Home / ಲೇಖನ / ಇತರೆ / ಚಿದಂಬರ ರಹಸ್ಯ

ಚಿದಂಬರ ರಹಸ್ಯ

Natarajaಪ್ರಿಯ ಸಖಿ,
ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ ವಿಸ್ತೀರ್ಣ ಹೊಂದಿದೆ. ಇಲ್ಲಿ ದೇವರು ಅಥವಾ ಶಕ್ತಿಯೆನ್ನುವುದನ್ನು ಆಕಾಶಕ್ಕೆ ಹೋಲಿಸಲಾಗಿದೆ.

ಚಿದ್+ಅಂಬರ ಎಂದರೆ ಜ್ಞಾನ + ಆಕಾಶ ಎಂದಾಗುತ್ತದೆ. ಆಕಾಶದಷ್ಟು ಅನಂತವಾಗಿರುವ ಜ್ಞಾನವನ್ನು ಹೊಂದಿರುವುದೇ ನಮ್ಮೆಲ್ಲರ ಸೃಷ್ಟಿಗೆ ಕಾರಣವಾಗಿರುವ ಶಕ್ತಿಯ ವಿಶೇಷತೆ. ಅದನ್ನಿಲ್ಲಿ ಎರಡು ರೂಪಗಳಲ್ಲಿ ವಿಶೇಷವಾಗಿ ಬಿಂಬಿಸಲಾಗಿದೆ. ಇಲ್ಲಿರುವ ಮುಖ್ಯ ನಟರಾಜಮೂರ್ತಿ ಆನಂದತಾಂಡವ ರೂಪದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದೆ. ಇದು ಜೀವನದ ಉತ್ಸಾಹಕ್ಕೆ ಪ್ರೇರಕವಾಗಿದೆ. ಹಾಗೇ ರುದ್ರತಾಂಡವ ನಟರಾಜಮೂರ್ತಿಯೂ ಇಲ್ಲಿದೆ. ಇದನ್ನು ಸೃಷ್ಠಿಯಲ್ಲಿ ಕೆಡುಕಿನ ಸಮಯದಲ್ಲಿ ದೈವ ಶಕ್ತಿಯ ರುದ್ರತಾಂಡವಕ್ಕೆ ಹೋಲಿಸಲಾಗಿದೆ. ನಟರಾಜನನ್ನು ಸೃಷ್ಠಿಕ್ರಿಯೆ, ರಕ್ಷಣೆ, ಲಯ, ಸ್ಥಿತಿ ಹಾಗೂ ಕೃಪೆಗೆ ಸಾಕ್ಷಾತ್ಕಾರವಾಗಿ ಮೂರ್ತೀಕರಿಸಲಾಗುತ್ತದೆ. ನಟರಾಜ ನೃತ್ಯಗುರುವೂ ಹೌದು. ಈ ದೇವಾಲಯದಲ್ಲೇ ೧೦೮ ನೃತ್ಯಭಂಗಿಯ ನಟರಾಜನನ್ನು ಕೆತ್ತಲಾಗಿದೆ. ಇಂತಹ ಅಪೂರ್ವಭಂಗಿಗಳು ಇನ್ನಾವ ದೇವಾಲಯದಲ್ಲೂ ಇಲ್ಲ ಎಂದು ಹೇಳಲಾಗುತ್ತದೆ.

ಸಖಿ, ಇದೇನು ಎಂದೂ ಇಲ್ಲದೆ ದೇವಸ್ಥಾನದ ಇತಿಹಾಸದ ಕಥೆ ಹೇಳಹೊರಟಿದ್ದಾಳೆ? ಇಷ್ಟೆಲ್ಲಾ ಹೇಳಿಯೂ ಚಿದಂಬರ ರಹಸ್ಯ ಎಂದೇನೆಂದು ಹೇಳಲೇ ಇಲ್ಲವೆನ್ನುತ್ತೀಯಾ ? ರಹಸ್ಯವನ್ನು ಏನೂ ಪೀಠಿಕೆ ಇಲ್ಲದೇ ಹೇಳಿಬಿಡಲಾಗುತ್ತದೆಯೇ? ಆದರೆ ನಾನು ಎಷ್ಟೆಲ್ಲಾ ಚಿದಂಬರ ರಹಸ್ಯದ ಬಗೆಗೆ ಹೇಳಿದ ನಂತರವೂ  ಅದರ ಹೊರರೂಪವನ್ನಷ್ಟೇ ಹೇಳಲಾಗುವುದು ಎಂಬುದೂ ಅಷ್ಟೇ ಸತ್ಯ.

ಚಿದಂಬರಂನ ದೇವಾಲಯದ ಒಳಭಾಗದಲ್ಲಿರುವ ಕನಕಸಭಾದಲ್ಲಿ ದೇವರ-ವಿಶಿಷ್ಟ ಶಕ್ತಿಯ ನಿಗೂಢತೆಯನ್ನು, ನಿರಾಕಾರವನ್ನು ಪ್ರತಿಬಿಂಬಿಸುವ ಒಂದು ಅಮೂರ್ತ ಕಲ್ಪನೆಯನ್ನು ಕಾಣುತ್ತೇವೆ. ಇಲ್ಲಿ ಯಾವುದೇ ದೇವರ ಮೂರ್ತಿಯೂ ಇಲ್ಲ, ಚಿನ್ನದ ಬಿಲ್ವಪತ್ರೆಯ ಹಾರವೊಂದನ್ನು ತೆರೆಯೊಂದಕ್ಕೆ ತೂಗಿಬಿಡಲಾಗಿದೆಯಷ್ಟೇ. ಬಹುಶಃ ಹಿಂದೂ ದೇವಾಲಯಗಳಲ್ಲಿ ಇನ್ನೆಲ್ಲಿಯೂ ಇಂತಹ ವಿಶಿಷ್ಟ ಕಲ್ಪನೆಯನ್ನು ಕಾಣಲಾಗುವುದಿಲ್ಲ. ಈ ಕನಕ ಸಭಾವನ್ನು ಪ್ರವೇಶಿಸಿದ ಪ್ರತಿಯೊಬ್ಬ ವ್ಯಕ್ತಿಯೂ ದೈವದ ಅಸ್ತಿತ್ವದ ಬಗೆಗೆ, ನಿರಾಕಾರ ವಿಶಿಷ್ಟ ಶಕ್ತಿ ಕುರಿತು, ಕೆಲ ಕ್ಷಣಗಳಾದರೂ ಯೋಚಿಸುವಂತೆ ಮಾಡುತ್ತದೆ. ಹಾಗೇ ಅವರವರ ಆಲೋಚನೆ, ವಿಚಾರ, ನಂಬಿಕೆ, ಭಕ್ತಿ, ಭಾವಗಳಿಗನುಗುಣವಾಗಿ ನಿರಾಕಾರ ಶಕ್ತಿಯನ್ನು ಕಲ್ಪಿಸಿಕೊಂಡು ವಿಶಿಷ್ಟ ಅನುಭೂತಿಯನ್ನು ಪಡೆಯಲು ಸಾಧ್ಯವಿದೆ. ಸಖಿ, ಈ ಸೃಷ್ಟಿ, ಅದರಲ್ಲಿನ ಈ ಜೀವಿಗಳು, ಅವುಗಳ ಪೂರ್ವಪರಗಳು, ಬದುಕಿನ ಒಳಮರ್ಮ, ಅದರ ಉಪದೇಶ, ಸೃಷ್ಟಿ ರಹಸ್ಯ, ಹುಟ್ಟುಸಾವಿನ ನಿಗೂಢ ಹೀಗೆ ಈ ಕ್ಷಣ, ಇದರ ಅರ್ಥವೆಲ್ಲವನ್ನು ಕುರಿತು ಆಲೋಚಿಸುತ್ತಾ ಹೋದಷ್ಟು ಈ ಬ್ರಹ್ಮಾಂಡವೆಂಬುದೊಂದು ಚಿದಂಬರ ರಹಸ್ಯದ ಗೋಲವೆಂದು ಗೋಚರಿಸುತ್ತಾ ಹೋಗುತ್ತದೆ. ಇಂತಹ ನೂರಾರು ನಿಗೂಢ ಪ್ರಶ್ನೆಗಳಿಗೆ ಉತ್ತರಗಳನ್ನು ಎಂದೆಂದಿಗೂ ಕಂಡುಹಿಡಿಯಲಾಗದ ಅಲ್ಪಮತಿ ಮನುಷ್ಯ ತಾನೇ ಮಹಾನ್ ವಿವೇಕಿ, ಬುದ್ಧಿವಂತ, ಜ್ಞಾನಿ ಎಂದು ಬೀಗುತ್ತಾನೆ. ಬದುಕು ಎಂದೆಂದಿಗೂ ಬಿಡಿಸಲಾಗದ ಚಿದಂಬರ ರಹಸ್ಯ ಎಂದರಿಯದೇ ನಮ್ಮ ನಮ್ಮ ಮಿತಿಗಳಲ್ಲಿ ಮಾತ್ರ ಇದು. ಇಷ್ಟೇ, ಹೀಗೆ ಎಂಬ ಚೌಕಟ್ಟು ಹಾಕಿಕೊಂಡು ಅಹಂನಿಂದ ಬೀಗುವ ನಾವು ನಿಜಕ್ಕೂ ಮಹಾನ್ ಮೂರ್ಖರಲ್ಲವೇ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...