ಮಾಗುವಿಕೆ

ಮಾಗುವಿಕೆ

ಚಿತ್ರ: ಮಿಹಾಯ್ ಪರಾಶ್ಚಿವ್
ಚಿತ್ರ: ಮಿಹಾಯ್ ಪರಾಶ್ಚಿವ್

ಪ್ರಿಯ ಸಖಿ,
ಹಣ್ಣು ಮಾಗುವುದು, ವಯಸ್ಸು ಮಾಗುವುದು ಎಲ್ಲ ಸೃಷ್ಟಿ ಸಹಜ ಕ್ರಿಯೆಗಳು. ಹೀಚಾಗಿದ್ದು, ಕಾಯಾಗಿ, ದೋರುಗಾಯಾಗಿ, ಪರಿಪಕ್ವವಾಗಿ ಹಣ್ಣಾದಾಗ ಅದು ಮಾಗಿದ ಹಂತವನ್ನು ತಲುಪುತ್ತದೆ. ಹಾಗೇ ವ್ಯಕ್ತಿ ಕೂಡ. ಬಾಲ್ಯ ಕಳೆದು, ಯೌವ್ವನ ಮುಗಿದು ಮಧ್ಯ ವಯಸ್ಸು ಜಾರಿ, ಕೆನ್ನೆ ಸುಕ್ಕಾಗಿ ತಲೆ ನರೆತು ಸಾವಿಗೆ ಸಮೀಪಿಸಿದಾಗ ಅವನು ಸಂಪೂರ್ಣ ಮಾಗಿದ್ದಾನೆ ಎಂದು ಹೇಳುತ್ತೇವೆ.

ಆದರೆ ಇವುಗಳೆಲ್ಲಾ ಬಾಹ್ಯದ ಸಹಜ ಮಾಗುವಿಕೆಯ ಮಾತಾಯ್ತು. ನಮ್ಮ ಅಂತರಂಗದ ಮಾಗುವಿಕೆಯೂ ಇಷ್ಟೇ ಸಹಜವಾಗಿ ಆಗುತ್ತದೆಯೇ? ಎಂಬುದು ನಮ್ಮನ್ನು ಕಾಡುವ ಪ್ರಶ್ನೆ. ವಯಸ್ಸು ಏರಿದಂತೆಲ್ಲಾ, ಅನುಭವ ಪ್ರಪಂಚ ವಿಸ್ತಾರವಾದಂತೆಲ್ಲಾ ಜಗತ್ತಿನ ಆಗು ಹೋಗುಗಳ ಹಿನ್ನೆಲೆ ತಿಳಿಯುತ್ತಾ ಹೋದಂತೆಲ್ಲಾ ಮನಸ್ಸೂ ಮಾಗುತ್ತಾ ಹೋಗಬೇಕು. ವ್ಯಕ್ತಿ ತನ್ನ ಆಕ್ರೋಶ, ಸಿಟ್ಟು, ದ್ವೇಷ, ಅಸೂಯೆಗಳನ್ನು ಮೀರಲಾಗದಿದ್ದರೂ ನಿಧಾನಕ್ಕೆ ಕಡಿಮೆ ಮಾಡಿಕೊಳ್ಳುವ ದಿಕ್ಕಿನಲ್ಲಿ ಪ್ರಯತ್ನಿಸಬೇಕು. ತನ್ನ ಅಂತಃಚಕ್ಷುಗಳನ್ನು ತೆರೆದು ಬದುಕನ್ನು ಅರ್ಥೈಸಿಕೊಳ್ಳುತ್ತಾ ಹೋಗಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಹಲವಾರು ಮುಖವಾಡಗಳನ್ನು ತೊಟ್ಟುಕೊಂಡಿರುತ್ತಾನೆ. ಆದರೆ ಮನಸ್ಸಿನ ಮಾಗುವಿಕೆಯಿಂದ ಆ ಮುಖವಾಡಗಳನ್ನು  ಮೀರಿ ತನಗೆ ತಾನು ಸತ್ಯವಾಗಿ ಗೋಚರಿಸುವಂತಾಗಬೇಕು. ತನ್ನ ಭಾವನೆಗಳಿಗೆ, ಆಲೋಚನೆಗಳಿಗೆ ಪ್ರಾಮಾಣಿಕನಾಗಲು ಪ್ರಯತ್ನಿಸಬೇಕು. ಸಂಪೂರ್ಣ ಮಾಗುವಿಕೆ ಸಾಧ್ಯವಾಗದಿದ್ದರೂ ಆ ದಾರಿಯಲ್ಲಿ ಸಾಗುತ್ತಾ ಹೋಗಬೇಕು. ಗಾಂಧಿ, ಬುದ್ಧ, ಬಸವಣ್ಣ, ವಿವೇಕಾನಂದ, ಕ್ರಿಸ್ತ, ಮಹಾವೀರರು ತಮ್ಮ ಬಾಹ್ಯದ ಮಾಗುವಿಕೆಗೂ ಮೊದಲೇ ಅಂತರಂಗದಲ್ಲಿ ಮಾಗುತ್ತಾ ಸಾಗಿದವರು. ಆದ್ದರಿಂದಲೇ ಅವರು ಮಹಾನ್ ವ್ಯಕ್ತಿಗಳಾದರು. ಸರ್ವಮಾನ್ಯರಾದರು. ಸಂತರೆನಿಸಿದರು. ಇಂತಹ ವ್ಯಕ್ತಿಗಳನ್ನು ಅಪರೂಪಕ್ಕೊಮ್ಮೆಯಷ್ಟೇ ಕಾಣುತ್ತೇವೆ.  ಆದರೆ ವಯಸ್ಸಾಗಿಯೂ ಮನಸ್ಸು ಮಾಗದೇ ಮೇಲೆ ಹಣ್ಣಾದಂತೆ ಕಂಡರೂ ಒಳಗೆ ಕಾಯಾಗಿಯೇ ಇರುವ ಅಪರಿಪಕ್ವ ಮನಸ್ಸಿನ ವ್ಯಕ್ತಿಗಳು ನಮ್ಮ ಸುತ್ತಲೂ ಕಾಣುತ್ತಲೇ ಇರುತ್ತೇವೆ.

ವಯಸ್ಸಾಗಿದ್ದರೂ ಮಕ್ಕಳಂತೆ ಹಠ, ಎಲ್ಲರಮೇಲೂ ಕೋಪ, ತಾತ್ಸಾರ, ದ್ವೇಷ. ವ್ಯಂಗ್ಯವಾಡುವುದು, ವಿನಾಕಾರಣ ಕಿರುಚಾಟ, ಹಾರಾಟ, ಜಗಳ, ಅಸಹ್ಯ ನಡುವಳಿಕೆ. ಇತರರನ್ನು ಕಂಡಾಗ ಅವರ ವಯಸ್ಸಿಗೆ ಕೊಡಬೇಕಾದ ಗೌರವವನ್ನೂ ಕೊಡಲು ಮನಸ್ಸು ನಿರಾಕರಿಸುತ್ತದೆ. ವಯಸ್ಸಾದರೂ ಬುದ್ಧಿ ಬಂದಿಲ್ಲ ಎಂಬ ಮಾತು ಇಂಥವರಿಗಾಗಿಯೇ ಸೃಷ್ಟಿಯಾದುದು.

ಸಖಿ, ಪ್ರತಿಯೊಬ್ಬ ವ್ಯಕ್ತಿಯೂ ತನ್ನ ವಯಸ್ಸಿನೊಂದಿಗೆ ತನ್ನ ಮನಸ್ಸನ್ನೂ ಮಾಗಿಸಿ, ತಿಳಿಗೊಳಿಸಿಕೊಳ್ಳಲು ಪ್ರಯತ್ನಿಸಬೇಕು. ಅರಳಿಸಿಕೊಳ್ಳಲು ಪ್ರಯತ್ನಿಸಬೇಕು. ಎಲ್ಲವನ್ನೂ ಪ್ರೀತಿಯ ನೆಲೆಗಳಿಂದ, ಮಾನವೀಯ ನೆಲೆಗಳಿಂದ, ಅರ್ಥೈಸಿಕೊಳ್ಳಲು ಪ್ರಯತ್ನಿಸಬೇಕು. ಸೋಲು ಗೆಲವುಗಳನ್ನು  ಸಮಚಿತ್ತದಿಂದ ಸ್ವೀಕರಿಸಬೇಕು. ಹೀಗಾದಾಗ ಮಾತ್ರ ವ್ಯಕ್ತಿಯೊಬ್ಬ ನಿಜವಾದ ಅರ್ಥದಲ್ಲಿ ಹಣ್ಣಾದ, ಮಾಗಿದ ಎಂದು ಹೇಳಬಹುದು. ತನಗೆ ತಾನು
ಅರ್ಥವಾಗಲು, ಸತ್ಯವಾಗಲು ಪ್ರಪಂಚದ ನೋವು ನಲಿವುಗಳು ಅರ್ಥವಾಗಲು ಸಾಧ್ಯವಾಗುತ್ತದೆ. ಸಖಿ, ವಯಸ್ಸಿಗೆ ತಕ್ಕಂತೆ ಮನಸ್ಸು ಮಾಗುವ ಕಲೆಯನ್ನು ಕಲಿಯಲು ಎಲ್ಲರೂ ಪ್ರಯತ್ನಿಸಬೇಕಲ್ಲವೇ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಪಾನ
Next post ವಿಧಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys