ್ ಎಂಬ ಅಹಮ್ಮಿನ ಮುಖವಾಡವನ್ನು ತೊಟ್ಟುಕೊಂಡು ತನಗೆ ತಾನೇ ದೊಡ್ಡವನಾಗಿ ಬಿಟ್ಟೆ ಎಂದು ಭ್ರಮಿಸಿಕೊಳ್ಳುತ್ತಾನೆ ವ್ಯಕ್ತಿ.

ಸಖಿ, ಆದರೆ ಒಳಿತನ್ನು ಒಳಿತೆಂದು, ಹಿರಿಯದನ್ನು ಹಿರಿದೆಂದು ಸಂಬಂಧಗಳ ಕೊಂಡಿಯನ್ನು ಭದ್ರಪಡಿಸಲು ಕೆಲವೊಮ್ಮೆ ಆಡಲೇಬೇಕಿರುವ ಮಾತನ್ನು ಕಾಲ ಮೀರಿ ಹೋಗುವ ಮೊದಲು ಆಡಿಬಿಟ್ಟರೆ ನಾವು ಕಳೆದುಕೊಳ್ಳುವುದೇನು? ನಂತರ ಮತ್ತೆಂದೂ ಅಂತಹ ಅವಕಾಶ ಸಿಕ್ಕದೇ ಹೋಗಿಬಿಡಬಹುದು. ಆಗ ಪಶ್ಚಾತ್ತಾಪವೂ ಬೆಲೆಯಿಲ್ಲದ್ದಾಗಿ ಬಿಡುತ್ತದೆ. ಸಖಿ, ಆಡಬೇಕೆಂದಿರುವ ಮಾತುಗಳನ್ನು, ಅದರಿಂದ ಮತ್ತಷ್ಟು ಒಳಿತೇ ಆಗುವುದಾದರೆ, ಸಮಯ ಮೀರುವ ಮುನ್ನ ಆಡಿಬಿಡೋಣ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...