Home / ಲೇಖನ / ಇತರೆ / ಚಿದಂಬರ ರಹಸ್ಯ

ಚಿದಂಬರ ರಹಸ್ಯ

Natarajaಪ್ರಿಯ ಸಖಿ,
ತಮಿಳುನಾಡಿನ ಚಿದಂಬರಂನ ನಟರಾಜನ ದೇವಸ್ಥಾನ ದಕ್ಷಿಣ ಭಾರತದ ದೇವಸ್ಥಾನಗಳಲ್ಲೇ ವಿಶಿಷ್ಟ ಸ್ಥಾನವನ್ನು ಹೊಂದಿದೆ. ೯ನೇ ಶತಮಾನದಲ್ಲಿ ಚೋಳರಿಂದ ಕಟ್ಟಲ್ಪಟ್ಟ ಈ ದೇವಾಲಯ ೪೦ ಎಕರೆ ವಿಸ್ತೀರ್ಣ ಹೊಂದಿದೆ. ಇಲ್ಲಿ ದೇವರು ಅಥವಾ ಶಕ್ತಿಯೆನ್ನುವುದನ್ನು ಆಕಾಶಕ್ಕೆ ಹೋಲಿಸಲಾಗಿದೆ.

ಚಿದ್+ಅಂಬರ ಎಂದರೆ ಜ್ಞಾನ + ಆಕಾಶ ಎಂದಾಗುತ್ತದೆ. ಆಕಾಶದಷ್ಟು ಅನಂತವಾಗಿರುವ ಜ್ಞಾನವನ್ನು ಹೊಂದಿರುವುದೇ ನಮ್ಮೆಲ್ಲರ ಸೃಷ್ಟಿಗೆ ಕಾರಣವಾಗಿರುವ ಶಕ್ತಿಯ ವಿಶೇಷತೆ. ಅದನ್ನಿಲ್ಲಿ ಎರಡು ರೂಪಗಳಲ್ಲಿ ವಿಶೇಷವಾಗಿ ಬಿಂಬಿಸಲಾಗಿದೆ. ಇಲ್ಲಿರುವ ಮುಖ್ಯ ನಟರಾಜಮೂರ್ತಿ ಆನಂದತಾಂಡವ ರೂಪದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದೆ. ಇದು ಜೀವನದ ಉತ್ಸಾಹಕ್ಕೆ ಪ್ರೇರಕವಾಗಿದೆ. ಹಾಗೇ ರುದ್ರತಾಂಡವ ನಟರಾಜಮೂರ್ತಿಯೂ ಇಲ್ಲಿದೆ. ಇದನ್ನು ಸೃಷ್ಠಿಯಲ್ಲಿ ಕೆಡುಕಿನ ಸಮಯದಲ್ಲಿ ದೈವ ಶಕ್ತಿಯ ರುದ್ರತಾಂಡವಕ್ಕೆ ಹೋಲಿಸಲಾಗಿದೆ. ನಟರಾಜನನ್ನು ಸೃಷ್ಠಿಕ್ರಿಯೆ, ರಕ್ಷಣೆ, ಲಯ, ಸ್ಥಿತಿ ಹಾಗೂ ಕೃಪೆಗೆ ಸಾಕ್ಷಾತ್ಕಾರವಾಗಿ ಮೂರ್ತೀಕರಿಸಲಾಗುತ್ತದೆ. ನಟರಾಜ ನೃತ್ಯಗುರುವೂ ಹೌದು. ಈ ದೇವಾಲಯದಲ್ಲೇ ೧೦೮ ನೃತ್ಯಭಂಗಿಯ ನಟರಾಜನನ್ನು ಕೆತ್ತಲಾಗಿದೆ. ಇಂತಹ ಅಪೂರ್ವಭಂಗಿಗಳು ಇನ್ನಾವ ದೇವಾಲಯದಲ್ಲೂ ಇಲ್ಲ ಎಂದು ಹೇಳಲಾಗುತ್ತದೆ.

ಸಖಿ, ಇದೇನು ಎಂದೂ ಇಲ್ಲದೆ ದೇವಸ್ಥಾನದ ಇತಿಹಾಸದ ಕಥೆ ಹೇಳಹೊರಟಿದ್ದಾಳೆ? ಇಷ್ಟೆಲ್ಲಾ ಹೇಳಿಯೂ ಚಿದಂಬರ ರಹಸ್ಯ ಎಂದೇನೆಂದು ಹೇಳಲೇ ಇಲ್ಲವೆನ್ನುತ್ತೀಯಾ ? ರಹಸ್ಯವನ್ನು ಏನೂ ಪೀಠಿಕೆ ಇಲ್ಲದೇ ಹೇಳಿಬಿಡಲಾಗುತ್ತದೆಯೇ? ಆದರೆ ನಾನು ಎಷ್ಟೆಲ್ಲಾ ಚಿದಂಬರ ರಹಸ್ಯದ ಬಗೆಗೆ ಹೇಳಿದ ನಂತರವೂ  ಅದರ ಹೊರರೂಪವನ್ನಷ್ಟೇ ಹೇಳಲಾಗುವುದು ಎಂಬುದೂ ಅಷ್ಟೇ ಸತ್ಯ.

ಚಿದಂಬರಂನ ದೇವಾಲಯದ ಒಳಭಾಗದಲ್ಲಿರುವ ಕನಕಸಭಾದಲ್ಲಿ ದೇವರ-ವಿಶಿಷ್ಟ ಶಕ್ತಿಯ ನಿಗೂಢತೆಯನ್ನು, ನಿರಾಕಾರವನ್ನು ಪ್ರತಿಬಿಂಬಿಸುವ ಒಂದು ಅಮೂರ್ತ ಕಲ್ಪನೆಯನ್ನು ಕಾಣುತ್ತೇವೆ. ಇಲ್ಲಿ ಯಾವುದೇ ದೇವರ ಮೂರ್ತಿಯೂ ಇಲ್ಲ, ಚಿನ್ನದ ಬಿಲ್ವಪತ್ರೆಯ ಹಾರವೊಂದನ್ನು ತೆರೆಯೊಂದಕ್ಕೆ ತೂಗಿಬಿಡಲಾಗಿದೆಯಷ್ಟೇ. ಬಹುಶಃ ಹಿಂದೂ ದೇವಾಲಯಗಳಲ್ಲಿ ಇನ್ನೆಲ್ಲಿಯೂ ಇಂತಹ ವಿಶಿಷ್ಟ ಕಲ್ಪನೆಯನ್ನು ಕಾಣಲಾಗುವುದಿಲ್ಲ. ಈ ಕನಕ ಸಭಾವನ್ನು ಪ್ರವೇಶಿಸಿದ ಪ್ರತಿಯೊಬ್ಬ ವ್ಯಕ್ತಿಯೂ ದೈವದ ಅಸ್ತಿತ್ವದ ಬಗೆಗೆ, ನಿರಾಕಾರ ವಿಶಿಷ್ಟ ಶಕ್ತಿ ಕುರಿತು, ಕೆಲ ಕ್ಷಣಗಳಾದರೂ ಯೋಚಿಸುವಂತೆ ಮಾಡುತ್ತದೆ. ಹಾಗೇ ಅವರವರ ಆಲೋಚನೆ, ವಿಚಾರ, ನಂಬಿಕೆ, ಭಕ್ತಿ, ಭಾವಗಳಿಗನುಗುಣವಾಗಿ ನಿರಾಕಾರ ಶಕ್ತಿಯನ್ನು ಕಲ್ಪಿಸಿಕೊಂಡು ವಿಶಿಷ್ಟ ಅನುಭೂತಿಯನ್ನು ಪಡೆಯಲು ಸಾಧ್ಯವಿದೆ. ಸಖಿ, ಈ ಸೃಷ್ಟಿ, ಅದರಲ್ಲಿನ ಈ ಜೀವಿಗಳು, ಅವುಗಳ ಪೂರ್ವಪರಗಳು, ಬದುಕಿನ ಒಳಮರ್ಮ, ಅದರ ಉಪದೇಶ, ಸೃಷ್ಟಿ ರಹಸ್ಯ, ಹುಟ್ಟುಸಾವಿನ ನಿಗೂಢ ಹೀಗೆ ಈ ಕ್ಷಣ, ಇದರ ಅರ್ಥವೆಲ್ಲವನ್ನು ಕುರಿತು ಆಲೋಚಿಸುತ್ತಾ ಹೋದಷ್ಟು ಈ ಬ್ರಹ್ಮಾಂಡವೆಂಬುದೊಂದು ಚಿದಂಬರ ರಹಸ್ಯದ ಗೋಲವೆಂದು ಗೋಚರಿಸುತ್ತಾ ಹೋಗುತ್ತದೆ. ಇಂತಹ ನೂರಾರು ನಿಗೂಢ ಪ್ರಶ್ನೆಗಳಿಗೆ ಉತ್ತರಗಳನ್ನು ಎಂದೆಂದಿಗೂ ಕಂಡುಹಿಡಿಯಲಾಗದ ಅಲ್ಪಮತಿ ಮನುಷ್ಯ ತಾನೇ ಮಹಾನ್ ವಿವೇಕಿ, ಬುದ್ಧಿವಂತ, ಜ್ಞಾನಿ ಎಂದು ಬೀಗುತ್ತಾನೆ. ಬದುಕು ಎಂದೆಂದಿಗೂ ಬಿಡಿಸಲಾಗದ ಚಿದಂಬರ ರಹಸ್ಯ ಎಂದರಿಯದೇ ನಮ್ಮ ನಮ್ಮ ಮಿತಿಗಳಲ್ಲಿ ಮಾತ್ರ ಇದು. ಇಷ್ಟೇ, ಹೀಗೆ ಎಂಬ ಚೌಕಟ್ಟು ಹಾಕಿಕೊಂಡು ಅಹಂನಿಂದ ಬೀಗುವ ನಾವು ನಿಜಕ್ಕೂ ಮಹಾನ್ ಮೂರ್ಖರಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...